ಐಶ್ವರ್ಯಾ ರೈ ಜತೆ ಲಾಲು ಮಗನ ನಿಶ್ಚಿತಾರ್ಥ!
ಪಟ್ನಾ, ಏಪ್ರಿಲ್ 19: ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಮೊದಲ ಮಗ ಬಿಹಾರದ ಮಾಜಿ ಆರೋಗ್ಯ ಸಚಿವ ತೇಜ್ ಪ್ರತಾಪ್ ಯಾದವ್ ವಿವಾಹ ನಿಶ್ಚಿತಾರ್ಥ ಐಶ್ವರ್ಯಾ ರೈ ಜತೆಗೆ ನಡೆದಿದೆ.
ಅಮಿತಾಭ್ ಬಚ್ಚನ್ ಕುಟುಂಬದ ಸೊಸೆಯಾಗಿರುವ ನಟಿ ಐಶ್ವರ್ಯಾ ರೈ ಎಂಬ ಗೊಂದಲ ಬೇಡ. ಲಾಲು ಸೊಸೆಯಾಗುತ್ತಿರುವ ಈ ಐಶ್ವರ್ಯಾ, ಮಾಜಿ ಸಚಿವ ಚಂದ್ರಿಕ ರೈ ಅವರ ಮಗಳು.
ನಿಶ್ಚಿತಾರ್ಥ ಸಮಾರಂಭ ಬುಧವಾರ ಪಟ್ನಾದ ಐಷಾರಾಮಿ ಹೋಟೆಲ್ ಒಂದರಲ್ಲಿ ನಡೆಯಿತು. ಕುಟುಂಬದವರು ಮತ್ತು ಸ್ನೇಹಿತರು ಈ ಸಂದರ್ಭದಲ್ಲಿ ಹಾಜರಿದ್ದರು.

ಚಂದ್ರಿಕ ರೈ ಅವರ ತಂದೆ ದರೋಗಾ ಪ್ರಸಾದ್ ರೈ 1970ರಲ್ಲಿ ಕೆಲ ಕಾಲದವರೆಗೆ ಬಿಹಾರದ ಮುಖ್ಯಮಂತ್ರಿ ಆಗಿದ್ದರು. ಆಗ ಲಾಲು ಪ್ರಸಾದ್ ವಿದ್ಯಾರ್ಥಿ ನಾಯಕರಾಗಿದ್ದರು.
ನಿಶ್ಚಿತಾರ್ಥಕ್ಕೆ ಲಾಲು ಗೈರು
ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಅನುಪಸ್ಥಿತಿಯಲ್ಲಿ ನಿಶ್ಚಿತಾರ್ಥ ನಡೆಯಿತು. ಅನಾರೋಗ್ಯಕ್ಕೆ ಒಳಗಾಗಿರುವ ಲಾಲು ಪ್ರಸ್ತುತ ನವದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೇ 12ರಂದು ಮದುವೆ ನಡೆಯಲಿದ್ದು, ಸೋನಿಯಾ ಗಾಂಧಿ, ನಿತೀಶ್ ಕುಮಾರ್, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಮತ್ತು ಸುಶೀಲ್ ಕುಮಾರ್ ಮೋದಿ ಸೇರಿದಂತೆ ಪ್ರಮುಖ ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ಲಾಲು ಕುಟುಂಬದ ಆಪ್ತ, ಶಾಸಕ ಭೋಲಾ ಯಾದವ್ ತಿಳಿಸಿದ್ದಾರೆ. ಲಾಲು ಅವರು ಮದುವೆ ಸಮಾರಂಭಕ್ಕೆ ಹಾಜರಾಗಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications