ಹುತಾತ್ಮ ಹನುಮಂತಪ್ಪ ನಿಧನಕ್ಕೆ ಭಾರತೀಯರಿಂದ ಕಂಬನಿಧಾರೆ
ಬೆಂಗಳೂರು, ಫೆ.11: ಸಿಯಾಚಿನ್ ನ ನಿರ್ಗಲ್ಲಿನಲ್ಲಿ ಸಿಲುಕಿದ್ದ ಕರ್ನಾಟಕ ಮೂಲದ ಯೋಧ ಹನುಮಂತಪ್ಪ ಕೊಪ್ಪದ್ ಅವರು ಹುತಾತ್ಮರಾಗಿದ್ದಾರೆ. ಪವಾಡ ರೀತಿಯಲ್ಲಿ ಪತ್ತೆಯಾಗಿದ್ದ ಹನುಮಂತಪ್ಪ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲಿ ಗುರುವಾರ ಬೆಳಗ್ಗೆ 11.45ಕ್ಕೆ ಇಹ ಲೋಕ ತ್ಯಜಿಸಿದ್ದಾರೆ. ಹನುಮಂತಪ್ಪ ಅವರ ನಿಧನಕ್ಕೆ ಟ್ವಿಟ್ಟರ್ ನಲ್ಲಿ ಕಂಬನಿಗೆರೆಯಲಾಗಿದೆ. ಈ ನಡುವೆ ತಮಿಳುನಾಡಿನ ಕಿಡಿಗೇಡಿ ಗುಂಪಿನ ಟ್ವೀಟ್ ವೊಂದು ವಿವಾದಕ್ಕೆ ಕಾರಣವಾಗಿದೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದ ರಾಜ್ಯಪಾಲ ವಿ.ಆರ್.ವಾಲ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.[ಯೋಧ ಹನುಮಂತಪ್ಪನ ಬೆಟದೂರಿನಲ್ಲಿ ಸ್ಮಶಾನ ಮೌನ]
ಫೆಬ್ರವರಿ 03ರಂದು ಸಂಭವಿಸಿದ ಭಾರೀ ಹಿಮಪಾತದಲ್ಲಿ ಹನುಮಂತಪ್ಪ ಕೊಪ್ಪದ್ ಸೇರಿದಂತೆ 10ಮಂದಿ ಯೋಧ ಸಿಲುಕಿದ್ದರು. ಈ ಪೈಕಿ 9 ಜನ ಈ ಮೊದಲೇ ಹುತಾತ್ಮರಾಗಿದ್ದರು. ಬದುಕುಳಿದಿದ್ದ ಹನುಮಂತಪ್ಪ ಅವರು ದೇಶದ ಪಾಲಿಗೆ ಉಳಿಯಲಿಲ್ಲ. ['ಅಮರ' ಯೋಧ ಹನುಮಂತಪ್ಪನ ಅಂತಿಮ ಯಾತ್ರೆಯ ಚಿತ್ರಗಳು]
ಸಿಯಾಚಿನ್ ಪ್ರದೇಶದಲ್ಲಿ ಉಂಟಾದ ಹಿಮಪಾತದಲ್ಲಿ ಮದ್ರಾಸ್ ರೆಜಿಮೆಂಟ್ ಗೆ ಸೇರಿದ ದೇಶದ ಹೆಮ್ಮೆಯ 10 ಯೋಧರು ಪ್ರಾಣಾರ್ಪಣೆ ಮಾಡಿದ್ದಾರೆ. ಈ ಪೈಕಿ ಮೂವರು ಕನ್ನಡಿಗ ಯೋಧರುಗಳಿದ್ದರು. ಹುತಾತ್ಮರಾದ ದೇಶಭಕ್ತ ಯೋಧರಿಗೆ ಅಂತಿಮ ನಮನ ಸಲ್ಲಿಸುವ ಟ್ವೀಟ್ ಗಳ ಸಂಗ್ರಹ ಮುಂದಿದೆ ಓದಿ...

ದೇಶಭಕ್ತ ವೀರಯೋಧರೆಲ್ಲರಿಗೂ ಅಂತಿಮ ನಮನ
ಧಾರವಾಡ ಜಿಲ್ಲೆಯ ಕುಂದಗೋಳದ ಬೆಟದೂರಿನ ಹನುಮಂತ ಕೊಪ್ಪದ್, ಹಾಸನ ಜಿಲ್ಲೆಯ ತೇಜೂರಿನ ಸುಬೇದಾರ್ ನಾಗೇಶ್, ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಸಿಪಾಯಿ ಮಹೇಶ್ ಅವರು ಹುತಾತ್ಮರಾಗಿದ್ದಾರೆ. ಇವರ ಜೊತೆಗೆ ಸಿಯಾಚಿನ್ ನಲ್ಲಿ ಹುತಾತ್ಮರಾದ ಇತರೆ ಯೋಧರಿಗೂ ಅಂತಿಮ ನಮನ ಸಲ್ಲಿಸಲಾಗುತ್ತಿದೆ.

ಹನುಮಂತಪ್ಪ ಅವರ ಕುಟುಂಬಕ್ಕೆ ಆಘಾತ
ಹನುಮಂತಪ್ಪ ಕೊಪ್ಪದ್ ಅವರು 19ನೇ ಮದ್ರಾಸ್ ರೆಜಿಮೆಂಟ್ ಗೆ ಸೇರಿದವರು. ಫೆಬ್ರವರಿ 03 ರಂದು ಹಿಮಪಾತಕ್ಕೆ ಸಿಲುಕಿ 30 ಅಡಿ ಆಳದ ಹಿಮರಾಶಿಯಲ್ಲಿಹುದುಗಿ ಹೋಗಿದ್ದರು. ಫೆ. 9 ರಂದು ರಕ್ಷಣೆ ಮಾಡಲಾಯಿತು. ಬದುಕಿ ಉಳಿಯುವ ಆಸೆ ಜೀವಂತಗೊಳಿಸಿದ್ದರು. ಹನುಮಂತಪ್ಪ ಅವರ ತಾಯಿ ಬಸಮ್ಮ, ಪತ್ನಿ ಮಹಾದೇವಿ, ಒಂದೂವರೆ ವರ್ಷ ಹೆಣ್ಣುಮಗು ಹಾಗೂ ಕೆಲ ಸಂಬಂಧಿಕರು ದೆಹಲಿಗೆ ತೆರಳಿದ್ದರು. ಆದರೆ, ಈಗ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾಗಿದ್ದಾರೆ.
|
ಕುಹಕಿಗಳಿಂದ ಸಂಕುಚಿತ ಮನೋಭಾವದ ಟ್ವೀಟ್
ತಮಿಳುನಾಡಿನ ಕುಹಕಿಗಳಿಂದ ಸಂಕುಚಿತ ಮನೋಭಾವದ ಟ್ವೀಟ್, ಆತ ಕನ್ನಡಿಗ ಆತನಿಗೆ ನಮ್ಮ ಗೌರವ ಸಲ್ಲಬೇಕಾಗಿಲ್ಲ ಎಂದು ಬರೆಯಲಾಗಿದೆ.
|
ಬೆಂಗಳೂರು ನಗರ ಪೊಲೀಸರಿಂದ ನಮನ
ಬೆಂಗಳೂರು ನಗರ ಪೊಲೀಸರಿಂದ ವೀರ ಯೋಧ ಹನುಮಂತಪ್ಪ ಅವರಿಗೆ ಅಂತಿಮ ನಮನ.
|
ಸಿಎಂ ಸಿದ್ದರಾಮಯ್ಯ ಅವರಿಂದ ಸಂತಾಪ ಸಂದೇಶ
ಯೋಧ ಹನುಮಂತಪ್ಪ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರಿಂದ ಸಂತಾಪ ಸಂದೇಶ
|
ವೀರ ಕನ್ನಡಿಗ ಹನುಮಂತಪ್ಪ ಆತ್ಮಕ್ಕೆ ಶಾಂತಿ ದೊರೆಯಲಿ
ವೀರ ಕನ್ನಡಿಗ ಹನುಮಂತಪ್ಪ ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಕನ್ನಡಿಗರ ಸಂತಾಪ.
|
ಹೃದಯಮಂದಿರದಲ್ಲಿ ಲೀನವಾದ ಕೆಚ್ಚೆದಯ ಕನ್ನಡಿಗ
ಕುಲಕೋಟಿ ಭಾರತೀಯರ ಹೃದಯಮಂದಿರದಲ್ಲಿ ಲೀನವಾದ ಕೆಚ್ಚೆದಯ ಕನ್ನಡಿಗ ಹನುಮಂತಪ್ಪ
|
ಕರ್ನಾಟಕ ಭವನದಲ್ಲಿ ಹನುಮಂತಪ್ಪ ಕುಟುಂಬಕ್ಕೆ ವ್ಯವಸ್ಥೆ
ಕರ್ನಾಟಕ ಭವನದಲ್ಲಿ ಹನುಮಂತಪ್ಪ ಕುಟುಂಬಕ್ಕೆ ವ್ಯವಸ್ಥೆ ಮಾಡಲಾಗಿದೆ. ದೆಹಲಿ ಪೆರೇಡ್ ಮೈದಾನದಲ್ಲಿ ಅಂತಿಮ ನಮನ ಸಲ್ಲಿಸಿದ ಬಳಿಕ ಪಾರ್ಥೀವ ಶರೀರವನ್ನು ಹನುಮಂತಪ್ಪ ಅವರ ಊರು ಬೆಟದೂರಿಗೆ ತಂದು ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ.
|
ಹನುಮಂತಪ್ಪ ನೀವು ನಿಜವಾದ ವೀರ ಯೋಧ
ಹನುಮಂತಪ್ಪ ನೀವು ನಿಜವಾದ ವೀರ ಯೋಧ, ನಿಮ್ಮೊಳಗಿನ ಯೋಧ ಎಂದಿಗೂ ಸಾಯುವುದಿಲ್ಲ ಅಮರವಾಗಿರುತ್ತಾನೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications