ಈಶಾನ್ಯ ರಾಜ್ಯಗಳ ಮೇಲೆ ಲಷ್ಕರ್ ಕಣ್ಣು: ಅಪಾಯಕಾರಿ ಯೋಜನೆ ಬಯಲು
ನವದೆಹಲಿ, ಜುಲೈ 25: ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಕದಡುವ ಅಪಾಯಕಾರಿ ಯೋಜನೆಯೊಂದಕ್ಕೆ ಲಷ್ಕರ್ ಇ ತೊಯ್ಬಾ ಸಿದ್ಧತೆ ನಡೆಸುತ್ತಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಭಾರತೀಯ ಗುಪ್ತಚರ ದಳ ನೀಡಿದೆ.
ಭಾರತೀಯ ಗುಪ್ತಚರ ಇಲಾಖೆಗೆ ಸಿಕ್ಕ ವಿಡಿಯೋ ಒಂದರಲ್ಲಿ, ಸಿಕ್ಕಿಂ ಮತ್ತು ಡಾರ್ಜಿಲಿಂಗ್ ನಲ್ಲಿ ಶಾಂತಿ ಕದಡುವ ಕೆಲಸವನ್ನು ಲಷ್ಕರ್ ಇ ತೊಯ್ಬಾ ನಾಯಕ ಅಮಿರ್ ಹಜ್ಮಾ ತನ್ನ ಸಹಚರರಿಗೆ ನೀಡಿದ್ದು ದಾಖಲಾಗಿದೆ.

ಈ ವಿಡಿಯೋವನ್ನು ಜುಲೈ 19 ರಂದು ಲಾಹೋರ್ ನಲ್ಲಿ ಚಿತ್ರೀಕರಿಸಲಾಗಿದೆ. ಈ ವಿಡಿಯೋದಲ್ಲಿ ದೋಕ್ಲಾಂ ಕುರಿತೂ ಹಜ್ಮಾ ಮಾತನಾಡಿದ್ದಾನೆ. ಅಷ್ಟೇ ಅಲ್ಲ, ತಾವು ಸಿಕ್ಕಿಂ, ಭೂತಾನ್ ಮತ್ತು ದಾರ್ಜಿಲಿಂಗ್ ನಲ್ಲಿ ದಾಳಿ ನಡೆಸುವುದಾಗಿ ಹೇಳಿಕೊಂಡಿದ್ದಾನೆ.
ಬಾಂಗ್ಲಾದೇಶಕ್ಕಾಗಿ ನಾವು ಈಶಾನ್ಯದಲ್ಲಿರುವ ಏಳು ರಾಜ್ಯಗಳನ್ನು ವಶಪಡಿಸಿಕೊಳ್ಳುತ್ತೇವೆ ಎಂದೂ ಹೇಳಿದ್ದಾನೆ. 2012, 26/11 ಬಾಂಬೆ ಸ್ಫೋಟದಲ್ಲೂ ಹಜ್ಮಾ ಹೆಸರು ಕೇಳಿಂದಿತ್ತು. ಸದ್ಯಕ್ಕೆ ಲಷ್ಕರ್ ನ ಕಮಾಂಡರ್ ಆಗಿ ಬಡ್ತಿ ಪಡೆದಿರುವ ಹಜ್ಮಾ ಈಶಾನ್ಯ ರಾಜ್ಯಗಳ ಮೇಲೆ ಕಣ್ಣಿಟ್ಟಿರುವುದು ಭಾರತ ಎಚ್ಚರಿಕೆಯಿಂದಿರಬೇಕೆಂಬ ಸೂಚನೆ ನೀಡಿದೆ.
-
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications