ಪೊಲೀಸ್ ವ್ಯಾನ್ ನಲ್ಲೇ ಮುತ್ತಿನ ಮಳೆಗರೆದರು
ತಿರುವನಂತಪುರ, ನ:3: ನೈತಿಕ ಪೊಲೀಸ್ ಗಿರಿ ವಿರೋಧಿಸಿ ಯುವಕರು ನ. 2ರಂದು ಕೊಚ್ಚಿ ಮತ್ತು ಮುಂಬೈನಲ್ಲಿ ಹಮ್ಮಿಕೊಂಡಿದ್ದ 'ಕಿಸ್ ಡೇ'ಗೆ ಪೊಲೀಸರು ಅಡ್ಡಿಯಾದರು. ಕಾರ್ಯಕ್ರಮ ಬೆಂಬಲಿಸಿ ಆಗಮಿಸಿದ್ದ ಪ್ರೇಮಿಗಳನ್ನು ಬಂಧಿಸಲಾಯಿತು. ಆದರೂ ಪೊಲೀಸ್ ವ್ಯಾನ್ ನಲ್ಲಿಯೇ ಕೆಲವರು ಪರಸ್ಪರ ಚುಂಬನ ಮಾಡಿದರು.
ಸುಮಾರು 300ಕ್ಕೂ ಹೆಚ್ಚು ಜೋಡಿಗಳು ಕಿಸ್ ಡೇ ಗೆ ಬೆಂಬಲ ಸೂಚಿಸಿ ಆಗಮಿಸಿದ್ದರು. ಆದರೆ ಪೊಲೀಸರ ಭಯಕ್ಕೆ ಹೆದರಿ ಕೆಲವರಷ್ಟೇ ಮುತ್ತು ಹಂಚಿಕೊಂಡರು. ಮರೀನ್ ಡ್ರೈವ್ ಬೀಚ್ ಬಳಿ ಸೇರಿದ್ದ 50 ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಯಿತು.[ಕಿಸ್ ಡೇ : ಮುತ್ತಿನ ಮಳೆಗೆ ತಣ್ಣೀರು ಎರಚಿದ್ದು ಯಾರು?]

ಕೊಚ್ಚಿಯಲ್ಲಿ ಕೆಲ ಸಾಮಾಜಿಕ ಕಾರ್ಯಕರ್ತರು ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಗೊಂದಲ ಉಂಟಾದರೂ ಪೊಲೀಸರು ಪರಿಸ್ಥಿತಿ ನಿಭಾಯಿಸಿದರು. ಕೊಚ್ಚಿಯಲ್ಲಿ ಮುತ್ತಿನ ಮಳೆಗರೆಯಬೇಕೇಂದಿದ್ದ ಯುವ ಪ್ರೇಮಿಗಳ ಆಸೆಗೆ ಪೊಲೀಸರು ತಣ್ಣೀರು ಎರಚಿದರು.
ಆದರೆ ಮುಂಬೈನಲ್ಲಿ ಶಿವಸೇನೆಯಿಂದಲೂ ಇದಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ. ಸದ್ಯದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಶಿವಸೇನೆ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ವರ್ಷಗಳ ಹಿಂದೆ ಕೇಸರಿ ಪಕ್ಷ ಪ್ರೇಮಿಗಳ ದಿನಕ್ಕೆ ವಿರೋಧ ವ್ಯಕ್ತಪಡಿಸಿತ್ತು.

ಕಿಸ್ ಡೇ ಆಯೋಜಿಸಿದ್ದು ಯಾಕೆ?
ಅಕ್ಟೋಬರ್ 23 ರಂದು ಕೋಜಿಕೋಡ್ ಜಿಲ್ಲೆಯಲ್ಲಿ ನಡೆದ ಘಟನೆಯೊಂದು ಯುವ ಪ್ರೇಮಿಗಳನ್ನು ರೊಚ್ಚಿಗೆಬ್ಬಿಸುವಂತೆ ಮಾಡಿತು. ಬಿಜೆಪಿ ಮತ್ತು ಕೇಸರಿ ಪಾಳಯದ ಕೆಲವರು ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಪ್ರೇಮಿಗಳ ಮೇಲೆ ದಾಳಿ ಮಾಡಿದ್ದರು. ಈ ಘಟನೆ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗಿತ್ತು.
More From
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications