ಸುಪ್ರೀಂಕೋರ್ಟ್ ವಿರುದ್ಧ ಟೀಕೆ: ಕ್ಷಮೆಯಾಚಿಸುವುದಿಲ್ಲ ಎಂದ ಕುನಾಲ್ ಕಮ್ರಾ
ನವದೆಹಲಿ, ನವೆಂಬರ್ 13: ಸುಪ್ರೀಂಕೋರ್ಟ್ ಅನ್ನು ಸರಣಿ ಟ್ವೀಟ್ಗಳಲ್ಲಿ ಟೀಕಿಸಿರುವ ಕಾರಣಕ್ಕೆ ತಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅನುಮತಿ ನೀಡಿದ ಮರುದಿನ ಪ್ರತಿಕ್ರಿಯೆ ನೀಡಿರುವ ಹಾಸ್ಯ ಕಲಾವಿದ ಕುನಾಲ್ ಕಮ್ರಾ, ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆಯು ಅಥವಾ ಕ್ಷಮೆ ಯಾಚಿಸಲು ಬಯಸಿಲ್ಲ ಎಂದಿದ್ದಾರೆ. ತಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಘೋಷಣೆ ಮಾಡುವ ಮೊದಲು ಸುಪ್ರೀಂಕೋರ್ಟ್ ಸುಮ್ಮನೆ ನಕ್ಕುಬಿಡಬಹುದು ಎಂದು ಹೇಳಿಕೊಂಡಿದ್ದಾರೆ.
'ನನ್ನ ಟ್ವೀಟ್ಗಳನ್ನು ಹಿಂದಕ್ಕೆ ಪಡೆದುಕೊಳ್ಳಲು ನಾನು ಬಯಸಿಲ್ಲ ಅಥವಾ ಅವುಗಳಿಗಾಗಿ ಕ್ಷಮೆ ಕೋರುವುದಿಲ್ಲ. ಅವರು ತಮ್ಮಷ್ಟಕ್ಕೆ ತಾವೇ ಮಾತನಾಡುತ್ತಿದ್ದಾರೆ ಎನಿಸುತ್ತದೆ' ಎಂದು ಕುನಾಲ್ ಕಮ್ರಾ, ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮತ್ತು ಅಟಾರ್ನಿ ಜನರಲ್ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ.
'ಸುಪ್ರೀಂಕೋರ್ಟ್ ಇದುವರೆಗೂ ನನ್ನ ಟ್ವೀಟ್ಗಳ ಬಗ್ಗೆ ಏನನ್ನೂ ಹೇಳಿಲ್ಲ. ಆದರೆ ಅವರು ಹಾಗೆ ಮಾಡಿದಾಗ ಅವುಗಳು ನ್ಯಾಯಾಂಗ ನಿಂದನೆ ಎಂದು ಘೋಷಿಸುವ ಮುನ್ನ ಸಣ್ಣದಾಗಿ ನಗಬಹುದು ಎಂದು ಭರವಸೆ ಹೊಂದಿದ್ದೇನೆ' ಎಂದು ಅವರು ಹೇಳಿದ್ದಾರೆ.

'ಪ್ರೈಮ್ ಟೈಮ್ನ ಲೌಡ್ ಸ್ಪೀಕರ್ (ಅರ್ನಬ್ ಗೋಸ್ವಾಮಿ) ಪರವಾಗಿ ಪಕ್ಷಪಾತಿ ನಿರ್ಣಯ ಪ್ರಕಟಿಸಿದ್ದ ಸುಪ್ರೀಂಕೋರ್ಟ್ ಕುರಿತು ನನ್ನ ಅಭಿಪ್ರಾಯಗಳನ್ನು ಟ್ವೀಟ್ ಮಾಡಿದ್ದೇನೆ. ಇತರೆ ವ್ಯಕ್ತಿಗಳ ವೈಯಕ್ತಿಕ ಸ್ವಾತಂತ್ರ್ಯದ ವಿಚಾರಗಳು ಟೀಕೆಗೆ ಒಳಗಾಗದೆ ಸುಪ್ರೀಂಕೋರ್ಟ್ ಮೌನವಹಿಸಿರುವುದರಿಂದ ನನ್ನ ದೃಷ್ಟಿಕೋನ ಬದಲಾಗುವುದಿಲ್ಲ' ಎಂದು ಅವರು ಬರೆದುಕೊಂಡಿದ್ದಾರೆ.
'ವಕೀಲರಿಲ್ಲ, ಕ್ಷಮೆಯಿಲ್ಲ, ದಂಡವಲ್ಲ, ಜಾಗದ ವ್ಯರ್ಥವೂ ಇಲ್ಲ' ಎಂದು ಅವರು ತಮ್ಮ ಸುದೀರ್ಘ ಬರಹದ ಟಿಪ್ಪಣಿಯೊಂದಿಗೆ ಹೇಳಿಕೊಂಡಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications