ದಾಭೋಲ್ಕರ್ ಹತ್ಯೆಯ 5 ವರ್ಷದ ನಂತರ ಪ್ರಮುಖ ಆರೋಪಿ ಬಂಧನ
ಔರಂಗಾಬಾದ್, ಆಗಸ್ಟ್ 18 : ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರ ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ಇಂದು ಪ್ರಮುಖ ಶಂಕಿತ ಆರೋಪಿ ಸಚಿನ್ ಪ್ರಕಾಶ್ ರಾವ್ ಅಂಡುರೆ ಎಂಬುವವನನ್ನು ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಬಂಧಿಸಿದ್ದಾರೆ.
ಮೂಢನಂಬಿಕೆ ಮತ್ತು ಮಾಟಮಂತ್ರದ ವಿರುದ್ಧ ಹೋರಾಟ ನಡೆಸಿದ್ದ ವಿಚಾರವಾದಿ, ಲೇಖಕ, ಮಹಾರಾಷ್ಟ್ರ ಅಂಧಶ್ರದ್ಧಾ ನಿರ್ಮೂಲನ ಸಮಿತಿಯ ಅಧ್ಯಕ್ಷ ನರೇಂದ್ರ ಅಚ್ಯುತ್ ದಾಬೋಲ್ಕರ್ (67) ಅವರನ್ನು 2013ರ ಆಗಸ್ಟ್ 20ರಂದು ಗುಂಡು ಹಾರಿಸಿ ಹತ್ಯೆಗೈಯಲಾಗಿತ್ತು.
ಸರಿಯಾಗಿ 5 ವರ್ಷಗಳ ನಂತರ ಪ್ರಮುಖ ಆರೋಪಿಯ ಬಂಧಿನ, ಕರ್ನಾಟಕದ ಸಂಶೋಧಕ ಮತ್ತು ವಿಚಾರವಾದಿ ಡಾ. ಎಂಎಂ ಕಲಬುರ್ಗಿ, ಎಡಪಂಥೀಯ ರಾಜಕಾರಣಿ ಗೋವಿಂದ್ ಪನ್ಸಾರೆ, ಕನ್ನಡ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಮೇಲೆಯೂ ಬೆಳಕು ಚೆಲ್ಲುವ ಸಾಧ್ಯತೆಯಿದೆ.

ಐದು ವರ್ಷಗಳ ನಂತರವೂ ನರೇಂದ್ರ ದೋಭೋಲ್ಕರ್ ಹತ್ಯೆ ಮಾಡಿದವರನ್ನು ಬಂಧಿಸಲು ತನಿಖೆ ನಡೆಸಲು ವಿಫಲವಾಗಿದ್ದ ಕೇಂದ್ರ ಮತ್ತು ರಾಜ್ಯ ತನಿಖಾ ಸಂಸ್ಥೆಗಳ ಮೇಲೆ ಮುಂಬೈ ಹೈಕೋರ್ಟ್ ಕೆಂಡ ಕಾರಿತ್ತು. ಇದಾದ ಕೆಲವೇ ದಿನಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ದಾಭೋಲ್ಕರ್ ಅವರಿಗೆ 1983ರಿಂದಲೇ ಬೆದರಿಕೆ ಕರೆಗಳು ಬರುತ್ತಿದ್ದವು. ಆದರೆ, ಅವರು ಪೊಲೀಸ್ ರಕ್ಷಣೆಯನ್ನು ನಿರಾಕರಿಸಿದ್ದರು. 2013ರ ಆಗಸ್ಟ್ 20ರಂದು ಪುಣೆಯ ಓಂಕಾರೇಶ್ವರ ದೇವಸ್ಥಾನದ ಬಳಿ ಬೆಳಿಗ್ಗೆ 7.20ರ ಸುಮಾರಿಗೆ ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತರಿಬ್ಬರು ದಾಭೋಲ್ಕರ್ ಮೇಲೆ ಅತಿ ಹತ್ತಿರದಿಂದ ಗುಂಡಿನ ಮಳೆ ಸುರಿಸಿದ್ದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications