ಕುಂಭ ಮೇಳ ಏಪ್ರಿಲ್ 1ರಿಂದ ಆರಂಭ: 30 ದಿನ ಮಾತ್ರ ಆಚರಣೆ
ಡೆಹರಾಡೂನ್, ಫೆಬ್ರವರಿ 18: ಕೋವಿಡ್ ಸಾಂಕ್ರಾಮಿಕದ ನಡುವೆಯೇ ಉತ್ತರಾಖಂಡ ಸರ್ಕಾರವು ಕುಂಭ ಮೇಳ ಆಯೋಜಿಸುತ್ತಿದ್ದು, ಈ ಬಾರಿಯ ಕುಂಭ ಮೇಳ ಕೇವಲ 30 ದಿನ ನಡೆಯಲಿದೆ.
ಕೋವಿಡ್-19 ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಏಪ್ರಿಲ್ 1 ರಿಂದ ಏಪ್ರಿಲ್ 30ರವರೆಗೆ 30 ದಿನಗಳ ಕಾಲ ಮಾತ್ರ ಕುಂಭ ಮೇಳ ನಡೆಯಲಿದ್ದು, ಮಾರ್ಚ್ ಅಂತ್ಯದ ವೇಳೆಗೆ ಈ ಸಂಬಂಧ ಸೂಚನೆ ಹೊರಡಿಸಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಓಂ ಪ್ರಕಾಶ್ ತಿಳಿಸಿದ್ದಾರೆ.
ಕುಂಭ ಮೇಳ ಈ ಹಿಂದಿನಂತೆ ಸುದೀರ್ಘ ಸಮಯ ನಡೆದರೆ ರಾಜ್ಯವು ಕೋವಿಡ್ ವೈರಸ್ನ ಹಾಟ್ಸ್ಪಾಟ್ ಆಗುವ ಅಪಾಯವಿದೆ ಎಂಬ ಭಯದಿಂದ ಈ ಆಚರಣೆಯ ದಿನಗಳನ್ನು ಕಡಿಮೆ ಮಾಡಲಾಗಿದೆ.

ಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಭಕ್ತಾದಿಗಳು ಪಾಸ್ಗಳನ್ನು ಪಡೆದುಕೊಳ್ಳುವುದು ಕಡ್ಡಾಯವಾಗಲಿದೆ ಎಂದು ಹರಿದ್ವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಿ. ರವಿಶಂಕರ್ ತಿಳಿಸಿದ್ದಾರೆ.
'ಕುಂಭ ಮೇಳದಲ್ಲಿ ಭಾಗವಹಿಸಲು ಭಕ್ತರಿಗೆ ಪಾಸ್ಗಳು ಬೇಕಾಗುತ್ತದೆ. ಭಕ್ತರ ಕೋವಿಡ್ ಆರ್ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ, ವೈದ್ಯಕೀಯ ಪ್ರಮಾಣಪತ್ರ ಮತ್ತು ಗುರುತಿನ ಪತ್ರ ಸಲ್ಲಿಸಿದ ಬಳಿಕವಷ್ಟೇ ಪಾಸ್ ನೀಡಲಾಗುತ್ತದೆ. ಪಾಸ್ಗಳಿಲ್ಲದವರಿಗೆ ಪ್ರವೇಶ ನೀಡುವುದಿಲ್ಲ' ಎಂದು ಅವರು ಹೇಳಿದ್ದಾರೆ.
ಕುಂಭ ಮೇಳದಲ್ಲಿ ಭದ್ರತೆಗೆ ನಿಯೋಜಿಸಲಾಗುವ ಪೊಲೀಸ್ ಸಿಬ್ಬಂದಿಯ ಸುರಕ್ಷತೆ ಖಾತರಿಗೆ 7,000 ಡೋಸ್ಗಳಷ್ಟು ಕೋವಿಡ್ ಲಸಿಕೆಗೆ ಜಿಲ್ಲಾಡಳಿತ ಬೇಡಿಕೆ ಇರಿಸಿದೆ. ಜನರ ಗುಂಪಿನ ಮೇಲೆ ನಿಗಾ ಇರಿಸಲು ಗಂಗಾ ಘಾಟ್ನಲ್ಲಿ ಕ್ಯಾಮೆರಾಗಳನ್ನು ಸಹ ಅಳವಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹರಿದ್ವಾರ, ಉಜ್ಜಯಿನಿ, ಪ್ರಯಾಗ್ರಾಜ್ ಮತ್ತು ನಾಸಿಕ್ನಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಕುಂಭ ಮೇಳ ಜಾತ್ರೆ ನಡೆಯಲಿದೆ. ಹರಿದ್ವಾರ ಮತ್ತು ಪ್ರಯಾಗ್ರಾಜ್ನಲ್ಲಿ ಪ್ರತಿ ಆರು ವರ್ಷಕ್ಕೊಮ್ಮೆ ಅರ್ಧ ಕುಂಭ ಮೇಳ ನಡೆಯುತ್ತದೆ. ಪ್ರಯಾಗ್ರಾಜ್ನಲ್ಲಿ ಪ್ರತಿ 12 ವರ್ಷಕ್ಕೆ ಒಮ್ಮೆ ಪೂರ್ಣ ಕುಂಭ ಮೇಳೆ ನಡೆಯುತ್ತದೆ. ಹಾಗೆಯೇ 144 ವರ್ಷಕ್ಕೆ ಒಮ್ಮೆ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭ ಮೇಳ ನಡೆಯುತ್ತದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications