KSRTC Bus Video: ರೈಲು ಆಯ್ತು ಇದೀಗ 'ಕರ್ನಾಟಕ ಅಂಬಾರಿ ಉತ್ಸವ' ಮೇಲೆ ಕಲ್ಲೆಸೆತ...
ಬೆಂಗಳೂರು, ನವೆಂಬರ್ 09: ಸಾರಿಗೆಯಲ್ಲಿನ ಅಭಿವೃದ್ಧಿ, ಪ್ರಯಾಣಿಕರಿಗೆ ಐಶಾರಾಮಿ ಮತ್ತು ಆರಾಮದಾಯಕ ಅನುಭವ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮ (KSRTC) ಹೊಸ ಹೊಸ ಬಸ್ಗಳನ್ನು ಪರಿಚಯಿಸುತ್ತಿದೆ. ಮೊನ್ನೆಯಷ್ಟೆ 20 ಮಲ್ಟಿ ಎಕ್ಸೆಲ್ ಐರಾವತ ಎಸಿ ಬಸ್ ಪರಿಚಯಿಸಿದೆ. ಇದರ ಬೆನ್ನಲ್ಲೆ ಎರಡು ದಿನಗಳ ಹಿಂದೆ ನೆರೆ ರಾಜ್ಯದಲ್ಲಿ KSRTC Ambaari Utsav ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದ ಘಟನೆ ನಡೆದಿದೆ.
ಈ ಹಿಂದ ಭಾರತೀಯ ರೈಲ್ವೆ ಇಲಾಖೆಯ ಮಹತ್ವಾಕಾಂಕ್ಷೆಯ ರೈಲು ಆದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಮೇಲೆ ಕಲ್ಲು ಎಸೆದಿದ್ದನ್ನು ಗಮನಿಸಿದ್ದೇವೆ. ಅದರ ಬೆನ್ನಲ್ಲೆ ಕೆಎಸ್ಆರ್ಟಿಸಿಯ ಅಂಬಾರಿ ಉತ್ಸವ ಬಸ್ ಮೇಲೆ ನೆರೆ ತೆಲಂಗಾಣ ರಾಜ್ಯ ರಾಜಧಾನಿ ಹೈದರಾಬಾದ್ ವ್ಯಾಪ್ತಿಯಲ್ಲಿ ಕಲ್ಲು ತೂರಾಟದ ಘಟನೆ ನಡೆದಿದೆ.

KSRTC ಬಸ್ ಕಲ್ಲೆಸೆತದ ವಿಡಿಯೋದಲ್ಲಿ ಏನಿದೆ?
ಘಟನೆಯಲ್ಲಿ ಬಸ್ನ ಗಾಜು ಪುಡಿ ಪುಡಿಯಾಗಿದೆ. ಕಲ್ಲು ಎಸೆತದ ವೇಗಕ್ಕೆ ಕಿಟಕಿ ಗಾಜು ಒಡೆದು ಕಲ್ಲು ಒಳಗೆ ಬಂದು ಬಿದ್ದಿದೆ. ಈ ಕುರಿತ ವಿಡಿಯೋವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಯಾಣಿಕರಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯು ಹೈದರಾಬಾದ್ನ ಶಂಶಾಬಾದ್ನಲ್ಲಿ ನವೆಂಬರ್ 7ರಂದು ರಾತ್ರಿ ನಡೆದಿದೆ ಎಂದು ವರದಿ ಆಗಿದೆ.
ಬೆಂಗಳೂರು-ಹೈದರಾಬಾದ್ ಬಸ್ ಇದಾಗಿತ್ತು. ಎಂದಿನಂತೆ ಬಸ್ ಹೈದರಾಬದ್ ತೆರಳಿ ಮರಳಿ ಬರುವಾಗ ರಾತ್ರಿ 10.45ರ ಸುಮಾರಿಗೆ ಶಂಶಾಬಾದ್ನಲ್ಲಿ ಕಲ್ಲುತೂರಾಟ ನಡೆದಿದೆ. ಬಸ್ನೊಳಗೆ ಪ್ರಯಾಣಕರು ಇದ್ದಾಗಲೇ ಇಂತಹ ಘಟನೆ ನಡೆದಿರುವುದು ಆಕ್ಷೇಪಾರ್ಹ ಮತ್ತು ಖಂಡನೀಯ ಎಂದು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವ ಪ್ರಯಾಣಿಕರಿಗೂ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
It was a beautiful KSRTC Bus - Ambaari Utsav. Stone pelting even on buses started. It was hit near Shamshabad
— Chethan.C.V (@chethancv9) November 7, 2024
Journey from Hyderabad to Bangalore KA57F5380 around 10.45PM@KSRTC_Journeys @TelanganaCMO @TelanganaDGP @TelanganaCOPs pic.twitter.com/HlBFNNFwyO
ಸ್ಥಳಕ್ಕೆ ಪೊಲೀಸರ ದೌಡು: ಕ್ರಮಕ್ಕೆ ಪ್ರಯಾಣಿಕರ ಆಗ್ರಹ
ಇನ್ನೂ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಬಸ್ ಇರುವ ಶಂಶಾಬಾದ್ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಕಲ್ಲೆಸೆತದಿಂದ ಆತಂಕದಲ್ಲಿದ್ದ ಬಸ್ ಪ್ರಯಾಣಿಕರಿಗೆ ಧೈರ್ಯ ಹೇಳಿದ ಪೊಲೀಸರು ಮಾಹಿತಿ ಪಡೆದಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಹಾಗೂ ಪೊಲೀಸರು ಕೂಡಿಕೊಂಡು ಘಟನೆಗೆ ಕಾರಣವಾದ ಪುಂಡರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ. ನಂತರ ಬಸ್ ಅಲ್ಲಿಂದ ಬೆಂಗಳೂರಿಗೆ ಬಂದಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications