ಐಶ್ವರ್ಯಾ ರೈ ಜತೆ ಲಾಲು ಮಗನ ನಿಶ್ಚಿತಾರ್ಥ!
ಪಟ್ನಾ, ಏಪ್ರಿಲ್ 19: ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಮೊದಲ ಮಗ ಬಿಹಾರದ ಮಾಜಿ ಆರೋಗ್ಯ ಸಚಿವ ತೇಜ್ ಪ್ರತಾಪ್ ಯಾದವ್ ವಿವಾಹ ನಿಶ್ಚಿತಾರ್ಥ ಐಶ್ವರ್ಯಾ ರೈ ಜತೆಗೆ ನಡೆದಿದೆ.
ಅಮಿತಾಭ್ ಬಚ್ಚನ್ ಕುಟುಂಬದ ಸೊಸೆಯಾಗಿರುವ ನಟಿ ಐಶ್ವರ್ಯಾ ರೈ ಎಂಬ ಗೊಂದಲ ಬೇಡ. ಲಾಲು ಸೊಸೆಯಾಗುತ್ತಿರುವ ಈ ಐಶ್ವರ್ಯಾ, ಮಾಜಿ ಸಚಿವ ಚಂದ್ರಿಕ ರೈ ಅವರ ಮಗಳು.
ನಿಶ್ಚಿತಾರ್ಥ ಸಮಾರಂಭ ಬುಧವಾರ ಪಟ್ನಾದ ಐಷಾರಾಮಿ ಹೋಟೆಲ್ ಒಂದರಲ್ಲಿ ನಡೆಯಿತು. ಕುಟುಂಬದವರು ಮತ್ತು ಸ್ನೇಹಿತರು ಈ ಸಂದರ್ಭದಲ್ಲಿ ಹಾಜರಿದ್ದರು.

ಚಂದ್ರಿಕ ರೈ ಅವರ ತಂದೆ ದರೋಗಾ ಪ್ರಸಾದ್ ರೈ 1970ರಲ್ಲಿ ಕೆಲ ಕಾಲದವರೆಗೆ ಬಿಹಾರದ ಮುಖ್ಯಮಂತ್ರಿ ಆಗಿದ್ದರು. ಆಗ ಲಾಲು ಪ್ರಸಾದ್ ವಿದ್ಯಾರ್ಥಿ ನಾಯಕರಾಗಿದ್ದರು.
ನಿಶ್ಚಿತಾರ್ಥಕ್ಕೆ ಲಾಲು ಗೈರು
ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಅನುಪಸ್ಥಿತಿಯಲ್ಲಿ ನಿಶ್ಚಿತಾರ್ಥ ನಡೆಯಿತು. ಅನಾರೋಗ್ಯಕ್ಕೆ ಒಳಗಾಗಿರುವ ಲಾಲು ಪ್ರಸ್ತುತ ನವದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೇ 12ರಂದು ಮದುವೆ ನಡೆಯಲಿದ್ದು, ಸೋನಿಯಾ ಗಾಂಧಿ, ನಿತೀಶ್ ಕುಮಾರ್, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಮತ್ತು ಸುಶೀಲ್ ಕುಮಾರ್ ಮೋದಿ ಸೇರಿದಂತೆ ಪ್ರಮುಖ ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ಲಾಲು ಕುಟುಂಬದ ಆಪ್ತ, ಶಾಸಕ ಭೋಲಾ ಯಾದವ್ ತಿಳಿಸಿದ್ದಾರೆ. ಲಾಲು ಅವರು ಮದುವೆ ಸಮಾರಂಭಕ್ಕೆ ಹಾಜರಾಗಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications