ಪೊಲೀಸ್ ವ್ಯಾನ್ ನಲ್ಲೇ ಮುತ್ತಿನ ಮಳೆಗರೆದರು
ತಿರುವನಂತಪುರ, ನ:3: ನೈತಿಕ ಪೊಲೀಸ್ ಗಿರಿ ವಿರೋಧಿಸಿ ಯುವಕರು ನ. 2ರಂದು ಕೊಚ್ಚಿ ಮತ್ತು ಮುಂಬೈನಲ್ಲಿ ಹಮ್ಮಿಕೊಂಡಿದ್ದ 'ಕಿಸ್ ಡೇ'ಗೆ ಪೊಲೀಸರು ಅಡ್ಡಿಯಾದರು. ಕಾರ್ಯಕ್ರಮ ಬೆಂಬಲಿಸಿ ಆಗಮಿಸಿದ್ದ ಪ್ರೇಮಿಗಳನ್ನು ಬಂಧಿಸಲಾಯಿತು. ಆದರೂ ಪೊಲೀಸ್ ವ್ಯಾನ್ ನಲ್ಲಿಯೇ ಕೆಲವರು ಪರಸ್ಪರ ಚುಂಬನ ಮಾಡಿದರು.
ಸುಮಾರು 300ಕ್ಕೂ ಹೆಚ್ಚು ಜೋಡಿಗಳು ಕಿಸ್ ಡೇ ಗೆ ಬೆಂಬಲ ಸೂಚಿಸಿ ಆಗಮಿಸಿದ್ದರು. ಆದರೆ ಪೊಲೀಸರ ಭಯಕ್ಕೆ ಹೆದರಿ ಕೆಲವರಷ್ಟೇ ಮುತ್ತು ಹಂಚಿಕೊಂಡರು. ಮರೀನ್ ಡ್ರೈವ್ ಬೀಚ್ ಬಳಿ ಸೇರಿದ್ದ 50 ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಯಿತು.[ಕಿಸ್ ಡೇ : ಮುತ್ತಿನ ಮಳೆಗೆ ತಣ್ಣೀರು ಎರಚಿದ್ದು ಯಾರು?]

ಕೊಚ್ಚಿಯಲ್ಲಿ ಕೆಲ ಸಾಮಾಜಿಕ ಕಾರ್ಯಕರ್ತರು ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಗೊಂದಲ ಉಂಟಾದರೂ ಪೊಲೀಸರು ಪರಿಸ್ಥಿತಿ ನಿಭಾಯಿಸಿದರು. ಕೊಚ್ಚಿಯಲ್ಲಿ ಮುತ್ತಿನ ಮಳೆಗರೆಯಬೇಕೇಂದಿದ್ದ ಯುವ ಪ್ರೇಮಿಗಳ ಆಸೆಗೆ ಪೊಲೀಸರು ತಣ್ಣೀರು ಎರಚಿದರು.
ಆದರೆ ಮುಂಬೈನಲ್ಲಿ ಶಿವಸೇನೆಯಿಂದಲೂ ಇದಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ. ಸದ್ಯದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಶಿವಸೇನೆ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ವರ್ಷಗಳ ಹಿಂದೆ ಕೇಸರಿ ಪಕ್ಷ ಪ್ರೇಮಿಗಳ ದಿನಕ್ಕೆ ವಿರೋಧ ವ್ಯಕ್ತಪಡಿಸಿತ್ತು.

ಕಿಸ್ ಡೇ ಆಯೋಜಿಸಿದ್ದು ಯಾಕೆ?
ಅಕ್ಟೋಬರ್ 23 ರಂದು ಕೋಜಿಕೋಡ್ ಜಿಲ್ಲೆಯಲ್ಲಿ ನಡೆದ ಘಟನೆಯೊಂದು ಯುವ ಪ್ರೇಮಿಗಳನ್ನು ರೊಚ್ಚಿಗೆಬ್ಬಿಸುವಂತೆ ಮಾಡಿತು. ಬಿಜೆಪಿ ಮತ್ತು ಕೇಸರಿ ಪಾಳಯದ ಕೆಲವರು ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಪ್ರೇಮಿಗಳ ಮೇಲೆ ದಾಳಿ ಮಾಡಿದ್ದರು. ಈ ಘಟನೆ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗಿತ್ತು.
More From
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications