ಉಗ್ರ ಲಖ್ವಿ ಬಿಡುಗಡೆ :ಚೀನಾದಿಂದ ಭಾರತಕ್ಕೆ ಅಡ್ಡಗಾಲು
ಬೆಂಗಳೂರು, ಜೂ.24: 26/11ರ ಮುಂಬೈ ಸರಣಿ ಸ್ಫೋಟದ ಪ್ರಕರಣದ ಪ್ರಮುಖ ರೂವಾರಿ ಲಷ್ಕರ್ ಇ ತೋಯ್ಬಾದ ಜಾಕೀ ಉರ್ ರೆಹ್ಮಾನ್ ಲಖ್ವಿ ಬಿಡುಗಡೆಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಗೆ ಭಾರತ ಸಲ್ಲಿಸಿದ ಮನವಿಗೆ ಚೀನಾ ಅಡ್ಡಗಾಲು ಹಾಕಿದೆ. ಈ ಮೂಲಕ ತನ್ನ ಬಹುಕಾಲದ ಮಿತ್ರ ಪಾಕಿಸ್ತಾನದ ಬೆನ್ನ ಹಿಂದೆ ಮತ್ತೊಮ್ಮೆ ನಿಂತಿದೆ.
ಲಖ್ವಿ ಹಸ್ತಾಂತರಕ್ಕೆ ಒಪ್ಪಂದ ಪಾಕಿಸ್ತಾನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿಶ್ವಸಂಸ್ಥೆಗೆ ಭಾರತ ಮನವಿ ಸಲ್ಲಿಸಿದ ಬೆನ್ನಲ್ಲೇ ಚೀನಾ ಭಾರತದ ಕ್ರಮಕ್ಕೆ ತಡೆಯೊಡ್ಡಿದೆ.
ವಿಶ್ವದ ಯಾವುದೇ ಭಾಗದಲ್ಲಿದ್ದರೂ ಅಲ್ ಖಾಯಿದಾ ಹಾಗೂ ಲಷ್ಕರರ್ ಇ ತೋಯ್ಬಾದಂಥ ಉಗ್ರ ಸಂಘಟನೆಗಳೊಂದಿಗೆ ನಿಕಟ ಸಂಪರ್ಕ ಹೊಂದಿರುವ ಸಂಸ್ಥೆ ಅಥವಾ ವ್ಯಕ್ತಿಗಳಿಗೆ ವಿಶ್ವಸಂಸ್ಥೆಯ ನಿರ್ಬಂಧ ನಿಯಮಾವಳಿ ಅನ್ವಯಿಸುತ್ತದೆ. ಆದರೆ, ವಿಶ್ವಸಂಸ್ಥೆಯ ನಿರ್ಬಂಧ ಸಮಿತಿ ಚರ್ಚೆ ಸಂದರ್ಭದಲ್ಲಿ ಭಾರತದ ಮನವಿಯಲ್ಲಿ ಹುರುಳಿಲ್ಲ, ಸರಿಯಾದ ದಾಖಲೆ ಒದಗಿಸಿಲ್ಲ ಎಂದು ಚೀನಾ ವಿರೋಧ ವ್ಯಕ್ತಪಡಿಸಿದೆ.
ಚೀನಾದಿಂದ ಭಯೋತ್ಪಾದನೆ ವಿರೋಧಿ ನಾಟಕ
ರಿಸರ್ಚ್ ಆಂಡ್ ಅನಾಲಿಸಿಸ್ ವಿಂಗ್ ನ ಮಾಜಿ ಮುಖ್ಯಸ್ಥರಾದ ಸಿಡಿ ಸಹಾಯ್ ಅವರು ಒನ್ ಇಂಡಿಯಾಕ್ಕೆ ನೀಡಿರುವ ಪ್ರತಿಕ್ರಿಯೆಯಂತೆ, ಇದು ಭಯೋತ್ಪಾದನೆ ವಿರುದ್ಧ ಚೀನಾ ತೆಗೆದುಕೊಂಡ ಕ್ರಮವಂತೂ ಅಲ್ಲ. ಎಲ್ಲಾ ಕಾಲಕ್ಕೂ ಪಾಕಿಸ್ತಾನವನ್ನು ಬೆಂಬಲಿಸುತ್ತಾ ಬಂದಿರುವ ಚೀನಾ ಈಗಲೂ ಅದೇ ಕೆಲಸವನ್ನು ಮಾಡಿದೆ. ಇದಕ್ಕೆ ವಿಶ್ವಸಂಸ್ಥೆ ಸಭೆಯಲ್ಲೇ ಸಾಕ್ಷಿ ಸಿಕ್ಕಿದೆ ಎಂದಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವ
ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವ ನೀಡಲು ಅಮೆರಿಕ ಇತ್ತೀಚೆಗೆ ಬೆಂಬಲ ವ್ಯಕ್ತಪಡಿಸಿತ್ತು. ಇದಕ್ಕೆ ಪೂರಕವಾಗಿ ಚೀನಾ ಕೂಡಾ ಭಾರತಕ್ಕೆ ವಿಶ್ವಸಂಸ್ಥೆಯ ಖಾಯಂ ಸದಸ್ಯತ್ವ ನೀಡುವಂತೆ ಬೆಂಬಲ ಸೂಚಿಸಿತ್ತು. ಆದರೆ, ಈಗ ವಿಶ್ವಸಂಸ್ಥೆಯಲ್ಲಿ ಭಾರತದ ನಡೆಗೆ ಚೀನಾ ತಡೆ ಒಡ್ಡಿದೆ.
ವಿಶ್ವಸಂಸ್ಥೆಯ ನಿರ್ಬಂಧ ಸಮಿತಿಯ ಐದು ಖಾಯಂ ಹಾಗೂ 10 ಖಾಯಂ ಅಲ್ಲದ ಸದಸ್ಯರಾಷ್ಟ್ರಗಳಿವೆ. ಲಖ್ವಿ ಬಿಡುಗಡೆ ಬಗ್ಗೆ ಅಮೆರಿಕ, ರಷ್ಯಾ, ಬ್ರಿಟನ್, ಫ್ರಾನ್ಸ್ ಹಾಗೂ ಜರ್ಮನಿ ಕೂಡಾ ಕಳವಳ ವ್ಯಕ್ತಪಡಿಸಿವೆ.
2015ರ ಏಪ್ರಿಲ್ 8ರಂದು ಪಾಕ್ ನ್ಯಾಯಾಲಯವೊಂದು ಲಖ್ವಿಯನ್ನು ಪ್ರಕರಣದಲ್ಲಿ ದೋಷಮುಕ್ತಗೊಳಿಸಿ ಬಿಡುಗಡೆಗೊಳಿಸಿತ್ತು. ಈ ಬೆಳವಣಿಗೆಯು, ಗಡಿಯಾಚೆಗಿನ ಭಯೋತ್ಪಾದನೆಯ ಬಗ್ಗೆ ತೆಗೆದುಕೊಳ್ಳುವ ಕಠಿಣ ಕ್ರಮಗಳ ಭರವಸೆಯನ್ನು ಪಾಕಿಸ್ತಾನ ಹುಸಿಗೊಳಿಸಿರುವುದಾಗಿ ಭಾರತ ಪ್ರತಿಕ್ರಿಯಿಸಿತ್ತು.
ತನಿಖೆ, ವಿಚಾರಣೆ ಎಲ್ಲವೂ ಆಮೆಗತಿಯಲ್ಲಿದೆ
ಲಖ್ವಿ ಬಿಡುಗಡೆ ನಂತರ ಎಲ್ಲಿದ್ದಾನೆ? ಹೇಗಿದ್ದಾನೆ? ಎಂಬ ಮಾಹಿತಿ ಪಾಕಿಸ್ತಾನಕ್ಕೆ ಬಿಟ್ಟರೆ ಉಳಿದವರೇ ಗೊತ್ತಿಲ್ಲ. ಎಲ್ಲಾ ಜಿಹಾದಿಗಳ ಇಮಾಮ್ ರೀತಿಯಲ್ಲಿ ಉಳಿಸಿಕೊಳ್ಳಲಾಗಿರುವುದರಿಂದ ಆತನ ವಿರುದ್ಧ ಯಾವುದೇ ಕ್ರಮ ಜರುಗಿಸುವುದು ಅಥವಾ ವಿಚಾರಣೆಗಾಗಿ ಭಾರತಕ್ಕೆ ಹಸ್ತಾಂತರಿಸುವುದು ಎಲ್ಲವೂ ಅಸಾಧ್ಯದ ಮಾತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications