ಕೇರಳದ ಮಾಜಿ ಸಚಿವ ಶಶೀಂದ್ರನ್ ಹನಿ ಟ್ರ್ಯಾಪಿಗೆ ಬಲಿಯಾದರೆ?
ಮಹಿಳೆಯೊಂದಿಗೆ ಅಶ್ಲೀಲ ಮಾತುಕತೆ ನಡೆಸಿದ ಆರೋಪದ ಮೇಲೆ ರಾಜೀನಾಮೆ ನೀಡಿರುವ ಕೇರಳದ ಮಾಜಿ ಸಚಿವ ಶಶೀಂದ್ರನ್ ಅವರ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಇದೊಂದು ಹನಿ ಟ್ರ್ಯಾಪ್ ಎಂದು ವರದಿ ಬಂದಿದೆ.
ತಿರುವನಂತಪುರಂ, ಮಾರ್ಚ್ 30: ಮಹಿಳೆಯೊಂದಿಗೆ ಅಶ್ಲೀಲ ಮಾತುಕತೆ ನಡೆಸಿದ ಆರೋಪದ ಮೇಲೆ ರಾಜೀನಾಮೆ ನೀಡಿರುವ ಕೇರಳದ ಮಾಜಿ ಸಚಿವ ಶಶೀಂದ್ರನ್ ಅವರ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಇದೊಂದು ಹನಿ ಟ್ರ್ಯಾಪ್ ಎಂದು ಫೇಸ್ ಬುಕ್ ನಲ್ಲಿ ವರದಿಗಾರೊಬ್ಬರು ಹಾಕಿಕೊಂಡಿದ್ದಾರೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಾಗಿದೆ.
ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಫೋನ್ ಕರೆ ಮಾಡಿ ಅಶ್ಲೀಲ ಮಾತುಗಳನ್ನಾಡಿ ಕಿರುಕುಳ ನೀಡಿದ ಆರೋಪವನ್ನು ಸಚಿವ ಸಸೀಂದ್ರನ್ ಹೊತ್ತಿದ್ದಾರೆ. ಈ ಕುರಿತಂತೆ ಮಂಗಳ ಟಿವಿ, ಆಡಿಯೋ ಕ್ಲಿಪ್ ಪ್ರಸಾರ ಮಾಡಿತ್ತು.

ನಂತರ ಸುದ್ದಿಗೋಷ್ಠಿ ನಡೆಸಿ, ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದರು. ಈಗ ಅದೇ ಚಾನೆಲ್ ನ ಮಾಜಿ ವರದಿಗಾರರೊಬ್ಬರು, ಈ ಇಡೀ ಪ್ರಸಂಗದ ಬಗ್ಗೆ ವಿವರಣೆ ನೀಡಿ, ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾರೆ. ಇದೊಂದು ಹನಿ ಟ್ರ್ಯಾಪ್ ಪ್ರಕರಣ ಎಂದಿದ್ದಾರೆ.
ಮಂಗಳಂ ಸುದ್ದಿವಾಹಿನಿಯ ಮಾಜಿ ಉದ್ಯೋಗಿ ಅಲ್ ನೀಮಾ ಅಶ್ರಫ್ ಅವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಫೇಸ್ ಬುಕ್ ಪೋಸ್ಟ್ ಆಧಾರವಾಗಿಟ್ಟುಕೊಂಡು ಸತ್ಯಾಸತ್ಯತೆ ಬಯಲಿಗೆಳೆಯುವಂತೆ ಪತ್ರಕರ್ತೆಯರ ಸಮೂಹವೊಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಹನಿ ಟ್ರ್ಯಾಪ್?: ಚಾನೆಲ್ ನ ಬಾಸ್ ಹಾಗೂ ಐವರು ವರದಿಗಾರರ ಗುಂಪು ಈ ಟ್ರ್ಯಾಪ್ ಸಂಚು ರೂಪಿಸಿದ್ದು, ಸಚಿವ ಶಶೀಂದ್ರನ್ ಅಲ್ಲದೆ ಇನ್ನೂ ಅನೇಕ ವಿವಿಐಪಿಗಳು ಇವರ ಟಾರ್ಗೆಟ್ ಪಟ್ಟಿಯಲ್ಲಿದ್ದಾರೆ ಎಂದು ನೀಮಾ ಹೇಳಿದ್ದಾರೆ. ಸುಮಾರು 6 ತಿಂಗಳಿನಿಂದ ಈ ಟ್ರ್ಯಾಪ್ ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ. ಚಾನೆಲ್ ನ ಮೌಲ್ಯರಹಿತ ವರದಿಗಾರಿಕೆಗೆ ಬೇಸತ್ತು ರಾಜೀನಾಮೆ ಸಲ್ಲಿಸಿ, ಹೊರಬಂದೆ ಎಂದು ನೀಮಾ ಹೇಳಿದ್ದಾರೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications