ಕೇರಳದ ಪುತ್ತುಪ್ಪಲ್ಲಿ ಉಪಚುನಾವಣೆಯಲ್ಲಿ ಚಾಂಡಿ ಉಮ್ಮನ್ ಗೆಲುವು: ಬರಿಗಾಲಲ್ಲಿ ಪಾದಯಾತ್ರೆ ಆರಂಭಿಸಿದ ಮಾಜಿ ಸಿಎಂ ಪುತ್ರ
ಕೊಟ್ಟಾಯಂ, ಸೆಪ್ಟೆಂಬರ್ 09: ಕೇರಳದ ಪುತ್ತುಪ್ಪಲ್ಲಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಾಂಡಿ ಉಮ್ಮನ್ ಭಾರಿ ಬಹುಮತದಿಂದ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಂಡಿ ಉಮ್ಮನ್ ಅವರು ಶನಿವಾರ ಬೆಳಗ್ಗೆ ತಮ್ಮ ಕ್ಷೇತ್ರದಲ್ಲಿ ಬರಿಗಾಲಿನ ಪಾದಯಾತ್ರೆ ಆರಂಭಿಸಿದ್ದಾರೆ. ಸೋಮವಾರ ಕೇರಳ ವಿಧಾನಸಭೆಯಲ್ಲಿ ಉಮ್ಮನ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಉಮ್ಮನ್ ಅವರು ತಮ್ಮ ಮತದಾರರಿಗೆ ವೈಯಕ್ತಿಕವಾಗಿ ಧನ್ಯವಾದ ಅರ್ಪಿಸಲು ಬೆಳಗ್ಗೆ 9 ಗಂಟೆಗೆ ಪಾದಯಾತ್ರೆ ಆರಂಭಿಸಿದ್ದಾರೆ. ವಾಕಥಾನಂನಿಂದ ಅಕಲಕುನ್ನಂ ವರೆಗೆ ಪಾದಯಾತ್ರೆ ನಡೆಯಲಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಚಾಂಡಿ ಉಮ್ಮನ್ ಅವರು ಬರಿಗಾಲಲ್ಲೇ ಭಾಗವಹಿಸಿದ್ದರು. ಈ ಪಾದಯಾತ್ರೆಯ ಸಂದರ್ಭದಲ್ಲೂ ಬರಿಗಾಲಿನಲ್ಲಿ ನಡೆಯುತ್ತಿದ್ದಾರೆ.
ಚಾಂಡಿ ಉಮ್ಮನ್ ಅವರು 37,719 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ವಿಜಯೋತ್ಸವದ ಘೋಷಣೆಯ ನಂತರ ಮಾತನಾಡಿದ ಉಮ್ಮನ್, ಇದು ತಮ್ಮ ತಂದೆಯ 13 ನೇ ಗೆಲುವು ಎಂದು ಹೇಳಿದ್ದಾರೆ.

ಅವರ ತಂದೆ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಸಲಾಯಿತು. ಮಾಜಿ ಸಿಎಂ 53 ವರ್ಷಗಳ ಕಾಲ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಕೇರಳ ಇತಿಹಾಸದಲ್ಲಿ ದಾಖಲೆ ಬರೆದಿದ್ದಾರೆ.
ತಮ್ಮ ತಂದೆ ಮತ್ತು ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರೊಂದಿಗೆ ಪುತ್ತುಪ್ಪಳ್ಳಿ ಹೊಂದಿದ್ದ ಭಾವನಾತ್ಮಕ ಬಾಂಧವ್ಯದ ಮೇಲೆ ಈ ಚುನಾವಣೆ ನಡೆದಿದೆ ಎಂದು ಚಾಂಡಿ ಉಮ್ಮನ್ ಹೇಳಿದ್ದಾರೆ. ಪಿಣರಾಯಿ ವಿಜಯನ್ ಸರ್ಕಾರದ ವಿರೋಧಿ ಅಲೆಯು ಇಲ್ಲಿ ಕೆಲಸ ಮಾಡಿದೆ ಎಂದು ಹೇಳಲಾಗುತ್ತಿದೆ. 37 ವರ್ಷ ವಯಸ್ಸಿ ಉಮ್ಮನ್ ಅವರು ಶೇ 61.38 ಮತಗಳನ್ನು ಪಡೆದಿದ್ದಾರೆ. ಅವರ ಗೆಲುವಿನ ಅಂತರ 37,719 ಮತಗಳಾಗಿವೆ. 2011 ರ ವಿಧಾನಸಭಾ ಚುನಾವಣೆಯಲ್ಲಿ ಉಮ್ಮನ್ ಚಾಂಡಿ ಅವರು ಸಾರ್ವಕಾಲಿಕ ಗರಿಷ್ಠ 33,255 ಮತಗಳಿಂದ ಗೆಲುವು ಸಾಧಿಸಿದ್ದರು.
2016 ಮತ್ತು 2021 ರಲ್ಲಿ ಉಮ್ಮನ್ ಚಾಂಡಿ ವಿರುದ್ಧ ಸ್ಪರ್ಧಿಸಿದ್ದ ಸಿಪಿಐ(ಎಂ) ಅಭ್ಯರ್ಥಿ ಜೈಕ್ ಸಿ ಥಾಮಸ್ ಅವರು ಶೇ 32.49 ಮತಗಳನ್ನು ಗಳಿಸುವಲ್ಲಿ ಸಫಲರಾಗಿದ್ದಾರೆ. ಬಿಜೆಪಿಯ ಜಿ ಲಿಜಿನ್ ಲಾಲ್ ಅವರು ಕೇವಲ ಶೇ 5.02 ಮತಗಳನ್ನು ಗಳಿಸುವುದರೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
37ರ ಹರೆಯದ ಯುವ ಕಾಂಗ್ರೆಸ್ ನಾಯಕ ಸೋಮವಾರ ವಿಧಾನಸಭೆಯಲ್ಲಿ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಭಾ ಟಿವಿಯಲ್ಲಿ ಕಲಾಪ ನೇರ ಪ್ರಸಾರವಾಗಲಿದೆ. ಪುತ್ತುಪ್ಪಳ್ಳಿ ಉಪಚುನಾವಣೆಯಿಂದಾಗಿ ಮೊಟಕುಗೊಂಡ ವಿಧಾನಸಭೆ ಅಧಿವೇಶನ ಸೋಮವಾರ ಪುನರಾರಂಭವಾಗಲಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications