ಪಠಾಣ್ ಕೋಟ್ ವಾಯುನೆಲೆಯ ವಿಶೇಷತೆಗಳೇನು?
ಬೆಂಗಳೂರು, ಜನವರಿ 05 : ಪಂಜಾಬ್ನ ಪಠಾಣ್ ಕೋಟ್ ವಾಯುನೆಲೆ ಮೇಲೆ ದಾಳಿ ಮಾಡಿದ ಉಗ್ರರನ್ನು ಯೋಧರು ಹತ್ಯೆ ಮಾಡಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ಗಡಿಭಾಗದಿಂದ ಕೇವಲ 40 ಕಿ.ಮೀ.ದೂರದಲ್ಲಿರುವ ಇದು ದೇಶದ ಮಹತ್ವದ ಸೇನಾ ನೆಲೆಯಾಗಿದೆ.
ಭಾರತೀಯ ವಾಯುಪಡೆಯ ಅತ್ಯುನ್ನತ ಯುದ್ಧ ವಿಮಾನಗಳು, ಹೆಲಿಕಾಪ್ಟರ್ಗಳು ಈ ವಾಯುನೆಲೆಯಲ್ಲಿವೆ. ವಾಯುನೆಲೆಯಲ್ಲಿ ಸುಸಜ್ಜಿತವಾದ ಒಂದು ಪಟ್ಟಣವಿದೆ. ವಸತಿ ಪ್ರದೇಶ, ವಾಣಿಜ್ಯ ಸಂಕೀರ್ಣ, ಶಾಲೆ, ಹೋಟೆಲ್ ಆಟದ ಮೈದಾನ ಸೇರಿದಂತೆ ಹಲವು ವ್ಯವಸ್ಥೆಗಳು ವಾಯುನೆಲೆಯಲ್ಲಿವೆ. [ಪಠಾಣ್ ಕೋಟ್ ಉಗ್ರರ ದಾಳಿ : ಟೈಮ್ ಲೈನ್]
75 ಎಕರೆ ಪ್ರದೇಶದಲ್ಲಿರುವ ಪಠಾಣ್ ಕೋಟ್ ವಾಯುನೆಲೆ ಮೇಲೆ ಪಾಕಿಸ್ತಾನದ ಕಣ್ಣು ಬಿದ್ದಿರುವುದು ಇದೇ ಮೊದಲಲ್ಲ. 1965, 1971ರ ಭಾರತ-ಪಾಕ್ ನಡುವಿನ ಯುದ್ಧದ ಸಮಯದಲ್ಲಿಯೂ ಪಾಕಿಸ್ತಾನ ಈ ವಾಯುನೆಲೆ ಮೇಲೆ ದಾಳಿ ಮಾಡಿತ್ತು. [ಎಷ್ಟು ಉಗ್ರರು ವಾಯುನೆಲೆಗೆ ನುಗ್ಗಿದ್ದರು?]
1971ರಲ್ಲಿ ಪಾಕ್ ವೈಮಾನಿಕ ದಾಳಿಯಿಂದಾಗಿ ವಾಯುನೆಲೆಯ ರನ್ವೇಗೆ ಹಾನಿ ಉಂಟಾಗಿತ್ತು. ಜನವರಿ 2ರ ಮುಂಜಾನೆ ಸಹ ಉಗ್ರರು ಗಡಿಯಿಂದ ಸುಸುಳಿ ಬಂದು ವಾಯುನೆಲೆ ಮೇಲೆ ದಾಳಿ ಮಾಡಿದ್ದರು. ಸುಮಾರು 60 ಗಂಟೆಗಳ ಕಾರ್ಯಾಚರಣೆ ಬಳಿಕ ಉಗ್ರರನ್ನು ಹೊಡೆದುರುಳಿಸಲಾಗಿದೆ. ಚಿತ್ರಗಳಲ್ಲಿ ನೋಡಿ ವಾಯುನೆಲೆ ವಿಶೇಷತೆಗಳು..... [ಪಿಟಿಐ ಚಿತ್ರಗಳು]

ಭಾರತದ ಪಾಲಿಗೆ ಮಹತ್ವದ ವಾಯುನೆಲೆ
ಪಂಜಾಬಿನ ಪಠಾಣ್ ಕೋಟ್ನಲ್ಲಿರುವ ವಾಯುನಲೆ ಭಾರತದ ಪಾಲಿಗೆ ಅತೀ ಮಹತ್ವದದ್ದು. ಭಾರತ-ಪಾಕಿಸ್ತಾನ ಗಡಿಯಿಂದ 40 ಕಿ.ಮೀ.ದೂರದಲ್ಲಿರುವ ಈ ವಾಯುನೆಲೆ ಮೇಲೆ ಜನವರಿ 2ರ ಮಂಜಾನೆ ಉಗ್ರರು ದಾಳಿ ಮಾಡಿದ್ದರು. ಸುಮಾರು 60 ಗಂಟೆಗಳ ಕಾರ್ಯಾಚರಣೆ ಬಳಿಕ ಉಗ್ರರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.

70 ಎಕರೆ ಪ್ರದೇಶದಲ್ಲಿದೆ ವಾಯುನೆಲೆ
ಪಠಾಣ್ ಕೋಟ್ ವಾಯುನೆಲೆ ಸುಮಾರು 70 ಎಕರೆ ಪ್ರದೇಶದಲ್ಲಿದೆ. ಭಾರತದಕ್ಕೆ ಮಹತ್ವವಾದ ಈ ನೆಲೆ ಮೇಲೆ ಪಾಕಿಸ್ತಾನ ಹಿಂದಿನಿಂದಲೂ ಕಣ್ಣಿಟ್ಟಿದೆ. 1965, 1971ರ ಭಾರತ-ಪಾಕ್ ನಡುವಿನ ಯುದ್ಧದ ಸಮಯದಲ್ಲಿಯೂ ಪಾಕಿಸ್ತಾನ ಈ ವಾಯುನೆಲೆ ಮೇಲೆ ದಾಳಿ ಮಾಡಿತ್ತು.

ವಾಯುನೆಲೆಯೊಳಗಿದೆ ಪಟ್ಟಣ
ಪಠಾಣ್ ಕೋಟ್ ವಾಯುನೆಲೆಯೊಳಗೆ ಸುಸಜ್ಜಿತವಾದ ಪಟ್ಟಣವನ್ನು ನಿರ್ಮಾಣ ಮಾಡಲಾಗಿದೆ. ವಸತಿ ಗೃಹ, ಹೋಟೆಲ್, ಶಾಲೆ, ಆಟದ ಮೈದಾನ, ವಾಣಿಜ್ಯ ಸಂಕೀರ್ಣ ಸೇರಿದಂತೆ ಅಗತ್ಯ ವ್ಯವಸ್ಥೆಗಳಿವೆ. ಇಷ್ಟು ದೊಡ್ಡ ವಾಯುನೆಲೆಗೆ ನುಗ್ಗಿದ ಉಗ್ರರನ್ನು ಕೊಲ್ಲುವ ಕಾರ್ಯಾಚರಣೆ ವಿಳಂಬವಾಗಿದ್ದು ಇದೇ ಕಾರಣಕ್ಕೆ. ಉಗ್ರರನ್ನು ಹುಡುಕುವುದು ಯೋಧರಿಗೂ ದೊಡ್ಡ ಸವಾಲಾಗಿತ್ತು.

ವಾಯುನೆಲೆಯಲ್ಲೇನಿದೆ?
ಮಿಗ್ 21 ವಿಮಾನಗಳು, ಹಲವು ಹೆಲಿಕಾಪ್ಟರ್ಗಳು, ಎಂಐ ಯುದ್ಧ ಹೆಲಿಕಾಪ್ಟರ್, ಕಣ್ಗಾವಲು ರೆಡಾರ್ಗಳು, ಮಾನವ ರಹಿತ ಲಘು ಯುದ್ಧ ವಿಮಾನ ಸೇರಿದಂತೆ ವಾಯುಪಡೆಯ ಶಕ್ತಿಯೇ ಈ ವಾಯುನೆಲೆಯಲ್ಲಿ ಕೇಂದ್ರಿಕೃತವಾಗಿದೆ. ಆದ್ದರಿಂದ, ಯುದ್ಧದ ಸಮಯದಲ್ಲಿ ಪಾಕಿಸ್ತಾನ ಈ ವಾಯುನೆಲೆಯ ಮೇಲೆ ಮೊದಲು ದಾಳಿ ನಡೆಸಲು ಯೋಜನೆ ರೂಪಿಸುತ್ತದೆ.

ರನ್ವೇಗೆ ಹಾನಿ ಉಂಟಾಗಿತ್ತು
ವಾಯುನೆಲೆ ಮೇಲೆ ದಾಳಿ ನಡೆಯುತ್ತಿರುವುದು ಇದೇ ಮೊದಲಲ್ಲ. 1965, 1971ರ ಭಾರತ-ಪಾಕ್ ನಡುವಿನ ಯುದ್ಧದ ಸಮಯದಲ್ಲಿಯೂ ಪಾಕಿಸ್ತಾನ ಈ ವಾಯುನೆಲೆ ಮೇಲೆ ದಾಳಿ ಮಾಡಿತ್ತು. 1971ರಲ್ಲಿ ಪಾಕ್ ವೈಮಾನಿಕ ದಾಳಿಯಿಂದಾಗಿ ವಾಯುನೆಲೆಯ ರನ್ವೇಗೆ ಹಾನಿ ಉಂಟಾಗಿತ್ತು.

ಉಗ್ರರ ಕಣ್ಣು ಏಕೆ ಬಿತ್ತು?
ವಾಯುನೆಲೆ ಮೇಲೆ ದಾಳಿ ಮಾಡಿ ಅದನ್ನು ದ್ವಂಸಗೊಳಿಸುವುದು ಮತ್ತು ಅತೀ ಭದ್ರತೆಯ ವಾಯುನೆಲೆ ದಾಳಿ ಮಾಡಿದೆವು ಎಂದು ಹೇಳಿಕೊಂಡು ದೇಶಕ್ಕೆ ಮುಜುಗರ ಉಂಟುಮಾಡುವುದು ಉಗ್ರರ ಉದ್ದೇವಾಗಿತ್ತು. ಆದ್ದರಿಂದ, ಜನವರಿ 2ರಂದು ಉಗ್ರರು ವಾಯುನೆಲೆ ಮೇಲೆ ದಾಳಿ ಮಾಡಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications