ಮೇವು ತಿಂದ ಲಾಲೂ ಪ್ರಸಾದ್ ಯಾದವ್ ದೋಷಿ
ರಾಂಚಿ, ಡಿಸೆಂಬರ್ 23: 900 ಕೋಟಿ ರೂ.ಗಳ ಮೇವು ಹಗರಣದ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ದೋಷಿ ಎಂದು ಜಾರ್ಖಂಡ್ ನ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ.
ಜಾರ್ಖಂಡ್ ನ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯ ನ್ಯಾಯಾಧೀಶ ಶಿವಪಾಲ್ ಸಿಂಗ್ ಅವರು ತೀರ್ಪು ನೀಡಿ ಶನಿವಾರ ಆದೇಶ ಹೊರಡಿಸಿದರು. ಜನವರಿ 3ರಂದು ಶಿಕ್ಷೆ ಪ್ರಕಟವಾಗಲಿದೆ.
ಲಾಲೂ ಸೇರಿ 22 ಆರೋಪಿಗಳ ಪೈಕಿ 7 ಜನರಿಗೆ ಸಿಬಿಐ ಕೋರ್ಟ್ ಖುಲಾಸೆಗೊಳಿಸಿದೆ. ಒಟ್ಟು 6 ಪ್ರಕರಣಗಳಲ್ಲಿ ಎರಡು ಪ್ರಕರಣಕ್ಕೆ ತೀರ್ಪು ಪ್ರಕಟಿಸಿದ್ದು, ಇನ್ನುಳಿದ 4 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ.

ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಲಾಲೂ ಪ್ರಸಾದ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಇದರಿಂದ ಲಾಲೂ ಪ್ರಸಾದ್ ಅವರು ಈ ಬಾರಿಯ ಹೊಸ ವರ್ಷವನ್ನು ಜೈಲಿನಲ್ಲಿಯೇ ಕಳೆಯಬೇಕಾಗಿದೆ.
ಇದೇ ಪ್ರಕರಣದಲ್ಲಿ ಲಾಲು ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಅದರಲ್ಲಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿ ಸುಪ್ರೀಂ ಕೋರ್ಟ್ ನೀಡಿದ ಜಾಮೀನಿನ ಮೇಲೆ ಹೊರಬಂದಿದ್ದರು. 1996ರಲ್ಲಿ ಬೆಳಕಿಗೆ ಬಂದ ಈ ಪ್ರಕರಣದ ವಿಚಾರಣೆ ಡಿಸೆಂಬರ್ 13, 2017ಕ್ಕೆ ಅಂತ್ಯವಾಗಿತ್ತು.
ಪಶುಗಳಿಗೆ ಮೇವು ಪೂರೈಸುವುದಾಗಿ ಸುಳ್ಳು ಬಿಲ್ಲು ಸೃಷ್ಟಿಸಿ ಅಕ್ರಮವಾಗಿ ದೇವಗಡ್ ಖಜಾನೆಯಿದ 89 ಲಕ್ಷ ರು ಪಡೆದ ಆರೋಪ ಎದುರುಸುತ್ತಿದ್ದರು.
1994-1996 ರಲ್ಲಿ ಬಿಹಾರದಲ್ಲಿ ನಡೆದ ಈ ಹಗರಣದಲ್ಲಿ ಪಶುಗಳಿಗೆ ಮೇವು ಹಾಗೂ ಔಷಧಿ ಪೂರೈಸುವ ಉದ್ದೇಶದಿಂದ ಡಿಯೋದರ್(ಈಗ ಜಾರ್ಖಾಂಡ್ ರಾಜ್ಯದಲ್ಲಿದೆ) ಎಂಬ ಜಿಲ್ಲೆಯ ಸರ್ಕಾರಿ ಖಜಾನೆಯಿಂದ ಕೋಟ್ಯಂತರ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿತ್ತು.
ಆದರೆ ಈ ಹಣವನ್ನು ಮೂಲ ಉದ್ದೇಶಕ್ಕಾಗಿ ಬಳಸಿಕೊಳ್ಳದೆ ಬಿಹಾರದ ಆಗಿನ ಮುಖ್ಯಮಂತ್ರಿಯಾಗಿದ್ದ ಲಾಲೂ ಯಾದವ್ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೆ ಎಂಬುದು ಆರೋಪವಾಗಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications