ಕೇರಳ ಸರ್ಕಾರದಿಂದ ಹಿಂದೂ ದೇವಾಲಯಗಳಲ್ಲಿ ಮಹತ್ವದ ಬದಲಾವಣೆ, ಏನದು ?
ಕೇರಳದ ಕಮ್ಯುನಿಸ್ಟ್ ಸರ್ಕಾರವು ದೇವಾಲಯಗಳಲ್ಲಿ ಮಹತ್ವದ ಬದಲಾವಣೆಯೊಂದನ್ನು ತರಲು ಮುಂದಾಗಿದೆ. ಇದು ಸಹಜವಾಗಿಯೇ ಚರ್ಚೆಗೆ ಕಾರಣವಾಗಿದ್ದು, ಹಿಂದೂ ಹಾಗೂ ಹಿಂದೂ ಭಕ್ತಾಧಿಗಳ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಸಾಮಾನ್ಯವಾಗಿ ಕರ್ನಾಟಕದ ಕೆಲವು ಪ್ರಮುಖ ದೇವಾಲಯಗಳು ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಪುರುಷರು ತಮ್ಮ ಶರ್ಟ್ ತೆಗೆದು ಹೋಗುವ ಪದ್ಧತಿ ಇದೆ.
ಕರ್ನಾಟಕದ ಪ್ರಮುಖ ದೇವಸ್ಥಾನಗಳಲ್ಲಿ ಈ ಪದ್ಧತಿ ಇದೆ. ಕೇರಳದಲ್ಲಿ ಇದು ವ್ಯಾಪಕವಾಗಿದೆ. ದೊಡ್ಡ ದೊಡ್ಡ ದೇವಸ್ಥಾನಗಳಲ್ಲಿ ಮಾತ್ರವಲ್ಲ ಸಣ್ಣ ದೇವಸ್ಥಾನಗಳಲ್ಲೂ ಈ ಪದ್ಧತಿ ಆಚರಣೆಯಲ್ಲಿ ಇದೆ. ಇದೀಗ ದೇವಸ್ಥಾನಗಳಿಗೆ ಪ್ರವೇಶಿಸುವಾಗ ಪುರುಷರು ಶರ್ಟ್ ತೆಗೆಯಬೇಕು ಎನ್ನವು ನಿಯಮವನ್ನು ತೆಗೆದು ಹಾಕುವುದಕ್ಕೆ ಸಂಬಂಧಿಸಿದಂತೆ ಕೇರಳ ದೇವಸ್ವಂ ಮಂಡಳಿಯು ಚಿಂತನೆ ನಡೆಸಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹೇಳಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

ಕೇರಳದಲ್ಲಿ ಸಾವಿರಾರು ದೇವಾಲಯಗಳು ಇವೆ. ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಹಿಂದೂ ದೇವಾಲಯ ಹಾಗೂ ಹಿಂದೂ ಸಂಪ್ರದಾಯದ ವಿಚಾರವಾಗಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಕಳೆದ ವರ್ಷ ತ್ರಿಶೂರ್ ಪೂರಂ ಉತ್ಸವದಲ್ಲಿನ ಘಟನೆ ಭಾರೀ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿತ್ತು. ಈ ವಿಚಾರದಲ್ಲಿ ಕೇರಳ ಸರ್ಕಾರ ನಡೆದುಕೊಂಡ ರೀತಿಗೆ ಪರ - ವಿರೋಧ ವ್ಯಕ್ತವಾಗಿತ್ತು. ಇನ್ನು ಇದೀಗ ಹೊಸ ನಿಯಮ ಜಾರಿ ಮಾಡಲು ಕೇರಳ ಸರ್ಕಾರ ಮುಂದಡಿ ಇರಿಸಿದೆ. ಈ ಸಂಬಂಧ ಮಾತನಾಡಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಈ ಸಂಬಂಧ ಚಿಂತನೆ ನಡೆದಿದೆ ಎಂದಿದ್ದಾರೆ.
ಸಮಾಜ ಸುಧಾರಕರಾದ ಶ್ರೀ ನಾರಾಯಣ ಗುರು ಅವರು ಶಿವಗಿರಿ ಮಠವನ್ನು ಸ್ಥಾಪಿಸಿದ್ದರು. ಈ ದೇವಸ್ಥಾನದ ಮುಖ್ಯಸ್ಥರಾದ ಸ್ವಾಮಿ ಸಚ್ಚಿದಾನಂದ ಅವರು, ಈಚೆಗೆ ಪುರುಷರು ಶರ್ಟ್ ಅಥವಾ ಮೇಲ್ವಸ್ತ್ರ ತೆಗೆಯುವ ಪದ್ಧತಿ ಸಾಮಾಜಿಕ ಅನಿಷ್ಟವಾಗಿದೆ ಎಂದಿದ್ದರು. ಅಲ್ಲದೆ ಈ ಪದ್ಧತಿಯನ್ನು ನಿರ್ಮೂಲನೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಅವರು ಈ ಹೇಳಿಕೆ ಕೊಟ್ಟ ಮೇಲೆ ಕೇರಳದಲ್ಲಿ ಈ ವಿಷಯ ಭಾರೀ ಚರ್ಚೆಗೆ ಕಾರಣವಾಗಿದೆ.
ಚಿಂತನೆ ನಡೆದಿದೆ: ಕೇರಳ ಸರ್ಕಾರವು ಈ ವಿಚಾರವಾಗಿ ಚಿಂತನೆ ನಡೆದಿದೆ ಎಂದು ಹೇಳಿದೆ. ದೇವಸ್ವಂ ಮಂಡಳಿಯ ಪ್ರತಿನಿಧಿಯೊಬ್ಬರು ನನ್ನನ್ನು ಭೇಟಿ ಮಾಡಿದ್ದರು. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎಂದಿದ್ದಾರೆ. ಅಲ್ಲದೆ ಇದು ಬೆಳ್ಳೆಯ ಬೆಳವಣಿಗೆ ಎಂದು ನಾನು ಸಹ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹೇಳಿದ್ದರು.
ಐದು ಪ್ರಮುಖ ದೇವಸ್ವಂ: ಕೇರಳದಲ್ಲಿ ಪ್ರಮುಖವಾಗಿ ಐದು ದೇವಸ್ವಂ ಇವೆ. ಅದರಲ್ಲಿ ತಿರುವಾಂಕೂರ್, ಮಲಬಾರ್, ಕೊಚ್ಚಿನ್, ಗುರುವಾಯೂರ್ ಹಾಗೂ ಕೂಡಲ್ಮಾಣಿಕ್ಯಂ ಎನ್ನುವ ದೇವಸ್ವಂಗಳು ಇವೆ. ಇನ್ನು ಐದು ದೇವಸ್ವಂಗಳಲ್ಲಿ ಯಾವ ದೇವಸ್ವಂನಿಂದ ಈ ಬಗ್ಗೆ ಪ್ರಸ್ತಾವನೆ ಬಂದಿದೆ ಎನ್ನುವುದನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ಪಷ್ಟಪಡಿಸಿಲ್ಲ. ಅಲ್ಲದೆ ಕೇರಳದಲ್ಲಿ ಈ ದೇವಸ್ವಂಗಳ ಅಡಿಯಲ್ಲಿ 3,000 ದೇವಾಲಯಗಳು ಬರುತ್ತವೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications