ಗೋ ರಕ್ಷಕರಿಂದ ಹಿಂಸಾಚಾರ: ಮೌನ ಮುರಿದ ಮೋದಿ
ಗೋವುಗಳ ರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ಸಲ್ಲದು ಎಂದ ಪ್ರಧಾನಿ ಮೋದಿ. ಗುಜರಾತ್ ನಲ್ಲಿರುವ ಸಬರ್ ಮತಿ ಆಶ್ರಮದಲ್ಲಿ ಈ ಹೇಳಿಕೆ ನೀಡಿದ ಪ್ರಧಾನಿ.
ಅಹ್ಮದಾಬಾದ್, ಜೂನ್ 29: ಗೋ ಸಂಕರಕ್ಷಣೆಯ ಹೆಸರಿನಲ್ಲಿ ದೇಶಾದ್ಯಂತ ಅಲ್ಲಲ್ಲಿ ನಡೆದಿರುವ ಹಾಗೂ ನಡೆಯುತ್ತಿರುವ ಕೊಲೆ ಹಾಗೂ ಹಿಂಸಾಚಾರಗಳ ವಿರುದ್ಧ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಬಾಯ್ತೆರೆದಿದ್ದಾರೆ.
ಈ ಮೂಲಕ ಇಂಥ ಘಟನೆಗಳ ಬಗ್ಗೆ ಪ್ರಧಾನಿ ಮೌನವನ್ನು ಪ್ರಶ್ನಿಸುತ್ತಿದ್ದ ವಿರೋಧ ಪಕ್ಷಗಳಿಗೆ, ಬುದ್ಧಿಜೀವಿಗಳಿಗೆ ಈಗ ಮೋದಿ ಉತ್ತರ ಕೊಟ್ಟಿದ್ದಾರೆ.

ಗುಜರಾತ್ ನಲ್ಲಿರುವ ಗಾಂಧೀಜಿಯವರ ಸಬರ್ ಮತಿ ಆಶ್ರಮಕ್ಕೆ ಬುಧವಾರ ಭೇಟಿ ನೀಡಿದ ಮೋದಿ, ಗೋ ಸಂರಕ್ಷಣೆಯ ಹೆಸರಿನಲ್ಲಿ ಜನರನ್ನು ಹತ್ಯೆ ಮಾಡುವ ಮನೋಭಾವವನ್ನು ತೀವ್ರವಾಗಿ ಖಂಡಿಸಿದರು.
ದೇಶವು ಅಹಿಂಸೆಯ ಮಾರ್ಗದಲ್ಲಿ ಮುನ್ನಡೆಯಬೇಕು. ಗೋ ರಕ್ಷಣೆಯ ವಿಚಾರದಲ್ಲಿ ಯಾರನ್ನಾದರೂ ಹಿಂಸಿಸುವುದು, ಅಪಮಾನಗೊಳಿಸುವುದು ಅಥವಾ ಅವರ ಮೇಲೆ ಹಲ್ಲೆ ನಡೆಸುವುದು ತಪ್ಪು. ಇಂಥ ಹಿಂಸಾತ್ಮಕ ಮಾರ್ಗಗಳು ನಿಲ್ಲಬೇಕು ಎಂದು ಅವರು ಆಗ್ರಹಿಸಿದರು.
ದೇಶದ ಯಾವುದೇ ಪ್ರಜೆಗೂ ಕಾನೂನನ್ನು ಕೈಗೆ ತೆಗೆದುಕೊಳ್ಳುವ ಅಧಿಕಾರವಿಲ್ಲ. ಮಹಾತ್ಮಾ ಗಾಂಧಿಯಾಗಲೀ, ವಿನೋಬಾ ಬಾವೆಯಾಗಲೀ ಯಾರೂ ಗೋವುಗಳನ್ನು ರಕ್ಷಣೆ ಮಾಡಲು ಹಿಂಸಾಚಾರ ನಡೆಸಿ ಎಂದು ಕರೆ ಕೊಟ್ಟಿಲ್ಲ. ಹಾಗಾಗಿ, ಇಂಥ ದುರ್ಮಾರ್ಗದಲ್ಲಿ ನಡೆಯುವುದನ್ನು ನಾವು ಬಿಡಬೇಕು ಎಂದು ಅವರು ತಾಕೀತು ಮಾಡಿದರು.
ಇದೇ ವೇಳೆ ಸ್ವಚ್ಛತೆಯ ಅಗತ್ಯತೆಯನ್ನು ಒತ್ತಿ ಹೇಳಿದ ಅವರು, ''ಸ್ವಚ್ಛತೆ ಎಂಬುದು ನಮ್ಮ ಸ್ವಭಾವವಾಗಬೇಕು. ಅದೇ ಮಹಾತ್ಮ ಗಾಂಧಿಯವರಿಗೆ ನಾವು ಸಲ್ಲಿಸಬಹುದಾದ ದೊಡ್ಡ ಗೌರವ'' ಎಂದು ತಿಳಿಸಿದರು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications