ಪಠಾಣ್ ಕೋಟ್ ವಾಯುನೆಲೆಯ ವಿಶೇಷತೆಗಳೇನು?
ಬೆಂಗಳೂರು, ಜನವರಿ 05 : ಪಂಜಾಬ್ನ ಪಠಾಣ್ ಕೋಟ್ ವಾಯುನೆಲೆ ಮೇಲೆ ದಾಳಿ ಮಾಡಿದ ಉಗ್ರರನ್ನು ಯೋಧರು ಹತ್ಯೆ ಮಾಡಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ಗಡಿಭಾಗದಿಂದ ಕೇವಲ 40 ಕಿ.ಮೀ.ದೂರದಲ್ಲಿರುವ ಇದು ದೇಶದ ಮಹತ್ವದ ಸೇನಾ ನೆಲೆಯಾಗಿದೆ.
ಭಾರತೀಯ ವಾಯುಪಡೆಯ ಅತ್ಯುನ್ನತ ಯುದ್ಧ ವಿಮಾನಗಳು, ಹೆಲಿಕಾಪ್ಟರ್ಗಳು ಈ ವಾಯುನೆಲೆಯಲ್ಲಿವೆ. ವಾಯುನೆಲೆಯಲ್ಲಿ ಸುಸಜ್ಜಿತವಾದ ಒಂದು ಪಟ್ಟಣವಿದೆ. ವಸತಿ ಪ್ರದೇಶ, ವಾಣಿಜ್ಯ ಸಂಕೀರ್ಣ, ಶಾಲೆ, ಹೋಟೆಲ್ ಆಟದ ಮೈದಾನ ಸೇರಿದಂತೆ ಹಲವು ವ್ಯವಸ್ಥೆಗಳು ವಾಯುನೆಲೆಯಲ್ಲಿವೆ. [ಪಠಾಣ್ ಕೋಟ್ ಉಗ್ರರ ದಾಳಿ : ಟೈಮ್ ಲೈನ್]
75 ಎಕರೆ ಪ್ರದೇಶದಲ್ಲಿರುವ ಪಠಾಣ್ ಕೋಟ್ ವಾಯುನೆಲೆ ಮೇಲೆ ಪಾಕಿಸ್ತಾನದ ಕಣ್ಣು ಬಿದ್ದಿರುವುದು ಇದೇ ಮೊದಲಲ್ಲ. 1965, 1971ರ ಭಾರತ-ಪಾಕ್ ನಡುವಿನ ಯುದ್ಧದ ಸಮಯದಲ್ಲಿಯೂ ಪಾಕಿಸ್ತಾನ ಈ ವಾಯುನೆಲೆ ಮೇಲೆ ದಾಳಿ ಮಾಡಿತ್ತು. [ಎಷ್ಟು ಉಗ್ರರು ವಾಯುನೆಲೆಗೆ ನುಗ್ಗಿದ್ದರು?]
1971ರಲ್ಲಿ ಪಾಕ್ ವೈಮಾನಿಕ ದಾಳಿಯಿಂದಾಗಿ ವಾಯುನೆಲೆಯ ರನ್ವೇಗೆ ಹಾನಿ ಉಂಟಾಗಿತ್ತು. ಜನವರಿ 2ರ ಮುಂಜಾನೆ ಸಹ ಉಗ್ರರು ಗಡಿಯಿಂದ ಸುಸುಳಿ ಬಂದು ವಾಯುನೆಲೆ ಮೇಲೆ ದಾಳಿ ಮಾಡಿದ್ದರು. ಸುಮಾರು 60 ಗಂಟೆಗಳ ಕಾರ್ಯಾಚರಣೆ ಬಳಿಕ ಉಗ್ರರನ್ನು ಹೊಡೆದುರುಳಿಸಲಾಗಿದೆ. ಚಿತ್ರಗಳಲ್ಲಿ ನೋಡಿ ವಾಯುನೆಲೆ ವಿಶೇಷತೆಗಳು..... [ಪಿಟಿಐ ಚಿತ್ರಗಳು]

ಭಾರತದ ಪಾಲಿಗೆ ಮಹತ್ವದ ವಾಯುನೆಲೆ
ಪಂಜಾಬಿನ ಪಠಾಣ್ ಕೋಟ್ನಲ್ಲಿರುವ ವಾಯುನಲೆ ಭಾರತದ ಪಾಲಿಗೆ ಅತೀ ಮಹತ್ವದದ್ದು. ಭಾರತ-ಪಾಕಿಸ್ತಾನ ಗಡಿಯಿಂದ 40 ಕಿ.ಮೀ.ದೂರದಲ್ಲಿರುವ ಈ ವಾಯುನೆಲೆ ಮೇಲೆ ಜನವರಿ 2ರ ಮಂಜಾನೆ ಉಗ್ರರು ದಾಳಿ ಮಾಡಿದ್ದರು. ಸುಮಾರು 60 ಗಂಟೆಗಳ ಕಾರ್ಯಾಚರಣೆ ಬಳಿಕ ಉಗ್ರರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.

70 ಎಕರೆ ಪ್ರದೇಶದಲ್ಲಿದೆ ವಾಯುನೆಲೆ
ಪಠಾಣ್ ಕೋಟ್ ವಾಯುನೆಲೆ ಸುಮಾರು 70 ಎಕರೆ ಪ್ರದೇಶದಲ್ಲಿದೆ. ಭಾರತದಕ್ಕೆ ಮಹತ್ವವಾದ ಈ ನೆಲೆ ಮೇಲೆ ಪಾಕಿಸ್ತಾನ ಹಿಂದಿನಿಂದಲೂ ಕಣ್ಣಿಟ್ಟಿದೆ. 1965, 1971ರ ಭಾರತ-ಪಾಕ್ ನಡುವಿನ ಯುದ್ಧದ ಸಮಯದಲ್ಲಿಯೂ ಪಾಕಿಸ್ತಾನ ಈ ವಾಯುನೆಲೆ ಮೇಲೆ ದಾಳಿ ಮಾಡಿತ್ತು.

ವಾಯುನೆಲೆಯೊಳಗಿದೆ ಪಟ್ಟಣ
ಪಠಾಣ್ ಕೋಟ್ ವಾಯುನೆಲೆಯೊಳಗೆ ಸುಸಜ್ಜಿತವಾದ ಪಟ್ಟಣವನ್ನು ನಿರ್ಮಾಣ ಮಾಡಲಾಗಿದೆ. ವಸತಿ ಗೃಹ, ಹೋಟೆಲ್, ಶಾಲೆ, ಆಟದ ಮೈದಾನ, ವಾಣಿಜ್ಯ ಸಂಕೀರ್ಣ ಸೇರಿದಂತೆ ಅಗತ್ಯ ವ್ಯವಸ್ಥೆಗಳಿವೆ. ಇಷ್ಟು ದೊಡ್ಡ ವಾಯುನೆಲೆಗೆ ನುಗ್ಗಿದ ಉಗ್ರರನ್ನು ಕೊಲ್ಲುವ ಕಾರ್ಯಾಚರಣೆ ವಿಳಂಬವಾಗಿದ್ದು ಇದೇ ಕಾರಣಕ್ಕೆ. ಉಗ್ರರನ್ನು ಹುಡುಕುವುದು ಯೋಧರಿಗೂ ದೊಡ್ಡ ಸವಾಲಾಗಿತ್ತು.

ವಾಯುನೆಲೆಯಲ್ಲೇನಿದೆ?
ಮಿಗ್ 21 ವಿಮಾನಗಳು, ಹಲವು ಹೆಲಿಕಾಪ್ಟರ್ಗಳು, ಎಂಐ ಯುದ್ಧ ಹೆಲಿಕಾಪ್ಟರ್, ಕಣ್ಗಾವಲು ರೆಡಾರ್ಗಳು, ಮಾನವ ರಹಿತ ಲಘು ಯುದ್ಧ ವಿಮಾನ ಸೇರಿದಂತೆ ವಾಯುಪಡೆಯ ಶಕ್ತಿಯೇ ಈ ವಾಯುನೆಲೆಯಲ್ಲಿ ಕೇಂದ್ರಿಕೃತವಾಗಿದೆ. ಆದ್ದರಿಂದ, ಯುದ್ಧದ ಸಮಯದಲ್ಲಿ ಪಾಕಿಸ್ತಾನ ಈ ವಾಯುನೆಲೆಯ ಮೇಲೆ ಮೊದಲು ದಾಳಿ ನಡೆಸಲು ಯೋಜನೆ ರೂಪಿಸುತ್ತದೆ.

ರನ್ವೇಗೆ ಹಾನಿ ಉಂಟಾಗಿತ್ತು
ವಾಯುನೆಲೆ ಮೇಲೆ ದಾಳಿ ನಡೆಯುತ್ತಿರುವುದು ಇದೇ ಮೊದಲಲ್ಲ. 1965, 1971ರ ಭಾರತ-ಪಾಕ್ ನಡುವಿನ ಯುದ್ಧದ ಸಮಯದಲ್ಲಿಯೂ ಪಾಕಿಸ್ತಾನ ಈ ವಾಯುನೆಲೆ ಮೇಲೆ ದಾಳಿ ಮಾಡಿತ್ತು. 1971ರಲ್ಲಿ ಪಾಕ್ ವೈಮಾನಿಕ ದಾಳಿಯಿಂದಾಗಿ ವಾಯುನೆಲೆಯ ರನ್ವೇಗೆ ಹಾನಿ ಉಂಟಾಗಿತ್ತು.

ಉಗ್ರರ ಕಣ್ಣು ಏಕೆ ಬಿತ್ತು?
ವಾಯುನೆಲೆ ಮೇಲೆ ದಾಳಿ ಮಾಡಿ ಅದನ್ನು ದ್ವಂಸಗೊಳಿಸುವುದು ಮತ್ತು ಅತೀ ಭದ್ರತೆಯ ವಾಯುನೆಲೆ ದಾಳಿ ಮಾಡಿದೆವು ಎಂದು ಹೇಳಿಕೊಂಡು ದೇಶಕ್ಕೆ ಮುಜುಗರ ಉಂಟುಮಾಡುವುದು ಉಗ್ರರ ಉದ್ದೇವಾಗಿತ್ತು. ಆದ್ದರಿಂದ, ಜನವರಿ 2ರಂದು ಉಗ್ರರು ವಾಯುನೆಲೆ ಮೇಲೆ ದಾಳಿ ಮಾಡಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications