ತೇಜಸ್ವಿ ಯಾದವ್ ರಾಜೀನಾಮೆಗೆ ಆಗ್ರಹಿಸಿ ಬಿಹಾರ ವಿಧಾನಸಭೆ ಬಳಿ ಬಿಜೆಪಿ ಪ್ರತಿಭಟನೆ
ಪಾಟ್ನಾ, ಜುಲೈ. 11: ಉದ್ಯೋಗಕ್ಕಾಗಿ ಭೂ ಹಗರಣದ ಸಿಬಿಐ ಚಾರ್ಜ್ಶೀಟ್ ಉಲ್ಲೇಖಿಸಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಗದ್ದಲ ನಡೆಸಿದ್ದಾರೆ. ಇಡೀ ದಿನ ಗದ್ದಲ- ಗಲಾಟೆಗಳ ನಡುವೆಯೇ ಬಿಹಾರ ವಿಧಾನಸಭೆಯನ್ನು ಇಂದು ಮತ್ತೆ ಮತ್ತೆ ಮುಂದೂಡಲಾಯಿತು.
ಬೆಳಗ್ಗೆ 11 ಗಂಟೆಗೆ ಬಿಜೆಪಿ ಸದಸ್ಯರು ತಮ್ಮ ಆಸನಗಳಲ್ಲಿ ಎದ್ದು ಬಾವಿಗೆ ಬಂದು ಪ್ರತಿಭಟನೆ ಆರಂಭಿಸಿದರು. ಸಿಬಿಐ ತನಿಖೆ ನಡೆಸುತ್ತಿರುವ ಉದ್ಯೋಗಕ್ಕಾಗಿ ಭೂ ಹಗರಣದಲ್ಲಿ ಹೆಸರಾಗಿರುವ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ರಾಜೀನಾಮೆಗೆ ಒತ್ತಾಯಿಸಿದರು. ಸ್ಪೀಕರ್ ಅವಧ್ ಬಿಹಾರಿ ಚೌಧರಿ ಅವರು ಗದ್ದಲದ ನಡುವೆ ಕಲಾಪವನ್ನು ನಡೆಸಲು ಪ್ರಯತ್ನಿಸಿದರು. ಆದರೆ ಕ್ರಮಬದ್ಧ ನಡವಳಿಕೆ ಬೇಕು ಎಂದು ಅವರು ಎಷ್ಟೇ ಮನವಿ ಮಾಡಿದರು ಬಿಜೆಪಿ ಸದಸ್ಯರು ಕೇಳದ ಕಾರಣ 10 ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿಯೇ ಕಲಾಪ ಮುಂದೂಡಿದರು.

"ನಿಮ್ಮ ನಡವಳಿಕೆಯು ಈ ಆಗಸ್ಟ್ ಸದನದ ಇತಿಹಾಸಕ್ಕೆ ಕಳಂಕವಾಗಿದೆ. ನೀವು ಪ್ರಸ್ತಾಪಿಸಲು ಬಯಸಿದ ಅನೇಕ ವಿಷಯಗಳನ್ನು ದಿನಕ್ಕೆ ಪಟ್ಟಿ ಮಾಡಲಾಗಿದ್ದರೂ ನೀವು ಪ್ರಶ್ನೋತ್ತರ ಅವಧಿಗೆ ಅಡ್ಡಿಪಡಿಸುತ್ತಿದ್ದೀರಿ" ಎಂದು ಸ್ಪೀಕರ್ ಅವಧ್ ಬಿಹಾರಿ ಚೌಧರಿ ಹೇಳಿದ್ದಾರೆ. ಇದಾದ ಬಳಿಕ ಮತ್ತೆ ಸದನವು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.
ಲಾಲು ಪ್ರಸಾದ್ ಅವರು ರೈಲ್ವೇ ಸಚಿವರಾಗಿದ್ದ ಅವಧಿಯಲ್ಲಿ ಯಾದವ್ ಕುಟುಂಬ ಮತ್ತು ಅವರ ಸಹಚರರಿಗೆ ಭೂಮಿಯನ್ನು ಉಡುಗೊರೆಯಾಗಿ ಅಥವಾ ಅಗ್ಗದ ದರದಲ್ಲಿ ಮಾರಾಟ ಮಾಡಿದ್ದಕ್ಕೆ ಪ್ರತಿಯಾಗಿ ರೈಲ್ವೇಯಲ್ಲಿ ಉದ್ಯೋಗ ನೀಡಿದ ಪ್ರಕರಣ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತನಿಖಾ ಸಂಸ್ಥೆಗಳ ಅಧಿಕಾರಿಗಳು ಈ ಹಿಂದೆ ತಿಳಿಸಿದ್ದರು.

ಕಳೆದ ವಾರ ಸಲ್ಲಿಸಲಾದ ಚಾರ್ಜ್ಶೀಟ್ನಲ್ಲಿ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪತ್ನಿ ರಾಬ್ರಿ ದೇವಿ ಹೆಸರೂ ಇದೆ. ಜಾರಿ ನಿರ್ದೇಶನಾಲಯ ಈ ಹಿಂದೆ ದೆಹಲಿಯಲ್ಲಿರುವ ತೇಜಸ್ವಿ ಯಾದವ್ ಅವರ ನಿವಾಸವನ್ನು ಶೋಧಿಸಿತ್ತು ಮತ್ತು ಸಿಬಿಐ ಲಾಲು ಪ್ರಸಾದ್ ಯಾದವ್ ಮತ್ತು ರಾಬ್ರಿ ದೇವಿ ಇಬ್ಬರನ್ನೂ ವಿಚಾರಣೆ ನಡೆಸಿತ್ತು.
ತೇಜಸ್ವಿ ಯಾದವ್ ಅವರ ತಂದೆ ರೈಲ್ವೆ ಸಚಿವರಾಗಿದ್ದಾಗ ಇವರು ಅಪ್ರಾಪ್ತರಾಗಿದ್ದರು ಮತ್ತು ಈಗ ಕೇಂದ್ರವ ಸರ್ಕಾರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಸೂಚನೆಯ ಮೇರೆಗೆ ಸಿಬಿಐ ರಾಜಕೀಯ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಆರ್ಜೆಡಿ ಆರೋಪಿಸುತ್ತಿದೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications