Highway: ಜಮ್ಮು-ಕಾಶ್ಮೀರದಲ್ಲಿ ಭಾರಿ ಮಳೆ, ಭೂಕುಸಿತಕ್ಕೆ ಹೆದ್ದಾರಿಯೇ ಬ್ಲಾಕ್
ನವದೆಹಲಿ, ಮಾರ್ಚ್ 02: ಭಾರತದ ದಕ್ಷಿಣ ರಾಜ್ಯಗಳಲ್ಲಿ ಅಧಿಕ ತಾಪಮಾನ ದಾಖಲಾಗಿದ್ದರೆ, ಉತ್ತರ ಭಾರತದ ಕೆಲವೆಡೆ ಜೋರು ಮಳೆ ಸುರಿದಿದೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭಾರೀ ಮಳೆ ಬಿದ್ದ ಪರಿಣಾಮ ಅನೇಕ ಕಡೆಗಳಲ್ಲಿ ಭೂಕುಸಿತಗಳು ಸಂಭವಿಸಿವೆ. ಇದರಿಂದ ಸಂಚಾರಕ್ಕೆ ಭಾರೀ ತೊಂದರೆ ಆದ ಘಟನೆ ಶನಿವಾರ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆಗೆ ಭೂಕುಸಿತ ಮತ್ತು ಗುಂಡಿನ ಕಲ್ಲುಗಳ ಚಲನೆಯಿಂದಾಗಿ ಶನಿವಾರ ಬೆಳಗ್ಗೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯೇ ನೂರಾರು ವಾಹನಗಳ ಸಂಚಾರ ಸ್ಥಗಿತವಾಯಿತು. ಲಾರಿ, ಟ್ರಕ್, ಬಸ್ಗಳು ಸೇರಿದಂತೆ ನೂರಾರುವಾಹನಗಳು ಕಿಲೋ ಮೀಟರ್ಗಟ್ಟಲೇ ಸರತಿ ಸಾಲಿನಲ್ಲಿ ನಿಂತಿದ್ದವು ಎಂದು ಪಿಟಿಐ ವರದಿ ಮಾಡಿದೆ.

ಹೆದ್ದಾರಿ ಸಂಚಾರ ನಿರ್ಬಂಧ
ಭಾರತದ ನಾನಾ ಭಾಗಗಳಿಂದ ಕಾಶ್ಮೀರಕ್ಕೆ ಬರುವ ಪ್ರಮುಖ ಹೆದ್ದಾರಿಯಲ್ಲಿಯೇ ಸಂಚಾರ ದಟ್ಟಣೆ ಕಂಡು ಬಂದಿದೆ. ಭಾರೀ ಮಳೆಗೆ ಭೂಕೂಸಿತ ಸಂಭವಿಸಿದ ಪರಿಣಾಮ 270-ಕಿಮೀ ಉದ್ದದ ಹೆದ್ದಾರಿಯನ್ನು ನಶ್ರಿ ಮತ್ತು ಬನಿಹಾಲ್ ನಡುವೆ ಅರ್ಧ ಆರರಿಂದ ಏಳು ಕಡೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿತ್ತು.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಏಕಮುಖ ಸಂಚಾರಕ್ಕಾಗಿ ಹೆದ್ದಾರಿಯನ್ನು ತೆರವುಗೊಳಿಸಲು ಅಧಿಕಾರಿಗಳು, ಸಿಬ್ಬಂದಿ ಹಾಗೂ ಜೆಸಿಬಿಯಂತಹ ಹಲವು ಯಂತ್ರಗಳಿಂದ ತೆರವುಗೊಳಿಸಲಾಯಿತು.

ಪ್ರಮುಖ ರಸ್ತೆಗಳಿಗೂ ಹಾನಿ
ಈ ಹೆದ್ದಾರಿಯಲ್ಲಿ ಫೆಬ್ರವರಿ 26 ರಿಂದಲೇ ವಾಹನಗಳ ಸಂಚಾರವನ್ನು ಏಕಮುಖವಾಗಿ ನಿರ್ಬಂಧಿಸಲಾಗಿತ್ತು. ಕಳೆದ ವಾರ ಭಾರೀ ಮಳೆ ಮತ್ತು ಹಿಮಪಾತ ಉಂಟಾದ ಪರಿಣಾಮ ಹಲವು ಸ್ಥಳಗಳಲ್ಲಿ ರಸ್ತೆ ಹಾನಿಗೊಳಗಾಗಿದೆ. ಹೀಗಾಗಿ ಜಮ್ಮು ಮತ್ತು ಶ್ರೀನಗರದಿಂದ ಪರ್ಯಾಯವಾಗಿ ಬಳಸಲಾಗುತ್ತಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಶನಿವಾರ ಬೆಳಿಗ್ಗೆ 8.30 ರ ಸುಮಾರಿಗೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಬನಿಹಾಲ್ನಲ್ಲಿ ಅತ್ಯಧಿಕ ಮಳೆ ಅದರೆ 74.4 ಮಿಮೀ ಮಳೆ ದಾಖಲಾಗಿದೆ ಎಂದು ಮಾಹಿತಿ ನೀಡಿದೆ. ಇನ್ನೂ ಒಂದೆರಡು ದಿನ ಈ ಭಾಗದಲ್ಲಿ ಮಳೆ ಸಕ್ರಿಯವಾಗಿರಲಿದೆ ಎಂದು ಐಎಂಡಿ ವರದಿ ತಿಳಿಸಿದೆ.
ಇಲ್ಲಿನ ಎತ್ತರದ ಪ್ರದೇಶಗಳಲ್ಲಿ ಹಿಮಪಾತ ಸುರಿದರೆ, ಬಯಲು ಸೀಮೆಯ ಭಾಗದ ಮಳೆಯ ದರ್ಶನವಾಗುತ್ತಿದೆ. ಕೇಂದ್ರಾಡಳಿತ ಪ್ರದೇಶದ ಹೆಚ್ಚಿನ ಸ್ಥಳಗಳಲ್ಲಿಯೂ ಈ ಮಳೆ ಮುಂದುವರಿಯುತ್ತದೆ. ಭಾನುವಾರ ಬೆಳಗ್ಗೆ ಹೊತ್ತಿಗೆ ಈ ಅಬ್ಬರದ ಮಳೆ ಪ್ರಯಾಣ ಇಳಿಮುಖವಾಗಲಿದೆ ಎಂದು ಐಎಂಡಿ ತಿಳಿಸಿದೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications