ಕೃಷ್ಣಾ ನದಿ ಹಂಚಿಕೆ, ನ್ಯಾಯಾಧಿಕರಣದಿಂದ ಕರ್ನಾಟಕಕ್ಕೆ ರಿಲೀಫ್
ಕೃಷ್ಣಾ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬ್ರಿಜೇಶ್ ಕುಮಾರ್ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ತೀರ್ಪು ಪ್ರಕಟಿಸಿದ್ದು, ಅದರಂತೆ ತೆಲಂಗಾಣ ರಾಜ್ಯಕ್ಕೆ ಪ್ರತ್ಯೇಕವಾಗಿ ಕೃಷ್ಣಾ ನದಿ ನೀರು ಹರಿಸಬೇಕಾಗಿಲ್ಲ
ಬೆಂಗಳೂರು, ಅಕ್ಟೋಬರ್ 19: ಕಾವೇರಿ ನದಿ ನೀರು ಹಂಚಿಕೆ ವಿವಾದದ ವಿಚಾರಣೆ ಜಾರಿಯಲ್ಲಿರುವಾಗಲೇ ಕೃಷ್ಣಾ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ಬುಧವಾರ ತನ್ನ ತೀರ್ಪು ಪ್ರಕಟಿಸಿದೆ.
ಕೃಷ್ಣಾ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬ್ರಿಜೇಶ್ ಕುಮಾರ್ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ತೀರ್ಪು ಪ್ರಕಟಿಸಿದ್ದು, ಅದರಂತೆ ತೆಲಂಗಾಣ ರಾಜ್ಯಕ್ಕೆ ಪ್ರತ್ಯೇಕವಾಗಿ ಕೃಷ್ಣಾ ನದಿ ನೀರು ಹರಿಸಬೇಕಾಗಿಲ್ಲ ಎಂದು ಕರ್ನಾಟಕ ಹಾಗೂ ಮಹರಾಷ್ಟ್ರ ರಾಜ್ಯಗಳಿಗೆ ಸೂಚಿಸಲಾಗಿದೆ.
ಆಂಧ್ರಪ್ರದೇಶ ಇಬ್ಭಾಗವಾದ ಬಳಿಕ ಕೃಷ್ಣಾ ನದಿ ನೀರಿನಲ್ಲಿ ನಮಗೂ ಪಾಲು ಬೇಕೆಂದು ತೆಲಂಗಾಣ ಸರ್ಕಾರ ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ಬ್ರಿಜೇಶ್ ಕುಮಾರ್ ನೇತೃತ್ವದ ನ್ಯಾಯಾಧಿಕರಣ ಬುಧವಾರಕ್ಕೆ ತೀರ್ಪು ಕಾಯ್ದಿರಿಸಿತ್ತು.

2010ರಲ್ಲಿ ಕೃಷ್ಣಾ ನದಿ ನೀರು ಹಂಚಿಕೆ ಅಂತಿಮ ತೀರ್ಪು ಬಂದ ಬಳಿಕ ಆಂಧ್ರಪ್ರದೇಶ ಇನ್ನಷ್ಟು ನೀರು ಬೇಕು ಎಂದು ನ್ಯಾಯಾಧಿಕರಣದಲ್ಲಿ ಮರು ಅರ್ಜಿ ಹಾಕಿತ್ತು.
2013ರಲ್ಲಿ ನ್ಯಾಯಾಧೀಕರಣ ನೀಡಿದ ತೀರ್ಪಿನಂತೆ ಮಹಾರಾಷ್ಟಕ್ಕೆ 666 ಟಿಎಂಸಿ, ಕರ್ನಾಟಕಕ್ಕೆ 907 ಟಿಎಂಸಿ ಹಾಗೂ ಆಂಧ್ರಪ್ರದೇಶಕ್ಕೆ 1005 ಟಿಎಂಸಿ ನೀರು ಹಂಚಿಕೆಯಾಗಬೇಕೆಂದು ಆದೇಶಿಸಲಾಗಿತ್ತು.ಕರ್ನಾಟಕದ ಪಾಲಿನಲ್ಲಿ 4 ಟಿಎಂಸಿ ನೀರನ್ನು ಆಂಧ್ರಪ್ರದೇಶಕ್ಕೆ ಬಿಡುವಂತೆ ಆದೇಶ ನೀಡಿತ್ತು.
ಈಗ ಆಂಧ್ರಪ್ರದೇಶಕ್ಕೆ ಈಗ ಹಂಚಿಕೆಯಾಗಿರುವ ನೀರಿನ ಪ್ರಮಾಣದಲ್ಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ಹಂಚಿಕೊಳ್ಳಬೇಕು ಎಂದು ನ್ಯಾಯಾಧಿಕರಣ ತೀರ್ಪಿನಲ್ಲಿ ಹೇಳಿದೆ.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications