Kolkata Protest: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್, ಆಶ್ರುವಾಯು; ಪಶ್ಚಿಮ ಬಂಗಾಳ ಬಂದ್ಗೆ ಬಿಜೆಪಿ ಕರೆ
ಕೋಲ್ಕತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ, ಪಶ್ಚಿಮ ಬಂಗಾಳದಲ್ಲಿ ಭಾರಿ ಆಕ್ರೋಶ ಹುಟ್ಟುಹಾಕಿದೆ. ಘಟನೆಯನ್ನು ಖಂಡಿಸಿ, ಮಂಗಳವಾರ ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿತ್ತು, ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟಾಗಿದ್ದು, ಲಾಠಿ ಚಾರ್ಜ್ ಮಾಡಿದ್ದು, ಆಶ್ರುವಾಯು ಸಿಡಿಸಿದ್ದಾರೆ.
ಪೊಲೀಸರ ವರ್ತನೆಯಿಂದ ಸಿಟ್ಟಿಗೆದ್ದಿರುವ ಪಶ್ಚಿಮ ಬಂಗಾಳ ಬಿಜೆಪಿ ಬುಧವಾರ 12 ಗಂಟೆಗಳ ಕಾಲ ಮುಷ್ಕರಕ್ಕೆ ಕರೆ ಕೊಟ್ಟಿದೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಜಲಫಿರಂಗಿ, ಅಶ್ರುವಾಯು ಬಳಸಿದ್ದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಮಮತಾ ಬ್ಯಾನರ್ಜಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.

ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣವನ್ನು ಖಂಡಿಸಿ ರಾಜ್ಯ ಕಾರ್ಯದರ್ಶಿ ಮತ್ತು ಸಚಿವಾಲಯಗಳಿರುವ ನಬಣ್ಣ ಭವನಕ್ಕೆ ವಿದ್ಯಾರ್ಥಿಗಳು, ಪ್ರತಿಭಟನಾಕಾರರು ಮೆರವಣಿಗೆ ಮಾಡಲು ನಿರ್ಧರಿಸಿದ್ದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಅಶ್ರುವಾಯು ಶೆಲ್ಗಳು ಮತ್ತು ಜಲಫಿರಂಗಿಗಳನ್ನು ಬಳಸಿದ್ದು ಭಾರಿ ಆಕ್ರೋಶ ಹುಟ್ಟುಹಾಕಿದೆ. ಕೆಲವು ಪ್ರತಿಭಟನಾಕಾರರು ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಿದ್ದಾರೆ.
ಭಾರಿ ಬಂದೋಬಸ್ತ್
ಘಟನೆ ಬಗ್ಗೆ ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಪ್ರತಿಭಟನಾ ಮೆರವಣಿಗೆಗೆ ಅನುಮತಿ ನೀಡಿರಲಿಲ್ಲ, ಆದರೂ ಗಲಭೆ ಮಾಡುವ ಮೂಲಕ ರಾಜ್ಯದಲ್ಲಿ ಅಶಾಂತಿ ಸೃಷ್ಠಿಸಿ, ಹಿಂಸಾಚಾರ ನಡೆಸಲು ಪಿತೂರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದೆ. ಪ್ರತಿಭಟನೆ ಹಿನ್ನಲೆ ನಬಣ್ಣಾ ಭವನಕ್ಕೆ ಭಾರಿ ಬಿಗಿ ಬಂದೋಬಸ್ತ್ ನೀಡಲಾಗಿತ್ತು. 6000 ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಪ್ರತಿಭಟನಾಕಾರರ ಮೇಲೆ ನಿಗಾ ಇಡಲು ಡ್ರೋನ್ಗಳನ್ನು ಸಹ ಬಳಸಲಾಯಿತು. ಬ್ಯಾರಿಕೇಡ್ಗಳನ್ನು ನೆಲಕ್ಕೆ ಬೆಸುಗೆ ಹಾಕಲಾಗಿದೆ ಮತ್ತು ಪ್ರತಿಭಟನಾಕಾರರು ಅವುಗಳ ಮೇಲೆ ಹತ್ತುವುದನ್ನು ತಪ್ಪಿಸಲು ಗ್ರೀಸ್ ಸವರಲಾಗಿತ್ತು.
ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹ
ಮಂಗಳವಾರ ಬೆಳಗ್ಗೆ ಕಾಲೇಜು ಸೌಕದಲ್ಲಿ ಸೇರಿದ ಪ್ರತಿಭಟನಾಕಾರರು ನಬಣ್ಣ ಭವನದ ಕಡೆಗೆ ಸಾಗಿತು. ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಿಭಾಯಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಲಾಯಿತು. ಹಲವು ವಿದ್ಯಾರ್ಥಿ ಸಂಘಟನೆಗಳು ಮತ್ತು ನಾಗರಿಕ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ನೀಡಿದವು.
ಇದು ಬಿಜೆಪಿ ಬೆಂಬಲಿತ ಪ್ರತಿಭಟನೆ ಎಂದು ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ಮಾಡುತ್ತವೆ ಎಂದು ಹೇಳಲಾಗಿತ್ತು, ಆದರೆ ರಾಜಕೀಯ ಪಕ್ಷಗಳಿಗೆ ಸೇರಿದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು ಎಂದು ಹೇಳಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications