ಧರಾಶಾಹಿ ಕಿಂಗ್ ಫಿಶರ್ ಸಿಬ್ಬಂದಿ ಕೇಜ್ರೀವಾಲಾಗೆ ಮೊರೆ

ಇದು ಸ್ವಲ್ಪ ವಿಚಿತ್ರವೆನಿಸಿದರೂ ಕಹಿವಾಸ್ತವವಾಗಿದೆ. ಹಾಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲಾ ಅವರು ಇದ್ದಕ್ಕಿಂದ್ದಂತೆ ಆಶಾಕಿರಣವಾಗಿ ಹೊಮ್ಮಿದ್ದು, ದೇಶದಲ್ಲಿ ಅಷ್ಟೂ ಸಮಸ್ಯೆಗಳಿಗೆ ರಾಮಬಾಣವಾಗಬಲ್ಲರು ಎಂದೆನಿದ್ದು, ಎಲ್ಲರೂ ಕೇಜ್ರಿವಾಲಾರತ್ತ ಮುಖ ಮಾಡಿದ್ದಾರೆ.
(ಆಮ್ ಆದ್ಮಿ ಕೇಜ್ರಿವಾಲಾ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ ದಿನ)
ಈ ಹಿನ್ನೆಲೆಯಲ್ಲಿ ವಿಮಾನಗಳಲ್ಲಿ ಹಾರಾಡುತ್ತಿದ್ದ ಕಿಂಗ್ ಫಿಶರ್ ಏರ್ ಲೈನ್ಸ್ ಸಿಬ್ಬಂದಿ ಸುಮಾರು ಒಂದೂವರೆ ವರ್ಷದಿಂದ ಸಂಬಳಗಳೂ ಇಲ್ಲದೇ ತ್ರಿಶಂಕು ಸ್ಥಿತಿಯಲ್ಲಿರುವಾಗ ಅರವಿಂದ್ ಕೇಜ್ರಿವಾಲಾಗೆ SOS ಸಂದೇಶ ಕಳಿಸಲು ಮುಂದಾಗಿದ್ದಾರೆ.
ಕಿಂಗ್ ಫಿಶರ್ ಏರ್ ಲೈನ್ಸ್ ನಲ್ಲಿ 2000ಕ್ಕೂ ಹೆಚ್ಚು ಸಿಬ್ಬಂದಿ ಇಂತಹ ದುರ್ಭರ ಪರಿಸ್ಥಿತಿಯಲ್ಲಿದ್ದು, ಅವರ ಪೈಕಿ ದಿಲ್ಲಿಯಲ್ಲಿರುವ 500 ಮಂದಿ ತಮ್ಮ ನೂತನ ಮುಖ್ಯಮಂತ್ರಿಯಲ್ಲಿ ಭರವಸೆಯ ಬೆಳಕು ಕಂಡಿದ್ದಾರೆ.
ಗಮನಾರ್ಹವೆಂದರೆ ಈ ಹಿಂದೆ ಕಾಂಗ್ರೆಸ್ ಮತ್ತು ಬಿಜೆಪಿ ಮಂದಿಗೆ ಸಮಸ್ಯೆ ಬಗೆಬರಿಸುವಂತೆ ಅಲವತ್ತುಕೊಂಡಿದ್ದೆವು. ಆದರೆ ಅದು ಅವರ ಕಿವಿಗಳಿಗೆ ಬಳಲಿಲ್ಲ. ಈಗ ನೋಡೋಣ ನಮ್ಮ ಲಕ್ಕು ಚೆನ್ನಾಗಿದ್ದರೆ ಅರವಿಂದರು ನಮ್ಮ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂದು ಆಶಿಸಿದ್ದೇವೆ ಎಂದು ದೆಹಲಿ ಮೂಲದ ಸಿಬ್ಬಂದಿಗಳು ಕೈಯಲ್ಲಿ ಅರ್ಜಿ ಇಟ್ಟುಕೊಂಡು ಮುಖ್ಯಮಂತ್ರಿಯ ಮನೆ ಬಾಗಿಲಲ್ಲಿ ನಿಂತಿದ್ದಾರೆ.
ಕೇಜ್ರಿವಾಲಾರು ಭಿನ್ನ ರಾಜಕಾರಣಿಯಾಗಿ ಗೋಚರಿಸುತ್ತಿದ್ದಾರೆ. ಯಾವುದೋ ರೂಪದಲ್ಲಿ ಕೇಜ್ರಿವಾಲಾರು ನಮ್ಮ ಕೈಹಿಡಿಯುತ್ತಾರೆ ಎಂದು ನಂಬಿದ್ದೇವೆ ಎಂದು ಸಿಬ್ಬಂದಿ ಅಲವತ್ತುಕೊಂಡಿದ್ದಾರೆ. ಆರ್ಥಿಕವಾಗಿ ಕಡುಕಷ್ಟಕ್ಕೆ ತುತ್ತಾದ ಕನ್ನಡಿಗ ವಿಜಯ್ ಮಲ್ಯಾರು ಕಳೆದ ಅಕ್ಟೋಬರಿನಲ್ಲಿ ತಮ್ಮ ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದಾರೆ. (ಕಿಂಗ್ ಫಿಶರ್ ಕ್ಯಾಲೆಂಡರ್ 2014: ಮೀಂಚುಳ್ಳಿ ದೃಶ್ಯಗಳು )
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications