Himachal Pradesh: ಇದಕ್ಕಿಂತ ಸಾವೇ ಮೇಲು: ಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರ ಅಳಲು
"ಈ ದುಃಸ್ವಪ್ನವನ್ನು ಅನುಭವಿಸುವುದಕ್ಕಿಂತ ಸಾವು ಉತ್ತಮವಾಗಿತ್ತು" ಇದು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದ ಉಂಟಾದ ಭೂಕುಸಿತದಲ್ಲಿ ಮನೆ ಕಳೆದುಕೊಂಡವರ ಮಾತು. ಅವರು ಕಳೆದುಕೊಂಡದ್ದು ಮನೆ ಮಾತ್ರವಲ್ಲ ಅವರ ಬದುಕನ್ನು ಕೂಡ.
ಆಗಸ್ಟ್ 23 ರಂದು ಬೆಳಿಗ್ಗೆ ಸಂಭವಿಸಿದ ಭೂಕುಸಿತದಲ್ಲಿ ಪ್ರಾರಿ ಹೌಸ್ ಅನ್ನು ಭಾಗಶಃ ಹಾನಿಗೊಳಿಸಿತು. ಇಂದಿರಾಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆ (IGMCH) ಬಳಿ ಪ್ರಮೀಳಾ ತನ್ನ ಅನಾರೋಗ್ಯದ ತಾಯಿಯೊಂದಿಗೆ ತಂಗಿದ್ದರು. ಶುಕ್ರವಾರ ಪಿಟಿಐ ಜೊತೆ ಮಾತನಾಡಿದ ಅವರು, ತನ್ನ ಸಂಕಟವನ್ನು ಹೇಳಿಕೊಂಡರು. "ನನ್ನ 75 ವರ್ಷದ ತಾಯಿಯೊಂದಿಗೆ ವಾಸಿಸುತ್ತಿದ್ದು, ಅವರು ಅಂಡಾಶಯದ ಕ್ಯಾನ್ಸರ್ನಿಂದ ಬಳಲುತ್ತಿದ್ದು 2016ರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ಹೇಳಿದರು.

ಭಾರಿ ಮಳೆಯಿಂದ ರಾಜ್ಯದಲ್ಲಿ ಬದುಕು ಅಸ್ತವ್ಯಸ್ತವಾಗಿದ್ದು, ಗ್ರಾಹಕರಿಲ್ಲದ ಕಾರಣ ಆರ್ಥಿಕ ಹಿಂಜರಿತದಿಂದ ಕಳೆದ ವಾರ ಸಿಟಿ ಮಾರ್ಕೆಟ್ನ ರಾಮ್ನಗರದ ಅಂಗಡಿಯೊಂದರಲ್ಲಿ ಸೇಲ್ಸ್ ಗರ್ಲ್ ಆಗಿದ್ದ ಅವರು ತಮ್ಮ ಕೆಲಸ ಕಳೆದುಕೊಂಡಿದ್ದಾರೆ. "ಹೋಗಲು ಸ್ಥಳವಿಲ್ಲದ ಕಾರಣ ನಾನು ಗುರುವಾರ ರಾತ್ರಿ ಐಜಿಎಂಸಿಎಚ್ನಲ್ಲಿ ಮಲಗಿದ್ದೆ" ಎಂದು ಪ್ರಮೀಳಾ ಹೇಳಿದ್ದಾರೆ.
ಸಾವಿರಾರು ಜನರ ಬದುಕು ಬೀದಿಗೆ
"ನಾನು ಕೆಲಸಕ್ಕಾಗಿ ತೀವ್ರವಾಗಿ ಹುಡುಕುತ್ತಿದ್ದೇನೆ ಮತ್ತು ನನ್ನ ತಾಯಿಯ ಚಿಕಿತ್ಸೆಗಾಗಿ ನನಗೆ ಹಣದ ಅವಶ್ಯಕತೆ ಇರುವುದರಿಂದ ಕಸ ಗುಡಿಸುವ ಕೆಲಸ ಸಿಕ್ಕರೂ ಸಹ ಮಾತನಾಡಲು ಸಿದ್ಧನಿದ್ದೇನೆ" ಎಂದು ಅವರು ಹೇಳಿದರು.
"ಮನೆ ಕುಸಿಯುವ ಸಂದರ್ಭದಲ್ಲಿ ನಾವು ಧರಿಸಿದ್ದ ಬಟ್ಟೆಯಲ್ಲಿ ಹೊರಗೆ ಬಂದಿದ್ದೇವೆ, ಅಲ್ಲಿಂದ ಮತ್ತೇನನ್ನೂ ತರಲು ಆಗಲಿಲ್ಲ. " ಎಂದು ಮತ್ತೋರ್ವ ಸಂತ್ರಸ್ತೆ ಸುಮನ್ ಹೇಳಿದ್ದಾರೆ. ಭೂಕುಸಿತದಲ್ಲಿ ತನ್ನ ಸರ್ವಸ್ವವನ್ನೂ ಕಳೆದುಕೊಂಡಿದ್ದು, ಮಗನ ಶಾಲಾ ಶುಲ್ಕ ಕಟ್ಟಲೂ ಹಣವಿಲ್ಲ ಎಂದು ಮನೆ ಸಹಾಯಕಿ ಕೆಲಸ ಮಾಡುತ್ತಿರುವ ಸುಮನ್ ಹೇಳುತ್ತಾರೆ. ತಮಗೆ ಸೂರು ಇಲ್ಲ, ಬಟ್ಟೆ ಇಲ್ಲ, 5ನೇ ತರಗತಿ ಓದುತ್ತಿರುವ ತನ್ನ ಮಗನ ಪುಸ್ತಕಗಳೂ ಭೂಕುಸಿತದಲ್ಲಿ ಹಾನಿಗೀಡಾಗಿವೆ ಎಂದು ಅಸಹಾಯಕತೆ ಹೇಳಿಕೊಂಡರು.
"ನಮ್ಮ ಪರಿಸ್ಥಿತಿ ಶೋಚನೀಯವಾಗಿದೆ ಆದರೆ ಈ ಭೂಕುಸಿತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದ ಕಾರಣ ಇದು ಅಧಿಕಾರಿಗಳ ಗಮನಕ್ಕೆ ಬಂದಿಲ್ಲ. ವಿಪತ್ತು ಸಂತ್ರಸ್ತರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ, ಇಷ್ಟೊಂದು ದೇಣಿಗೆ ಪಡೆದು ಏನು ಪ್ರಯೋಜನ," ಎಂದು ಹೇಳಿದರು.
ಈವರೆಗೆ ಒಟ್ಟು 238 ಮಂದಿ ಸಾವು
ಕಳೆದ ವಾರದಲ್ಲಿ ಶಿಮ್ಲಾದಲ್ಲಿ ಹಲವು ಬಾರಿ ಭೂಕುಸಿತ ಸಂಭವಿಸಿದೆ. ಕಳೆದ 10 ದಿನಗಳಲ್ಲಿ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಘಟನೆಗಳ ಸಂಖ್ಯೆ 26 ಕ್ಕೆ ಏರಿದೆ, ಇದರಲ್ಲಿ ಸಮ್ಮರ್ ಹಿಲ್ ಭೂಕುಸಿತದಲ್ಲಿ 17 ಸಾವುಗಳು, ಫಾಗ್ಲಿಯಲ್ಲಿ ಐದು ಮತ್ತು ಕೃಷ್ಣ ನಗರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಜೂನ್ 24 ರಂದು ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಪ್ರಾರಂಭವಾದಾಗಿನಿಂದ ಈ ತಿಂಗಳು ರಾಜ್ಯದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 120 ಜನರು ಸಾವನ್ನಪ್ಪಿದ್ದಾರೆ ಮತ್ತು ಒಟ್ಟಾರೆ 238 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಜನರು ಇನ್ನೂ ನಾಪತ್ತೆಯಾಗಿದ್ದಾರೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications