ಕೋರೆಗಾಂವ್ ಭೀಮಾ ಆಚರಣೆ: ಕರ್ಣಿ ಸೇನೆ ಆಕ್ಷೇಪಕ್ಕೆ ದಲಿತ ಸಮುದಾಯ, ಕಾಂಗ್ರೆಸ್ನಿಂದ ತರಾಟೆ
ನವದೆಹಲಿ, ಡಿ. 30: ಜನವರಿ 1 ರಂದು ಕೋರೆಗಾಂವ್ ಭೀಮಾ ಕದನದ 205 ನೇ ವಾರ್ಷಿಕೋತ್ಸವಕ್ಕೆ ಕರ್ಣಿ ಸೇನೆ ಆಕ್ಷೇಪ ವ್ಯಕ್ತಪಡಿಸಿದೆ. ಇದಕ್ಕೆ ದಲಿತ ಸಮುದಾಯ ಮತ್ತು ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ಮಹಾರಾಷ್ಟ್ರ ಕರ್ಣಿ ಸೇನೆಯ ಮುಖ್ಯಸ್ಥ ಅಜಯ್ ಸೆಂಗಾರ್ ಅವರು 'ಶೌರ್ಯ ದಿನ' ಆಚರಣೆಯನ್ನು ನಿಷೇಧಿಸಬೇಕು ಮತ್ತು "ಕೋರೆಗಾಂವ್ ಭೀಮಾ ಸ್ಮಾರಕವನ್ನು ಕೆಡವಬೇಕು" ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ದಲಿತ ಸಮುದಾಯ ಮತ್ತು ಕಾಂಗ್ರೆಸ್ನಿಂದ ತೀವ್ರ ಪ್ರತಿಕ್ರಿಯೆ ಬಂದಿದೆ.
ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಪತ್ರ ಬರೆದಿರುವ ಕರ್ಣಿ ಸೇನೆಯ ಮುಖ್ಯಸ್ಥ ಅಜಯ್ ಸೆಂಗಾರ್, ಸ್ಮಾರಕವು ಮರಾಠರ ವಿರುದ್ಧ ಬ್ರಿಟಿಷರ ವಿಜಯವನ್ನು ಆಚರಿಸಿದೆ. ಆದ್ದರಿಂದ ಅದನ್ನು ಮೌಲ್ಯೀಕರಿಸುವುದು ವಿಶ್ವಾಸಘಾತುಕ ಎಂದು ಆರೋಪಿಸಿದ್ದಾರೆ.

"ಪ್ರತಿ ವರ್ಷ ಜನವರಿ 1 ರಂದು ಆಚರಿಸಲಾಗುವ ಶೌರ್ಯ ದಿವಸ್ನಂದು ಭೀಮಾ ಕೋರೆಗಾಂವ್ನಲ್ಲಿರುವ ವಿಜಯ ಸ್ತಂಭವನ್ನು ಮುರಿಯುವುದಾಗಿ ಕರ್ಣಿ ಸೇನೆ ಎಚ್ಚರಿಸುತ್ತಿದೆ. ಮಹಾರಾಷ್ಟ್ರ ಶಾಂತಿಯುತ ರಾಜ್ಯವಾಗಿದ್ದು, ಕೆಲವು ಸಂಘಟನೆಗಳ ಈ ರೀತಿಯ ಬೆದರಿಕೆ ಮತ್ತು ಪ್ರಚೋದನೆ ಒಳ್ಳೆಯದಲ್ಲ. ಸಂಘಟನೆ ಭೀಮ ಭಕ್ತರನ್ನು ಪ್ರಚೋದಿಸಿ ಸಮಾಜದಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿದೆ. ಅವರು ಏನಾದರೂ ಮಾಡಲು ಪ್ರಯತ್ನಿಸಿದರೆ, ಅವರಿಗೆ ತಕ್ಕ ಉತ್ತರ ಸಿಗುತ್ತದೆ" ಎಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ನಿತಿನ್ ರಾವುತ್ ಹೇಳಿದ್ದಾರೆ.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ (ಖಾರತ್ ಬಣ) ಸಚಿನ್ ಖಾರತ್ ಕೂಡ ಕರ್ಣಿ ಸೇನೆಯ ಮುಖ್ಯಸ್ಥ ಅಜಯ್ ಸೆಂಗಾರ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. "ಅವರು ಯಾವಾಗಲೂ ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಅವರ ಬೇಡಿಕೆಗಳು ಸಂಪೂರ್ಣವಾಗಿ ನ್ಯಾಯಸಮ್ಮತವಲ್ಲ. ಅವರಿಗೆ ಇತಿಹಾಸದ ಜ್ಞಾನವಿಲ್ಲ ಎಂದು ತೋರಿಸುತ್ತದೆ. ಇಂತಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಈ ವ್ಯಕ್ತಿಯನ್ನು ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಬಂಧಿಸಬೇಕು' ಎಂದು ಸಚಿನ್ ಖಾರತ್ ಹೇಳಿದ್ದಾರೆ.
ಐತಿಹಾಸಿಕ ದಾಖಲೆಗಳ ಪ್ರಕಾರ, ಜನವರಿ 1, 1818 ರಂದು ಕೋರೆಗಾಂವ್ ಭೀಮಾದಲ್ಲಿ ಪೇಶ್ವೆಗಳ ವಿರುದ್ಧ ಹೋರಾಡಿದ ಸೈನಿಕರ ನೆನಪಿಗಾಗಿ 1821 ರಲ್ಲಿ ಬ್ರಿಟಿಷ್ ಸರ್ಕಾರವು 'ಜಯಸ್ತಂಭ'ವನ್ನು ನಿರ್ಮಿಸಿತು.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications