Get Updates
Get notified of breaking news, exclusive insights, and must-see stories!

Manipur: ಭದ್ರತಾ ಪಡೆಗಳ ಜೊತೆ ಕುಕಿ ಪ್ರತಿಭಟನಾಕಾರರ ಘರ್ಷಣೆ

ಹೊಸ ವರ್ಷ ಆರಂಭವಾದ ಕೆಲವೇ ದಿನಗಳಲ್ಲಿ ಮಣಿಪುರದಲ್ಲಿ ಮತ್ತೆ ಸಂಘರ್ಷ ಶುರುವಾಗಿದೆ. ಶುಕ್ರವಾರ ಇಲ್ಲಿನ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಕುಕಿ ಬುಡಕಟ್ಟು ಜನಾಂಗದ ಪ್ರತಿಭಟನಾಕಾರರು ಕೇಂದ್ರ ಭದ್ರತಾ ಪಡೆಗಳ ಜೊತೆ ಘರ್ಷಣೆ ನಡೆಸಿದ್ದಾರೆ. ಪ್ರತಿಭಟನಾಕಾರರು ಬೆಟ್ಟಗಳ ಮೇಲೆ ನಿರ್ಮಿಸಿರುವ ಬಂಕರ್ ಗಳನ್ನು ಕಿತ್ತುಹಾಕಲು ಪ್ರಯತ್ನಿಸಿದ್ದಾರೆ.

ರಾಜಧಾನಿ ಇಂಫಾಲ್‌ನಿಂದ 45 ಕಿಲೋ ಮೀಟರ್ ದೂರದಲ್ಲಿರುವ ಕಾಂಗ್‌ಪೋಕ್ಪಿಯಲ್ಲಿರುವ ಬೆಟ್ಟದ ಪ್ರದೇಶಗಳಲ್ಲಿ ನಿಯೋಜಿಸಿರುವ ಕೇಂದ್ರೀಯ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಿ ಆರ್ಥಿಕ ದಿಗ್ಭಂಧನ ವಿಧಿಸಿದ್ದು, ಸಾರಿಗೆ ಸಂಪರ್ಕವನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ.

Kuki protesters clash security forces manipur

ಭದ್ರತಾ ಪಡೆಗಳು ಪ್ರತಿಭಟನಾಕಾರರಿಗೆ ಹಿಂದೆ ಸರಿಯುವಂತೆ ಸೂಚನೆ ಕೊಟ್ಟಿದ್ದಾರೆ. ಆದರೆ ಪ್ರತಿಭಟನಾಕಾರರು ಕಾಂಗ್‌ಪೊಕ್ಪಿ ಜಿಲ್ಲಾಧಿಕಾರಿ ಕಚೇರಿಯತ್ತ ಹೋಗಿದ್ದು ಕಟ್ಟಡದ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ಆಶ್ರುವಾಯು ಪ್ರಯೋಗಿಸಿದ್ದಾರೆ. ಈ ಸಂದರ್ಭದಲ್ಲಿ ಉಂಟಾದ ಗಲಭೆಯಲ್ಲಿ ಹಲವು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕಾಂಗ್‌ಪೊಕ್ಪಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಮನೋಜ್ ಪ್ರಭಾಕರ್ ಸೇರಿದಂತೆ ಕೆಲವು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಶಸ್ತ್ರಾಸ್ತ್ರ ಹೊಂದಿರುವ ಪ್ರತಿಭಟನಾಕಾರರು

ಹಲವು ಪ್ರತಿಭಟನಾಕಾರರ ಬಳಿಕ ಆಧುನಿಕ ಶಸ್ತ್ರಾಸ್ತ್ರಗಳು ಇದ್ದವು ಎಂದು ವರದಿಯಾಗಿದೆ. ಪ್ರತಿಭಟನಾಕಾರರ ಜೊತೆಗೆ ಹಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಹೆದ್ದಾರಿಯಲ್ಲಿ ನಿಂತಿರುವುದು ಕಂಡು ಬಂದಿದೆ ಎಂದು ಮೂಲಗಳು ತಿಳಿಸಿವೆ. ಮೇ 3. 2023ರಲ್ಲಿ ರಾಜ್ಯದಲ್ಲಿ ಜನಾಂಗೀಯ ಸಂಘರ್ಷ ಶುರುವಾಗಿದ್ದು ಕುಕಿ ಪ್ರಾಬಲ್ಯ ಹೊಂದಿರುವ ಚುರಚಂದ್‌ಪುರ ಜಿಲ್ಲೆಯಲ್ಲಿ ಘರ್ಷಣೆ ವೇಳೆಯಲ್ಲಿ ಹಲವು ನಾಗರಿಕರು ಎಕೆ ಸರಣಿಯ ರೈಫಲ್‌ಗಳನ್ನು ಹೊತ್ತೊಯ್ದಿದ್ದಾರೆ.

ಶುಕ್ರವಾರ ಮುಂಜಾನೆ, ಕುಕಿ ಬುಡಕಟ್ಟು ಜನಾಂಗದವರು ನೆಲೆಸಿರುವ ಮಣಿಪುರದ ಎಲ್ಲಾ ಪ್ರದೇಶಗಳಲ್ಲಿ ಕುಕಿ ಸಂರ್ಘಟನೆ ಆರ್ಥಿಕ ದಿಗ್ಬಂಧನ ವಿಧಿಸಿದೆ. ಪ್ರಮುಖ ರಸ್ತೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲಾ ವಾಹನಗಳ ಸಾರಿಗೆಯನ್ನು ನಿಲ್ಲಿಸಲು ಪ್ರಯತ್ನಿಸಲಾಗಿತ್ತು, ಶನಿವಾರದವರೆಗೂ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ತಿಳಿಸಿದೆ.

ಮಾಜಿ ಐಎಎಸ್ ಅಧಿಕಾರಿ ಅಜಯ್ ಕುಮಾರ್ ಭಲ್ಲಾ ಮಣಿಪುರದ ನೂತನ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡ ದಿನದಂದೇ ಕುಕಿ ಸಮುದಾದ ಹೋರಾಟಕ್ಕೆ ಕರೆನೀಡಿದೆ. ಕಾಂಗ್‌ಪೊಕ್ಪಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಮನೋಜ್ ಪ್ರಭಾಕರ್ ಹಣೆಗೆ ಗಾಯವಾಗಿದೆ ಎಂದು ತಿಳಿಸಲಾಗಿದೆ.

ಹೊಸ ವರ್ಷದ ಆರಂಭಕ್ಕೆ ಮುನ್ನ ಮುಖ್ಯಮಂತ್ರಿ ಎನ್ ಬೀರೇನ್ ಸಿಂಗ್ ರಾಜ್ಯದಲ್ಲಿ ಉಂಟಾದ ಸಂಘರ್ಷದ ಬಗ್ಗೆ ಜನರಲ್ಲಿ ಕ್ಷಮೆ ಕೇಳಿದ್ದರು. ರಾಜ್ಯದಲ್ಲಿ ಹಿಂಸಾಚಾರ ಕಡಿಮೆಯಾಗುತ್ತಿದ್ದು 2025ರಲ್ಲಿ ಶಾಂತಿ ನೆಲೆಸಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದರು. ಆದರೆ ವರ್ಷದ ಆರಂಭದಲ್ಲೇ ರಾಜ್ಯದಲ್ಲಿ ಮತ್ತೆ ಪ್ರತಿಭಟನೆ ಆರಂಭವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+