ಭೀಮ ಕೊರೆಗಾಂವ್ ಗಲಭೆಗೆ ಆರ್.ಎಸ್.ಎಸ್ ಕಾರಣ: ಮಲ್ಲಿಕಾರ್ಜುನ್ ಖರ್ಗೆ
ನವದೆಹಲಿ, ಜನವರಿ 3: ಪುಣೆಯ ಭೀಮ ಕೊರೆಗಾಂವ್ ಗಲಭೆಗೆ ಆರ್.ಎಸ್.ಎಸ್ ಕಾರಣ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ದೂರಿದ್ದಾರೆ. ಮಾತ್ರವಲ್ಲ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಯುವಕನೊಬ್ಬ ಸಾವನ್ನಪ್ಪಿರುವ ಭೀಮ ಕೊರೆಗಾಂವ್ ಗಲಭೆ ಇಂದು ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದು, ಈ ಸಂದರ್ಭ ಮಾತನಾಡಿದ ಖರ್ಗೆ, "ಆರ್.ಎಸ್.ಎಸ್ ಗೆ ಸೇರಿದ ಮೂಲಭೂತವಾದಿ ಹಿಂದೂಗಳು ಭೀಮಾ-ಕೊರೆಗಾಂವ್ ಹಿಂಸಾಚಾರದ ಹಿಂದೆ ಇದ್ದಾರೆ. ಸಮಾಜದಲ್ಲಿ ಬಿರುಕು ಮೂಡಿಸಲು ಈ ಗಲಭೆ ನಡೆಸಲಾಗಿದೆ," ಎಂದು ದೂರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಈ ವಿಚಾರದಲ್ಲಿ ತಮ್ಮ ಹೇಳಿಕೆ ನೀಡಬೇಕು ಎಂದು ಆಗ್ರಹಿಸಿರುವ ಅವರು, ಪ್ರಧಾನಿ ಮೌನವಾಗಿರುವುದು ಸರಿಯಲ್ಲ ಎಂದಿದ್ದಾರೆ.
"ಭೀಮ ಕೊರೆಗಾಂವ್ ಗಲಭೆಯ ತನಿಖೆಗೆ ಸುಪ್ರಿಂ ಕೋರ್ಟ್ ನ್ಯಾಯಾಧೀಶರನ್ನು ನೇಮಿಸಬೇಕು. ಪ್ರಧಾನಿ ಮೌನವಾಗಿದ್ದರೆ ಆಗುವುದಿಲ್ಲ, ಅವರು ಹೇಳಿಕೆ ನೀಡಬೇಕು. ಈ ರೀತಿಯ ಘಟನೆಗಳಾದಾಗ ಅವರು 'ಮೌನಿ ಬಾಬಾ' ಆಗುತ್ತಾರೆ," ಎಂದು ಖರ್ಗೆ ಟೀಕಿಸಿದ್ದಾರೆ.
ಈಗಾಗಲೇ ಪುಣೆ ಗಲಭೆಯ ಬಗ್ಗೆ ಸಿಐಡಿ ತನಿಖೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆದೇಶ ನೀಡಿದ್ದಾರೆ. ಜತೆಗೆ ಮೃತಪಟ್ಟ ಯುವಕನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನೂ ಅವರು ಘೋಷಿಸಿದ್ದಾರೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications