ಮಾಯಾವತಿ ಪ್ರಕರಣ: ಬಿಜೆಪಿ ದಲಿತ ವಿರೋಧಿ ಎಂದು ಕಿಡಿಕಾರಿದ ಲಾಲು
ರಾಜ್ಯಸಭಾ ಸದಸ್ಯತ್ವಕ್ಕೆ ಮಾಯಾವತಿ ರಾಜಿನಾಮೆ ಸಲ್ಲಿಸಿದ್ದಕ್ಕೆ ಲಾಲು ಪ್ರತಿಕ್ರಿಯೆ. ಬಿಜೆಪಿ ದಲಿತ ವಿರೋಧಿ ಎಂದು ಕಿಡಿ ಕಾರಿದ ಆರ್ ಜೆಡಿ ನಾಯಕ.
ಪಾಟ್ನಾ, ಜುಲೈ 18: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಹುಜನ ಸಮಾಜವಾದಿ ಪಕ್ಷದ (ಬಿಎಸ್ ಪಿ) ನಾಯಕಿ ಮಾಯಾವತಿ ಅವರಿಗೆ ರಾಜ್ಯಸಭೆಯಲ್ಲಿ ಮಾತನಾಡಲು ಅನುಮತಿ ನಿರಾಕರಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್, ಬಿಜೆಪಿ ಪಕ್ಷವು ದಲಿತ ವಿರೋಧಿ ಎಂದು ಕಿಡಿಕಾರಿದ್ದಾರೆ.
ರಾಜ್ಯಸಭೆಯಲ್ಲಿ ಇಂದು (ಜುಲೈ 18) ಮಾಯಾವತಿ ಅವರು, ಉತ್ತರ ಪ್ರದೇಶದಲ್ಲಿ ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯದ ಕುರಿತಂತೆ ಮಾತನಾಡಲು ಎದ್ದು ನಿಂತಾಗ ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ಇದನ್ನು ಪ್ರತಿಭಟಿಸಿದ್ದ ಮಾಯಾವತಿ, ತಮಗೆ ಮಾತನಾಡಲು ಅನುಮತಿ ನಿರಾಕರಿಸಿದರೆ ತಾವು ತಮ್ಮ ಸಂಸತ್ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುವುದಾಗಿ ಆರ್ಭಟಿಸಿದ್ದರು.

ಅದರಂತೆ, ಜುಲೈ 18ರ ಸಂಜೆ ವೇಳೆ ಅವರು, ತಮ್ಮ ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಾಲು, ''ಸದನದಲ್ಲಿ ಮಾಯಾವತಿಯವರು ದಲಿತರ ಸಮಸ್ಯೆಗಳನ್ನು ಹೇಳಲು ಮುಂದಾದಾಗ ಅವರಿಗೆ ಮಾತನಾಡಲು ಅವಕಾಶ ನೀಡಲಾಗಿಲ್ಲ. ಇದು ಬಿಜೆಪಿಯು ದಲಿತ ವಿರೋಧಿಯೆಂಬುದನ್ನು ಸಾಬೀತುಪಡಿಸಿದೆ'' ಎಂದಿದ್ದಾರೆ.
ತಮ್ಮ ಮಾತನ್ನು ಮುಂದುವರಿಸಿದ ಅವರು, ''ಮಾಯಾವತಿಯವರು ಕೋಪದಿಂದ ಸಂಸತ್ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿರಬಹುದು. ಆದರೆ, ಅವರು ಬಯಸಿದರೆ ನಾವು ಪುನಃ ಅವರನ್ನು ಮತ್ತೆ ರಾಜ್ಯಸಭೆಗೆ ಆರಿಸಿ ಕಳುಹಿಸುತ್ತೇವೆ'' ಎಂದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications