Get Updates
Get notified of breaking news, exclusive insights, and must-see stories!

ಕೇರಳ ಪಟಾಕಿ ದುರಂತ, 5 ಜನರ ಬಂಧನ

ತಿರುವನಂತಪುರಂ, ಏಪ್ರಿಲ್ 11 : ಕೇರಳದ ಕೊಲ್ಲಂ ಜಿಲ್ಲೆಯ ಪರವೂರ್‌ನ ದೇವಾಲಯದಲ್ಲಿ ನಡೆದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಐದು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಅಗ್ನಿ ದುರಂತದಲ್ಲಿ 100ಕ್ಕೂ ಅಧಿಕ ಭಕ್ತರು ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. [ಕೇರಳ ದುರಂತದ ಚಿತ್ರಗಳು]

ಭಾನುವಾರ ಮುಂಜಾನೆ 3.30ರ ಸುಮಾರಿಗೆ ನಡೆದ ಅಗ್ನಿ ದುರಂತದ ಬಗ್ಗೆ ತನಿಖೆ ನಡೆಸುತ್ತಿರುವ ಕೇರಳ ಪೊಲೀಸರು, ಪಟಾಕಿ ತಂದಿದ್ದ ಐವರನ್ನು ಬಂಧಿಸಿದ್ದಾರೆ. ದೇವಾಲಯದ ಆಡಳಿತ ಮಂಡಳಿಯ ಇತರ ಕೆಲವು ಸದಸ್ಯರಿಗಾಗಿ ಹುಡುಕಾಟ ಮುಂದುವರೆದಿದೆ. [ಪಟಾಕಿ ಸಿಡಿದು ಭಾರೀ ಅಗ್ನಿ ದುರಂತ, 105 ಸಾವು]

kerala

ಪಂಕಜಾಕ್ಷಿ ಅವರು ನೀಡಿದ ದೂರಿನ ಅನ್ವಯ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿತ್ತು. ಆದರೆ, ರಾತ್ರೋರಾತ್ರಿ ನಿಷೇಧವನ್ನು ವಾಪಸ್ ಪಡೆಯಲಾಗಿತ್ತು. ನಿಷೇಧ ವಾಪಸ್ ಪಡೆದ ಬಗ್ಗೆಯೂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪಂಕಜಾಕ್ಷಿ ಅವರ ಮನೆಗೂ ದುರಂತದಲ್ಲಿ ಹಾನಿಯಾಗಿದೆ. [ದೇವರ ನಾಡು ಕೇರಳದ ಮೇಲೆ ಮೂಕಾಂಬಿಕೆಯ ಮುನಿಸು!]

ದೇವಾಲಯದಿಂದ ಸುಮಾರು 50 ಮೀಟರ್ ದೂರದಲ್ಲಿ ವಾಸವಾಗಿರುವ 80 ವರ್ಷದ ಪಂಕಜಾಕ್ಷಿ ಅವರು ಕಳೆದ 4 ವರ್ಷಗಳಿಂದ ಪಟಾಕಿ ಸಿಡಿಸಬಾರದು ಎಂದು ದೂರು ನೀಡುತ್ತಲೇ ಇದ್ದಾರೆ. ಈ ಬಾರಿಯು ಅವರು ದೂರು ಕೊಟ್ಟಿದ್ದರು. ಆಗ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿತ್ತು. [ಕೇರಳ ಪಟಾಕಿ ಅವಘಡದ ಕರಾಳ ಚಿತ್ರಗಳು]

ಆದರೆ, ಅಗ್ನಿ ಅವಘಡ ಸಂಭವಿಸಿದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ಅಧಿಕಾರಿಗಳು ಹೇಳಿದ ಬಳಿಕ ನಿಷೇಧವನ್ನು ತೆರೆವುಗೊಳಿಸಲಾಗಿತ್ತು. ಪಟಾಕಿ ಸಿಡಿಸಲೆಂದೇ ಐದಕ್ಕೂ ಹೆಚ್ಚು ಜನರು ಆಗಮಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+