ಮೇವು ಹಗರಣದ ಮೂರನೇ ಪ್ರಕರಣದಲ್ಲೂ ಲಾಲೂ ದೋಷಿ
ರಾಂಚಿ, ಜನವರಿ 24: ಮೂರನೇ ಮೇವು ಹಗರಣದಲ್ಲೂ ಆರ್.ಜೆ.ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ದೋಷಿ ಎಂದು ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಇನ್ನೋರ್ವ ಬಿಹಾರದ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಮಿಶ್ರಾ ಕೂಡ ಪ್ರಕರಣದಲ್ಲಿ ಅಪರಾಧಿ ಎಂದು ಕೋರ್ಟ್ ಆದೇಶ ನೀಡಿದೆ.
1992-93ರಲ್ಲಿ ಚೈಬಾಸಾ (ಸದ್ಯ ಜಾರ್ಖಂಡ್ ನಲ್ಲಿದೆ) ಖಜಾನೆಯಿಂದ ಅಕ್ರಮವಾಗಿ 33.67 ಕೋಟಿ ರೂಪಾಯಿ ಹಣ ಡ್ರಾ ಮಾಡಿದ ಪ್ರಕರಣ ಇದಾಗಿದೆ. ಲಾಲೂ ಪ್ರಸಾದ್ ಯಾದವ್ ಮತ್ತು ಜಗನ್ನಾಥ ಮಿಶ್ರಾ ಸೇರಿ ಪ್ರಕರಣದಲ್ಲಿ 56 ಮಂದಿ ದೋಷಿಗಳು ಎಂದು ನ್ಯಾಯಾಲಯ ಹೇಳಿದೆ.
ತೀರ್ಪಿನ ಬೆನ್ನಿಗೆ ಪ್ರತಿಕ್ರಿಯೆ ನೀಡಿರುವ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್, "ಲಾಲೂಜೀ ವಿರುದ್ಧ ಬಿಜೆಪಿ, ಆರ್.ಎಸ್.ಎಸ್ ಹಾಗೂ ಅದಕ್ಕಿಂತ ಹೆಚ್ಚಾಗಿ ನಿತೀಶ್ ಕುಮಾರ್ ಹೇಗೆ ಸಂಚು ರೂಪಿಸಿದರು ಎಂಬುದು ಜನರಿಗೆ ಗೊತ್ತಿದೆ. ಈ ಎಲ್ಲಾ ಆದೇಶಗಳ ವಿರುದ್ಧ ನಾವು ಉನ್ನತ ನ್ಯಾಯಾಲಯಗಳಿಗೆ ಮೇಲ್ಮನವಿ ಸಲ್ಲಿಸಲಿದ್ದೇವೆ," ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 20, 2013ರಲ್ಲಿ ಮೇವು ಹಗರಣದ ಮೊದಲ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್ ದೋಷಿ ಎಂದು ತೀರ್ಪು ಹೊರ ಬಿದ್ದಿತ್ತು. ಈ ಪ್ರಕರಣದಲ್ಲಿ 5 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಲಾಲೂ ನಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದರು.
ಬಳಿಕ ಜನವರಿ 6, 2018ರಲ್ಲಿ ಲಾಲೂ ಪ್ರಸಾದ್ ಯಾದವ್ ಮೇವು ಹಗರಣದ ಎರಡನೇ ಪ್ರಕರಣದಲ್ಲಿ ಮೂರೂವರೆ ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಈ ಪ್ರಕರಣದಲ್ಲಿ ಸದ್ಯ ಶಿಕ್ಷೆ ಅನುಭವಿಸುತ್ತಿರುವ ಲಾಲೂ ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಇದೀಗ ಮೂರನೇ ಪ್ರಕರಣದಲ್ಲಿ ಅವರು ದೋಷಿ ಎಂಬ ತೀರ್ಪು ಹೊರಬಿದ್ದಿದೆ. ಪ್ರಕರಣದಲ್ಲಿ ಶಿಕ್ಷೆ ಪ್ರಮಾಣವನ್ನು ಕೋರ್ಟ್ ಇನ್ನೂ ಪ್ರಕಟಿಸಿಲ್ಲ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications