ಪ್ರವಾಹಕ್ಕೆ ನಲುಗಿದ್ದ ಕೊಚ್ಚಿ ವಿಮಾನ ನಿಲ್ದಾಣ ಪುನಾರಂಭ
ಬೆಂಗಳೂರು, ಆಗಸ್ಟ್ 29: ಭೀಕರ ಮಳೆ ಹಾಗೂ ಪ್ರವಾಹದಿಂದ ಕೇರಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸ್ಥಗಿತಗೊಂಡಿದ್ದ ವಿಮಾನ ಸಂಚಾರ ಇಂದು(ಆಗಸ್ಟ್ 29) ಆರಂಭಗೊಳ್ಳಲಿದೆ.
ಖಾಸಗಿ ವಿಮಾನಯಾನ ಸಂಸ್ಥೆಗಳಾದ ಜೆಟ್ ಏರ್ವೇಸ್ ಮತ್ತು ಇಂಡಿಗೋ ಕಾರ್ಯಾಚರಣೆಯನ್ನು ಆರಂಭಿಸಲು ನಿರ್ದರಿಸಿವೆ. ಆಗಸ್ಟ್ 14ರಿಂದ ಆಗಸ್ಟ್ 28ರವರೆಗೆ ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಸಂಚಾರವನ್ನು ರದ್ದುಪಡಿಸಲಾಗಿತ್ತು.
ದೇಶದ ಏಳನೇ ಅತಿ ಜನನಿಬಿಡ ನಿಲ್ದಾಣಗಳಲ್ಲಿ ಒಂದಾಗಿರುವ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಆಗಸ್ಟ್ 8ರಿಂದ ಆಗಸ್ಟ್ 22ವರೆಗೆ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿತ್ತು ಜತೆಗೆ ಮಾರ್ಗವನ್ನು ಬದಲಾಯಿಸಲಾಗಿತ್ತು.

ಇದೀಗ ಪ್ರವಾಹ ಪರಿಹಾರ ಕಾರ್ಯ ಬಹುತೇಕ ಪೂರ್ಣಗೊಳ್ಳುತ್ತಿರುವುದರಿಂದ ವಿಮಾನ ಸಂಚಾರವನ್ನು ಆರಂಭಿಸಲಾಗುತ್ತಿದೆ.ಈ ಮೊದಲು ವಿಮಾನಯಾನ ಪ್ರಾಧಿಕಾರ ಆಗಸ್ಟ್ 18ರವರೆಗೆ ವಿಮಾನ ಸಂಚಾರವನ್ನು ರದ್ದುಗೊಳಿಸಿತ್ತು.
ಅದಾದ ಬಳಿಕ ಆಗಸ್ಟ್ 26ರವರೆಗೆ ವಿಮಾನ ಸಂಚಾರದ ಸ್ಥಗಿತತೆಯನ್ನು ಮುಂದುವರೆಸಿದ್ದರೂ ಪರಿಸ್ಥಿತಿ ಸುಧಾರಿಸದ ಕಾರಣ ಆಗಸ್ಟ್ 29ರವರೆಗೆ ಮತ್ತೆ ವಿಮಾನ ರದ್ದತೆಯನ್ನು ಮುಂದುವರೆಸಲಾಗಿತ್ತು. ಇದೀಗ ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಯಥಾಸ್ಥಿತಿಗೆ ಮರಳಿದ್ದರಿಂದ ವಿಮಾನ ಸಂಚಾರವನ್ನು ಆರಂಭಿಸಲಾಗುತ್ತಿದ್ದು ಪೋಲಾರ್ ಫಾರ್ಮ್ ಮುಖಾಂತರ ರನ್ ವೇ ಹಾಗೂ ಟರ್ಮಿನಲ್ ಗಳನ್ನು ಯತಾಸ್ಥಿತಿಗೆ ತರಲಾಗುತ್ತಿದೆ.
ಡೈರೆಕ್ಟರ್ ಜನರಲ್ ಆಫ್ ಸಿವಿಲ್ ಏವಿಯೇಷನ್ ನಾಗರಿಕ ವಿಮಾನ ಯಾನ ಮಹಾನಿರ್ದೇಶಕರು, ಕೊಚ್ಚಿ ವಿಮಾನ ನಿಲ್ದಾಣದಿಂದ ವಿಮಾನ ಸಂಚಾರವನ್ನು ಆರಂಭಿಸುವಂತೆ ವಿಮಾನ ಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದ್ದು, ತಿರುವನಂತಪುರಂ, ಕೋಯಿಕ್ಕೊಡ್ ಹಾಗೂ ಕೊಯಿಮತ್ತೂರ್ ವಿಮಾನ ನಿಲ್ದಾಣಗಳಿಗೆ ಮಾರ್ಗ ಬದಲಿಸಲಾಗಿದ್ದ ವಿಮಾನಗಳು ಇದೀಗ ಎಂದಿನಂತೆ ಹಾರಾಟ ಆರಂಭಿಸಲಿದೆ.
ಈ ಕುರಿತು ಜೆಟ್ ಏರ್ ವೇಸ್ ಸಂಸ್ಥೆ ಪ್ರಕಟಣೆಯೊಂದನ್ನು ನೀಡಿ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಆಗಸ್ಟ್ 29ರಂದು ವಿಮಾನ ಸಂಚಾರ ಆರಂಭಗೊಳ್ಳಲಿದೆ ಮೊದಲ ವಿಮಾನ ಮಧ್ಯಾಹ್ನ 2ಗಂಟೆಗೆ ಮೊದಲ ವಿಮಾನ ಹಾರಾಟ ಆರಂಭಿಸಲಿದೆ ಎಂದು ತಿಳಿಸಿದೆ.
ಈ ಮಧ್ಯೆ ಜೆಟ್ ಏರ್ ವೇಸ್ ಸಂಸ್ಥೆ ಪ್ರವಾಹ ಪೀಡಿತ ಕೇರಳ ರಾಜ್ಯಕ್ಕೆ ಸರಕು ಸಾಗಾಟ ಸೇವೆಯನ್ನು ಆರಂಬಿಸಿದ್ದು ಕೇರಳಕ್ಕೆ ಬೇಕಾದ ಪರಿಹಾರ ಸಂತ್ರಸ್ತರ ವಸ್ತುಗಳನ್ನು ಒಳಗೊಂಡ 17ಟನ್ ಗಳ ಪರಿಹಾರ ಸಾಮಗ್ರಿಗಳನ್ನು ಕೂಡ ವಿಮಾನದ ಮೂಲಕ ಸಾಗಾಟ ಮಾಡಲು ಮುಂದಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications