Get Updates
Get notified of breaking news, exclusive insights, and must-see stories!

Kerala Boat Tragedy: ಕೇರಳ ಪ್ರವಾಸಿ ದೋಣಿ ದುರಂತ: 22 ಜನ ಸಾವು, ಹಲವರು ನಾಪತ್ತೆ!

ಮಲಪ್ಪುರಂ ಮೇ 8: ಕೇರಳದ ಮಲಪ್ಪುರಂ ಜಿಲ್ಲೆಯ ಕಡಲತೀರದ ಬಳಿ ಭಾನುವಾರ ಸಂಜೆ ಡಬಲ್ ಡೆಕ್ಕರ್ ದೋಣಿ ಮುಳುಗಿ ಏಳು ಮಕ್ಕಳು ಸೇರಿದಂತೆ 22 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ತಾನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬೋಟ್ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೋಣಿಯಲ್ಲಿದ್ದ ಪ್ರಯಾಣಿಕರ ನಿಖರ ಸಂಖ್ಯೆ ಇನ್ನೂ ತಿಳಿದಿಲ್ಲವಾದರೂ, 40 ಮಂದಿ ಟಿಕೆಟ್‌ಗಳನ್ನು ಹೊಂದಿದ್ದರು. ಅನೇಕರು ಸಂಬಂಧಿಕರನ್ನು ಹೊಂದಿರಲಿಲ್ಲ. ಏಕಾಂಗಿಯಾಗಿ ಪ್ರಯಣ ಮಾಡುತ್ತಿದ್ದರು. ದೋಣಿಗೆ ಸುರಕ್ಷತಾ ಪ್ರಮಾಣ ಪತ್ರವೂ ಇರಲಿಲ್ಲ ಎಂದು ವರದಿಯಾಗಿದೆ.

Kerala tourist boat disaster: 22 dead, many missing!

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನೂ ನಾಪತ್ತೆಯಾದವರನ್ನು ಪತ್ತೆ ಹಚ್ಚಲು ನೀರೊಳಗಿನ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ.

ಈ ಘಟನೆಗೆ ರಾಜಕೀಯ ವಲಯದಾದ್ಯಂತ ನಾಯಕರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಮೃತರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

"ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಿಂದಾದ ಪ್ರಾಣಹಾನಿಯಿಂದ ನೋವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ. PMNRF (ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿ) ನಿಂದ 2 ಲಕ್ಷ ಪರಿಹಾರವನ್ನು ನಿಧನರಾದವರ ಪ್ರತಿಯೊಬ್ಬರ ಸಂಬಂಧಿಕರಿಗೆ ನೀಡಲಾಗುವುದು"ಎಂದು ಪ್ರಧಾನ ಮಂತ್ರಿ ಕಚೇರಿ ಭಾನುವಾರ ಸಂಜೆ ಟ್ವೀಟ್ ಮಾಡಿದೆ.

ಕಾಂಗ್ರೆಸ್ ನಾಯಕ ಮತ್ತು ಮಾಜಿ ವಯನಾಡ್ ಸಂಸದ ರಾಹುಲ್ ಗಾಂಧಿ ಕೂಡ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

"ಕೇರಳದ ಮಲಪ್ಪುರಂನಲ್ಲಿ ಹೌಸ್ ಬೋಟ್ ಮುಳುಗಿದ ಸುದ್ದಿಯಿಂದ ದಿಗ್ಭ್ರಮೆಗೊಂಡಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಹೃತ್ಪೂರ್ವಕ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಧಿಕಾರಿಗಳಿಗೆ ಸಹಾಯ ಮಾಡುವಂತೆ ನಾನು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ'' ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇಂದು ಸ್ಥಳಕ್ಕೆ ಭೇಟಿ ನೀಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಘೋಷಿಸಿದ್ದು, ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಪೊಲೀಸ್, ಅಗ್ನಿಶಾಮಕ ಮತ್ತು ಆರೋಗ್ಯಾಧಿಕಾರಿಗಳು ಸ್ಥಳೀಯರೊಂದಿಗೆ ತಾನೂರಿನಿಂದ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಸಂತ್ರಸ್ತರಿಗೆ ಗೌರವ ಸೂಚಕವಾಗಿ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡುವುದರೊಂದಿಗೆ ಸೋಮವಾರವನ್ನು ಶೋಕಾಚರಣೆಯ ದಿನವನ್ನಾಗಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಘೋಷಿಸಿದರು. ಪೊಲೀಸರ ಪ್ರಕಾರ, ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+