ವಕ್ತಾರ ಸ್ಥಾನದಿಂದ ಖುಷ್ಬೂ ತೆಗೆದು ಹಾಕಿದ ಕಾಂಗ್ರೆಸ್!
ನವದೆಹಲಿ, ಅಕ್ಟೋಬರ್ 12 : ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಿದೆ. ನಟಿ ಖುಷ್ಬೂ ಸುಂದರ್ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರೆ ಸ್ಥಾನದಿಂದ ತೆಗೆದುಹಾಕಲಾಗಿದೆ. ಇಂದು ಮಧ್ಯಾಹ್ನ ಖುಷ್ಬೂ ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಣವ್ ಝಾ ಸೋಮವಾರ ಬೆಳಗ್ಗೆ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಖುಷ್ಬೂ ಅವರನ್ನು ರಾಷ್ಟ್ರೀಯ ವಕ್ತಾರೆ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಿದ್ದಾರೆ.
2014ರಿಂದ ಕಾಂಗ್ರೆಸ್ ಪಕ್ಷದ ಜೊತೆ ಖುಷ್ಬೂ ಗುರುತಿಸಿಕೊಂಡಿದ್ದರು. ಅವರನ್ನು ರಾಷ್ಟ್ರೀಯ ವಕ್ತಾರೆಯಾಗಿ ನೇಮಿಸಲಾಗಿತ್ತು. 2021ರಲ್ಲಿ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿಯೇ ಖುಷ್ಬೂ ಬಿಜೆಪಿ ಸೇರುತ್ತಿದ್ದಾರೆ.
ಭಾನುವಾರ ಸಂಜೆಯೇ ಖುಷ್ಬೂ ದೆಹಲಿಗೆ ಆಗಮಿಸಿದ್ದಾರೆ. ಸೋಮವಾರ ಮಧ್ಯಾಹ್ನ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸಮ್ಮುಖದಲ್ಲಿ ಅವರು ಪಕ್ಷ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

ದೆಹಲಿಯಲ್ಲಿ ರಾಜಕೀಯ
ತಮಿಳುನಾಡು ರಾಜಕೀಯ ದೆಹಲಿಗೆ ಸ್ಥಳಾಂತರವಾಗಿದೆ. ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷ ಎಲ್. ಮುರುಗನ್ ಶನಿವಾರದಿಂದ ದೆಹಲಿಯಲ್ಲಿಯೇ ಇದ್ದಾರೆ. ವಿವಿಧ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. 2014ರ ತನಕ ಡಿಎಂಕೆಯಲ್ಲಿದ್ದ ಖುಷ್ಬೂ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು.

ಖುಷ್ಬೂ ಅವರಿಗೆ ಟಿಕೆಟ್ ನೀಡಿರಲಿಲ್ಲ
2019ರ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿಯಲ್ಲಿ ಖುಷ್ಬೂ ಅವರಿಗೆ ಟಿಕೆಟ್ ನೀಡಲಿಲ್ಲ. ಅಲ್ಲದೇ ರಾಜ್ಯಸಭಾ ಸ್ಥಾನವನ್ನು ನೀಡಿಲ್ಲ ಎಂದು ಖುಷ್ಬೂ ಅವರು ಅಸಮಾಧಾನಗೊಂಡಿದ್ದರು. ಕಾಂಗ್ರೆಸ್ ಸೇರಿದ್ದ ಸಮಯದಲ್ಲಿ "ಕಾಂಗ್ರೆಸ್ ಪಕ್ಷ ಮಾತ್ರವೇ ದೇಶದ ಜನರಿಗೆ ಒಳಿತು ಮಾಡಲು ಸಾಧ್ಯ ಹಾಗೂ ದೇಶವನ್ನು ಒಗ್ಗೂಡಿಸಲು ಸಾಧ್ಯ" ಎಂದು ಖುಷ್ಬೂ ಹೇಳಿದ್ದರು.

ತಮಿಳುನಾಡು ರಾಜಕೀಯ
ತಮಿಳುನಾಡು ವಿಧಾನಸಭೆ ಚುನಾವಣೆಗೆ ಇನ್ನು ಎಂಟು ತಿಂಗಳು ಬಾಕಿ ಇದೆ. ಖುಷ್ಬೂ ಅವರು ಚುನಾವಣೆ ಸಮಯದಲ್ಲಿ ಬಿಜೆಪಿ ಸೇರಲು ಹೊರಟಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಸಹ ಚುನಾವಣೆಗಾಗಿ ಕರಸತ್ತನ್ನು ಈಗ ಆರಂಭಿಸಿದೆ.

ದೇವಾಲಯವನ್ನು ಕಟ್ಟಿದ್ದರು
ಖುಷ್ಬೂ ತಮಿಳುನಾಡಿನ ಅತ್ಯಂತ ಜನಪ್ರಿಯ ನಟಿ. ರಾಜ್ಯದಲ್ಲಿ ಅವರಿಗಾಗಿಯೇ ಅಭಿಮಾನಿಗಳು ದೇವಾಲಯವನ್ನು ಕಟ್ಟಿದ್ದರು. ಟಿವಿ ಧಾರಾವಾಹಿಗಳಲ್ಲೂ ಅವರು ನಟಿಸಿದ್ದಾರೆ, ನಿರೂಪಣೆಯನ್ನು ಮಾಡಿದ್ದಾರೆ. ಸಿನಿಮಾ ವರ್ಚಸ್ಸು ರಾಜಕೀಯ ಲಾಭ ತಂದುಕೊಡಲಿದೆಯೇ? ಕಾದು ನೋಡಬೇಕು.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications