ವಕ್ತಾರ ಸ್ಥಾನದಿಂದ ಖುಷ್ಬೂ ತೆಗೆದು ಹಾಕಿದ ಕಾಂಗ್ರೆಸ್!
ನವದೆಹಲಿ, ಅಕ್ಟೋಬರ್ 12 : ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಿದೆ. ನಟಿ ಖುಷ್ಬೂ ಸುಂದರ್ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರೆ ಸ್ಥಾನದಿಂದ ತೆಗೆದುಹಾಕಲಾಗಿದೆ. ಇಂದು ಮಧ್ಯಾಹ್ನ ಖುಷ್ಬೂ ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಣವ್ ಝಾ ಸೋಮವಾರ ಬೆಳಗ್ಗೆ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಖುಷ್ಬೂ ಅವರನ್ನು ರಾಷ್ಟ್ರೀಯ ವಕ್ತಾರೆ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಿದ್ದಾರೆ.
2014ರಿಂದ ಕಾಂಗ್ರೆಸ್ ಪಕ್ಷದ ಜೊತೆ ಖುಷ್ಬೂ ಗುರುತಿಸಿಕೊಂಡಿದ್ದರು. ಅವರನ್ನು ರಾಷ್ಟ್ರೀಯ ವಕ್ತಾರೆಯಾಗಿ ನೇಮಿಸಲಾಗಿತ್ತು. 2021ರಲ್ಲಿ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿಯೇ ಖುಷ್ಬೂ ಬಿಜೆಪಿ ಸೇರುತ್ತಿದ್ದಾರೆ.
ಭಾನುವಾರ ಸಂಜೆಯೇ ಖುಷ್ಬೂ ದೆಹಲಿಗೆ ಆಗಮಿಸಿದ್ದಾರೆ. ಸೋಮವಾರ ಮಧ್ಯಾಹ್ನ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸಮ್ಮುಖದಲ್ಲಿ ಅವರು ಪಕ್ಷ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

ದೆಹಲಿಯಲ್ಲಿ ರಾಜಕೀಯ
ತಮಿಳುನಾಡು ರಾಜಕೀಯ ದೆಹಲಿಗೆ ಸ್ಥಳಾಂತರವಾಗಿದೆ. ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷ ಎಲ್. ಮುರುಗನ್ ಶನಿವಾರದಿಂದ ದೆಹಲಿಯಲ್ಲಿಯೇ ಇದ್ದಾರೆ. ವಿವಿಧ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. 2014ರ ತನಕ ಡಿಎಂಕೆಯಲ್ಲಿದ್ದ ಖುಷ್ಬೂ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು.

ಖುಷ್ಬೂ ಅವರಿಗೆ ಟಿಕೆಟ್ ನೀಡಿರಲಿಲ್ಲ
2019ರ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿಯಲ್ಲಿ ಖುಷ್ಬೂ ಅವರಿಗೆ ಟಿಕೆಟ್ ನೀಡಲಿಲ್ಲ. ಅಲ್ಲದೇ ರಾಜ್ಯಸಭಾ ಸ್ಥಾನವನ್ನು ನೀಡಿಲ್ಲ ಎಂದು ಖುಷ್ಬೂ ಅವರು ಅಸಮಾಧಾನಗೊಂಡಿದ್ದರು. ಕಾಂಗ್ರೆಸ್ ಸೇರಿದ್ದ ಸಮಯದಲ್ಲಿ "ಕಾಂಗ್ರೆಸ್ ಪಕ್ಷ ಮಾತ್ರವೇ ದೇಶದ ಜನರಿಗೆ ಒಳಿತು ಮಾಡಲು ಸಾಧ್ಯ ಹಾಗೂ ದೇಶವನ್ನು ಒಗ್ಗೂಡಿಸಲು ಸಾಧ್ಯ" ಎಂದು ಖುಷ್ಬೂ ಹೇಳಿದ್ದರು.

ತಮಿಳುನಾಡು ರಾಜಕೀಯ
ತಮಿಳುನಾಡು ವಿಧಾನಸಭೆ ಚುನಾವಣೆಗೆ ಇನ್ನು ಎಂಟು ತಿಂಗಳು ಬಾಕಿ ಇದೆ. ಖುಷ್ಬೂ ಅವರು ಚುನಾವಣೆ ಸಮಯದಲ್ಲಿ ಬಿಜೆಪಿ ಸೇರಲು ಹೊರಟಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಸಹ ಚುನಾವಣೆಗಾಗಿ ಕರಸತ್ತನ್ನು ಈಗ ಆರಂಭಿಸಿದೆ.

ದೇವಾಲಯವನ್ನು ಕಟ್ಟಿದ್ದರು
ಖುಷ್ಬೂ ತಮಿಳುನಾಡಿನ ಅತ್ಯಂತ ಜನಪ್ರಿಯ ನಟಿ. ರಾಜ್ಯದಲ್ಲಿ ಅವರಿಗಾಗಿಯೇ ಅಭಿಮಾನಿಗಳು ದೇವಾಲಯವನ್ನು ಕಟ್ಟಿದ್ದರು. ಟಿವಿ ಧಾರಾವಾಹಿಗಳಲ್ಲೂ ಅವರು ನಟಿಸಿದ್ದಾರೆ, ನಿರೂಪಣೆಯನ್ನು ಮಾಡಿದ್ದಾರೆ. ಸಿನಿಮಾ ವರ್ಚಸ್ಸು ರಾಜಕೀಯ ಲಾಭ ತಂದುಕೊಡಲಿದೆಯೇ? ಕಾದು ನೋಡಬೇಕು.
-
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ











Click it and Unblock the Notifications