ಲಾಲು ಪ್ರಸಾದ್ ಯಾದವ್ಗೆ ಕಿಡ್ನಿ ಶಸ್ತ್ರಚಿಕಿತ್ಸೆ ಯಶಸ್ವಿ
ಲಕ್ನೋ, ಡಿಸೆಂಬರ್ 5: ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಯಾದವ್ ಅವರ ಕಿಡ್ನಿ ಕಸಿ ಪ್ರಕ್ರಿಯೆ ಯಶಸ್ವಿಯಾಗಿದ್ದು, ಅವರ ಮಗಳು ರೋಹಿಣಿ ಆಚಾರ್ಯ ಅವರು ತಂದೆಗೆ ಕಡ್ನಿಯನ್ನು ದಾನ ಮಾಡಿದ್ದಾರೆ.
ಈ ಬಗ್ಗೆ ಟ್ವಿಟರ್ನಲ್ಲಿ ತನ್ನ ತಂದೆಯೊಂದಿಗೆ ಶಸ್ತ್ರಚಿಕಿತ್ಸೆಯ ಪೂರ್ವ ಫೋಟೋವನ್ನು ಹಂಚಿಕೊಂಡಿರುವ ರೋಹಿಣಿ ಆಚಾರ್ಯ ಅವರು ರಾಕ್ ಅಂಡ್ ರೋಲ್ ಮಾಡಲು ಸಿದ್ಧ ಎಂದು ಹೇಳಿದ್ದು, ಅವರ ಅನುಯಾಯಿಗಳಿಗೆ ತಮ್ಮ ತಂದೆಗಾಗಿ ಪ್ರಾರ್ಥಿಸಲು ಕೇಳಿಕೊಂಡರು. ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಲಾಲು ಪ್ರಸಾದ್ ಯಾದವ್ ಅವರಿಗೆ ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಲಾಗಿತ್ತು ಎಂದು ಅವರ ಮಗಳು ರೋಹಿಣಿ ಆಚಾರ್ಯ ಅವರು ದೃಢಪಡಿಸಿದ್ದಾರೆ. ಅವರು ತಮ್ಮ ಮೂತ್ರಪಿಂಡಗಳಲ್ಲಿ ಒಂದನ್ನು ತಮ್ಮ ತಂದೆಗೆ ದಾನ ಮಾಡಿರುವುದಾಗಿ ತಿಳಿಸಿದ್ದಾರೆ.
ಲಾಲು ಪ್ರಸಾದ್ ಯಾದವ್ ಅವರ ಸಿಂಗಾಪುರ ಮೂಲದ ಎರಡನೇ ಪುತ್ರಿ ರೋಹಿಣಿ ಆಚಾರ್ಯ ಆಗಾಗ್ಗೆ ಟ್ವಿಟರ್ನಲ್ಲಿ ತನ್ನ ತಂದೆಯ ಬಗ್ಗೆ ಬರೆಯುತ್ತಾರೆ. ಇತ್ತೀಚೆಗಷ್ಟೇ ಅವರು ಟ್ವೀಟ್ ಮಾಡಿದ್ದು, ನನ್ನ ತಾಯಿ ಮತ್ತು ತಂದೆ ನನಗೆ ದೇವರು, ನಾನು ಅವರಿಗಾಗಿ ಏನು ಬೇಕಾದರೂ ಮಾಡುತ್ತೇನೆ ಎಂದು ಬರೆದುಕೊಂಡಿದ್ದರು. ಮೂತ್ರಪಿಂಡ ಕಸಿ ಮಾಡುವಾಗ, ಅವರು ತನ್ನ ತಂದೆಗೆ ನೀಡಲು ಕಿಡ್ನಿ ಬಯಸಿದ್ದು ಕೇವಲ ಒಂದು ಸಣ್ಣ ಮಾಂಸದ ತುಂಡು ಎಂದು ಹೇಳಿದ್ದರು.

ರೋಹಿಣಿ ಅವರ ಸಹೋದರಿ ಮತ್ತು ಲಾಲು ಯಾದವ್ ಅವರ ಹಿರಿಯ ಪುತ್ರಿ ಡಾ. ಮಿಸಾ ಭಾರತಿ ಅವರು ರಾಜ್ಯಸಭಾ ಸಂಸದರಾಗಿದ್ದಾರೆ. ಅವರು ಶಸ್ತ್ರಚಿಕಿತ್ಸೆ ನಡೆಯುತ್ತಿರುವ ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಿಂದ ಟ್ವೀಟ್ ಮಾಡಿ "ತಂಗಿ ರೋಹಿಣಿಯ ಆಪರೇಷನ್ ಯಶಸ್ವಿಯಾಗಿ ಮಾಡಲಾಗಿದೆ. ಅವರು ಈಗ ಐಸಿಯುನಲ್ಲಿ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ. ಈಗ ತಂದೆಯ ಆಪರೇಷನ್ ನಡೆಯುತ್ತಿದೆ ಎಂದು ಅವರು ಹೇಳಿದ್ದರು.
ಶಸ್ತ್ರಚಿಕಿತ್ಸೆಗೆ ಮುನ್ನ ಆಕೆಯ ಮತ್ತು ಆಕೆಯ ತಂದೆಯ ಫೋಟೋವನ್ನು ಸಹ ಅವರು ಹಂಚಿಕೊಂಡಿದ್ದಾರೆ. ಲಾಲು ಪ್ರಸಾದ್ ಯಾದವ್ ಅವರ ಪುತ್ರ, ಬಿಹಾರದ ಹಾಲಿ ಉಪಮುಖ್ಯಮಂತ್ರಿ, ತೇಜಸ್ವಿ ಯಾದವ್, ಶಸ್ತ್ರಚಿಕಿತ್ಸೆಯ ನಂತರ ವೀಡಿಯೊವನ್ನು ಹಂಚಿಕೊಂಡಿದ್ದು, "ಪಾಪ್ಪಾ ಅವರ ಮೂತ್ರಪಿಂಡ ಕಸಿ ಕಾರ್ಯಾಚರಣೆ ಯಶಸ್ವಿಯಾದ ನಂತರ ಅವರನ್ನು ಆಪರೇಷನ್ ಥಿಯೇಟರ್ನಿಂದ ಐಸಿಯುಗೆ ಸ್ಥಳಾಂತರಿಸಲಾಯಿತು. ಸಹೋದರಿ ರೋಹಿಣಿ ಆಚಾರ್ಯ ಮತ್ತು ರಾಷ್ಟ್ರೀಯ ಅಧ್ಯಕ್ಷರು ಇಬ್ಬರೂ ಆರೋಗ್ಯವಾಗಿದ್ದಾರೆ. ನಿಮ್ಮ ಪ್ರಾರ್ಥನೆ ಮತ್ತು ಶುಭ ಹಾರೈಕೆಗಳಿಗೆ ಧನ್ಯವಾದಗಳು." ಎಂದು ಹೇಳಿದ್ದಾರೆ.

ಮೇವು ಹಗರಣ ಪ್ರಕರಣಗಳಲ್ಲಿ ಅಪರಾಧಿಯಾಗಿರುವ ಲಾಲು ಪ್ರಸಾದ್ ಯಾದವ್ ಅವರು ಆರೋಗ್ಯ ಸಮಸ್ಯೆಗಳಿಂದಾಗಿ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರು ಈ ವರ್ಷದ ಆರಂಭದಲ್ಲಿ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಭೇಟಿ ತೆರಳಿದ್ದರು. ಆದರೆ ದೆಹಲಿ ನ್ಯಾಯಾಲಯವು ಅವರ ವಿದೇಶಿ ಭೇಟಿಗೆ ನಿಗದಿಪಡಿಸಿದ ಅವಧಿಯ ಮುಕ್ತಾಯದ ಕಾರಣ ಹಿಂತಿರುಗಬೇಕಾಯಿತು. ಅವರು ತಮ್ಮ ಮೂತ್ರಪಿಂಡ ಕಸಿ ಮಾಡಿಸಿಕೊಳ್ಳಲು ಪ್ರಸ್ತುತ ಸಿಂಗಾಪುರದಲ್ಲಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications