ಇಂದು ಮಹತ್ವದ ತ್ರಿವಳಿ ತಲಾಖ್ ತೀರ್ಪು
ನವದೆಹಲಿ, ಆಗಸ್ಟ್ 22: ಇಂದು ಸುಪ್ರಿಂ ಕೋರ್ಟ್ ಮಹತ್ವದ ತ್ರಿವಳಿ ತಲಾಖ್ ತೀರ್ಪು ನೀಡಲಿದೆ. ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ನೇತೃತ್ವದ ಪಂಚ ಸದಸ್ಯರ ಸುಪ್ರಿಂ ಕೋರ್ಟ್ ನ್ಯಾಯಪೀಠ ಮೇ 18ರಂದು ವಿಚಾರಣೆ ಕೊನೆಗೊಳಿಸಿ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಸುಮಾರು 6 ದಿನಗಳ ಕಾಲ ನಿರಂತರ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು.
Recommended Video

ಮೊದಲ ಬಾರಿಗೆ ಸುಪ್ರಿಂ ಕೋರ್ಟ್ ತ್ರಿವಳಿ ತಲಾಖ್ ಇಸ್ಲಾಂ ಧರ್ಮದ ಮೂಲಭೂತ ಹಕ್ಕು ಹೌದೋ, ಹೌದಾದರೆ ಅದಕ್ಕೆ ಕಾನೂನಿನ ಮಾನ್ಯತೆ ಇದೆಯೇ ಎಂಬ ವಿಚಾರದ ಬಗ್ಗೆ ವಿಚಾರಣೆ ನಡೆಸಿದೆ. ಈ ವಿಚಾರಣೆ ನಡೆಸಿದ ನ್ಯಾಯಪೀಠದಲ್ಲಿ ನ್ಯಾ. ಖೇಹರ್, ಕುರಿಯನ್ ಜೋಸೆಫ್, ರೋಹಿಂಗ್ಟನ್ ಎಫ್ ನಾರಿಮನ್, ಉದಯ್ ಲಲಿತ್, ಎಸ್ ಅಬ್ದುಲ್ ನಜೀರ್ ಇದ್ದರು. ಇವರೆಲ್ಲಾ ಐದು ಬೇರೆ ಬೇರೆ ಧರ್ಮಕ್ಕೆ ಸೇರಿದವರು ಎಂಬುದು ವಿಶೇಷ.

ವಿಚಾರಣೆ ವೇಳೆ ಸರಕಾರ ಯಾಕೆ ತ್ರಿವಳಿ ತಲಾಖ್ ನಿಷೇಧ ಮಾಡಿಲ್ಲ ಎಂದೂ ಕೋರ್ಟ್ ಪ್ರಶ್ನೆ ಮಾಡಿತ್ತು.
ಇನ್ನು ಕೋರ್ಟ್ ಮಧ್ಯೆ ಪ್ರವೇಶಕ್ಕೆ ಆಕ್ಷೇಪ ಎತ್ತಿದ್ದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ನಮಗೂ ತಲಾಖ್ ಬೇಕಾಗಿಲ್ಲ. ತಲಾಖ್ ನೀಡದಂತೆ 'ನಿಖಾನಾಮ' (ಮದುವೆ) ಸಂದರ್ಭದಲ್ಲೇ ಸಲಹೆ ನೀಡುತ್ತೇವೆ. ಈ ಕ್ಷೇತ್ರದ ಸುಧಾರಣೆಗೆ ನಾವೂ ಶ್ರಮಿಸುತ್ತಿದ್ದೇವೆ ಎಂದು ಹೇಳಿತ್ತು.
ಈ ಹಿಂದೆ ಮಂಡಳಿ ಇದೊಂದು ಪಾಪದ ಕೃತ್ಯ ಮತ್ತು ಅನಪೇಕ್ಷಿತ ಎಂದು ಹೇಳಿತ್ತಾದರೂ ಕಳೆದ 1400 ವರ್ಷಗಳಿಂದ ಇದು ನಡೆದು ಬಂದಿದೆ ಎಂದು ತಲಾಖ್ ಪರವಾಗಿಯೇ ವಾದಿಸಿತ್ತು.
ಇನ್ನು ಸರಕಾರ ಮಹಿಳೆಯರ ವಾದವನ್ನು ಬೆಂಬಲಿಸಿತ್ತು. ತ್ರಿವಳಿ ತಲಾಖ್ ಮಹಿಳೆಯರಿಗೆ ಮಾಡುವ ಅನ್ಯಾಯ, ಸಂವಿಧಾನ ವಿರೋಧಿ ಎಂದು ಹೇಳಿತ್ತಲ್ಲದೆ, ಹಲವು ಬಾರಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಹಿರಂಗ ಭಾಷಣಗಳಲ್ಲೇ ಇದನ್ನು ಪ್ರಸ್ತಾಪಿಸಿದ್ದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications