Kulgam encounters: ಕುಲ್ಗಾಮ್ ಎನ್ಕೌಂಟರ್ನಲ್ಲಿ 6 ಭಯೋತ್ಪಾದಕರ ಹತ್ಯೆ
ಶ್ರೀನಗರ, ಜುಲೈ. 07: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಅವಳಿ ಎನ್ಕೌಂಟರ್ಗಳಲ್ಲಿ ಭಾನುವಾರ ಭದ್ರತಾ ಪಡೆಗಳು ಇನ್ನೂ ಎರಡು ಶವಗಳನ್ನು ವಶಪಡಿಸಿಕೊಂಡಿವೆ. ಈ ಹೊಸ ಮಾಹಿತಿ ಪ್ರಕಾರ ಆರು ಭಯೋತ್ಪಾದಕರು ಸೇರಿದಂತೆ ಮೃತರ ಸಂಖ್ಯೆ 8 ಕ್ಕೆ ಏರಿದೆ.
ಕುಲ್ಗಾಮ್ ಜಿಲ್ಲೆಯ ಎರಡು ಗ್ರಾಮಗಳಲ್ಲಿ ಶನಿವಾರ ಅವಳಿ ಎನ್ಕೌಂಟರ್ಗಳು ನಡೆದಿವೆ. "ಇಬ್ಬರು ಭಯೋತ್ಪಾದಕರ ಶವಗಳನ್ನು ಮೊಡೆರ್ಗಾಮ್ ಎನ್ಕೌಂಟರ್ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ನಾಲ್ಕು ಭಯೋತ್ಪಾದಕರ ದೇಹಗಳನ್ನು ಚಿನ್ನಿಗಮ್ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ" ಎಂದು ಕುಲ್ಗಾಮ್ ಎನ್ಕೌಂಟರ್ಗಳ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ.

ಒಬ್ಬ ಪ್ಯಾರಾ ಕಮಾಂಡೋ ಸೇರಿದಂತೆ ಇಬ್ಬರು ಸೇನಾ ಯೋಧರು ಭಯೋತ್ಪಾದಕರ ವಿರುದ್ಧ ಹೋರಾಡುವಾಗ ಹುತಾತ್ಮರಾಗಿದ್ದಾರೆ. ಕೊನೆಯ ವರದಿಗಳು ಬರುವವರೆಗೂ ಉಗ್ರಗಾಮಿ ವಿರೋಧಿ ಕಾರ್ಯಾಚರಣೆ ನಡೆಯುತ್ತಿತ್ತು. ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್ಕೌಂಟರ್ಗಳಲ್ಲಿ ಆರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್ಆರ್ ಸ್ವೈನ್ ಭಾನುವಾರ ದೃಢಪಡಿಸಿದ್ದಾರೆ.
ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಜಿಪಿ ಆರ್ಆರ್ ಸ್ವೈನ್, ಜಿಲ್ಲೆಯಲ್ಲಿ ಎರಡು ವಿಭಿನ್ನ ಸ್ಥಳಗಳಲ್ಲಿ ಎನ್ಕೌಂಟರ್ ನಡೆಯುತ್ತಿದೆ. ಆರು ಭಯೋತ್ಪಾದಕರು ಹತರಾಗಿದ್ದಾರೆ. ಈ ಕಾರ್ಯಾಚರಣೆಗಳು ವೇಗವನ್ನು ಪಡೆಯುತ್ತಿವೆ ಮತ್ತು ಭದ್ರತಾ ವಾತಾವರಣವನ್ನು ಬಲಪಡಿಸುವಲ್ಲಿ ಅಂತಹ ಯಶಸ್ಸಿನ ಕಾರ್ಯಾಚರಣೆ ಇದಾಗಿದೆ ಎಂದು ಒತ್ತಿಹೇಳಿದ್ದಾರೆ.
#WATCH | Srinagar: On the Kulgam encounter, J&K DGP RR Swain says, "According to confirmation, encounters have happened on two different encounter sites. 6 terrorists have been neutralised... Undoubtedly this is a big milestone for the security forces and these successes matter… pic.twitter.com/z9eI3MIUBG
— ANI (@ANI) July 7, 2024
ಭದ್ರತಾ ಪಡೆಗಳಿಗೆ ಮಹತ್ವದ ಮೈಲಿಗಲ್ಲು
"ಇದು ನಿಸ್ಸಂದೇಹವಾಗಿ ಭದ್ರತಾ ಪಡೆಗಳಿಗೆ ಮಹತ್ವದ ಮೈಲಿಗಲ್ಲು. ಭದ್ರತಾ ವಾತಾವರಣವನ್ನು ಬಲಪಡಿಸುವಲ್ಲಿ ಈ ಯಶಸ್ಸುಗಳು ನಿರ್ಣಾಯಕವಾಗಿವೆ. ಜನರು ಭಯೋತ್ಪಾದನೆಯನ್ನು ಕೊನೆಗೊಳಿಸಲು ಒಗ್ಗೂಡುತ್ತಿದ್ದಾರೆ ಮತ್ತು ಕಾರ್ಯಾಚರಣೆಗಳು ವೇಗವನ್ನು ಪಡೆಯುತ್ತಿವೆ. ಪ್ರಸ್ತುತ ಕಾರ್ಯಾಚರಣೆಯು ಇನ್ನೂ ನಡೆಯುತ್ತಿದೆ ಮತ್ತು ಇನ್ನೂ ಮುಕ್ತಾಯಗೊಂಡಿಲ್ಲ" ಎಂದು ಡಿಜಿಪಿ ಆರ್ಆರ್ ಸ್ವೈನ್ ತಿಳಿಸಿದ್ದಾರೆ.
ಈ ಕಾರ್ಯಾಚರಣೆಗಳಲ್ಲಿ ಸ್ಥಳೀಯ ಭಯೋತ್ಪಾದಕರು ಭಾಗಿಯಾಗಿರುವ ವರದಿಗಳನ್ನೂ ಅವರು ಉಲ್ಲೇಖಿಸಿದ್ದಾರೆ. ಮೊದಲ ಎನ್ಕೌಂಟರ್ ಶನಿವಾರ ಮೊಡೆರ್ಗಾಮ್ ಗ್ರಾಮದಲ್ಲಿ ಸಂಭವಿಸಿದೆ. ನಂತರ ಜಿಲ್ಲೆಯ ಫ್ರಿಸಲ್ ಚಿನ್ನಿಗಮ್ ಪ್ರದೇಶದಲ್ಲಿ ಮತ್ತೊಂದು ಎನ್ಕೌಂಟರ್ ಸಂಭವಿಸಿದೆ. ಅಕೋಲಾದಲ್ಲಿ ಸೇನಾ ಯೋಧನ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಕುಲ್ಗಾಮ್ನ ಫ್ರಿಸಲ್ ಚಿನ್ನಿಗಮ್ ಪ್ರದೇಶದಲ್ಲಿ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರೊಂದಿಗಿನ ಘರ್ಷಣೆಯಲ್ಲಿ ಹುತಾತ್ಮರಾದ ಸೇನಾ ಜವಾನ್ ಪ್ರಭಾಕರ್ ಜಂಜಾಲ್ ಅವರ ಅಂತ್ಯಕ್ರಿಯೆಯು ಜುಲೈ 8 ರಂದು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಅವರ ಗ್ರಾಮದಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications