ಮೋದಿ ಸರ್ಕಾರಕ್ಕೆ ಶಿವಸೇನೆ ಎಚ್ಚರಿಕೆ ಮಾತು
ಕೇಂದ್ರ ಸರ್ಕಾರವು ರೈತರ ಹಿತ ಮರೆತಿರುವುದಾಗಿ ಶಿವಸೇನೆ ಆರೋಪ. ಪಕ್ಷದ ಮುಖವಾಣಿಯಾದ ಸಾಮ್ನಾದಲ್ಲಿ ಟೀಕೆ. ರೈತರ ಸಾಲ ಮನ್ನಾ, ಬೆಂಬಲ ಬೆಲೆಗಳಿಗೆ ಆಗ್ರಹ. ರೈತರ ಹಿತ ಮರೆತರೆ ಚುನಾವಣೆಯಲ್ಲಿ ಮತದಾರರಿಂದ ತಕ್ಕ ಉತ್ತರ ಎಂದು ಶಿವಸೇನೆ ಎಚ್ಚರಿಕೆ.
ಮುಂಬೈ, ಜೂನ್ 6: ರೈತರ ಸಮಸ್ಯೆಗಳಿಗೆ ಸ್ಪಂದಿಸದ ಕೇಂದ್ರ ಸರ್ಕಾರದ ವಿರುದ್ಧ ರೈತರ ಅಸಮಾಧಾನ ಜ್ವಾಲಾಮುಖಿಯಂತೆ ಭುಗಿಲೇಳಲಿದ್ದು, ಮುಂದಿನ ಚುನಾವಣೆಯಲ್ಲಿ ಇದರ ಪರಿಣಾಮವನ್ನು ಬಿಜೆಪಿ ಅನುಭವಿಸಬೇಕಾಗುತ್ತದೆ ಎಂದು ಬಿಜೆಪಿಯ ಮಿತ್ರ ಪಕ್ಷವಾದ ಶಿವಸೇನೆ, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಮೋದಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ತನ್ನ ಪಕ್ಷದ ಮುಖವಾಣಿಯಾದ ಸಾಮ್ನಾದ ಸಂಪಾದಕೀಯ ಬರಹದಲ್ಲಿ ಈ ರೀತಿಯಾಗಿ ಎಚ್ಚರಿಸಿರುವ ಪಕ್ಷ, ರೈತರಿಗೆ, ಬಡವರಿಗೆ ನೆರವಾಗದಿದ್ದಾಗಲೆಲ್ಲಾ ಜನರು ತಕ್ಕ ಪಾಠ ಕಲಿಸಿದ್ದಾರೆ. ಹಿಂದೆ ಕಲಿತ ಆ ಪಾಠಗಳನ್ನು ಮರೆತರೆ, ಬಿಜೆಪಿಯು ಅದರ ಘೋರ ಪರಿಣಾಮವನ್ನು ಅನುಭವಿಸಬೇಕಾಗುತ್ತದೆ ಎಂದು ಹೇಳಿದೆ.

ನಾಸಿಕ್ ನಲ್ಲಿ ರೈತರು ತಮ್ಮ ವಿವಿಧ ಬೇಡಿಕೆಗಳಿಗೆ ಈಡೇರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಲೇಖನ ಪ್ರಕಟಣೆಯಾಗಿದೆ.
ರೈತರ ಸಾಲ ಮನ್ನಾ ಹಾಗೂ ರೈತರು ಬೆಳೆದ ಬೆಲೆಗೆ ಸೂಕ್ತ ಬೆಂಬಲ ಬೆಲೆ - ಇವೆರಡೂ ತುರ್ತಾಗಿ ಆಗಬೇಕಿದೆ. ರೈತರು ಸರ್ಕಾರದಿಂದ ಇದನ್ನು ನಿರೀಕ್ಷಿಸುತ್ತಿದ್ದಾರೆ. ಈಗಲಾದರೂ ರೈತರ ಪಾಡನ್ನು ಸರ್ಕಾರ ಅರ್ಥ ಮಾಡಿಕೊಳ್ಳುವುದೇ ಎಂದು ಲೇಖನದಲ್ಲಿ ಸರ್ಕಾರ ಪ್ರಶ್ನೆ ಮಾಡಿದೆ.
ಅಲ್ಲದೆ, ರೈತರ ಹಕ್ಕುಗಳಿಗಾಗಿ ತಾನು ಎಂದಿಗೂ ಬದ್ಧವಾಗಿರುವುದಾಗಿ ತಿಳಿಸಿದ ಅದು, ಕೊನೆಯವರೆಗೂ ತಾನು ರೈತರ ಹಿತಕ್ಕಾಗಿ ಹೋರಾಡುವುದಾಗಿ ಹೇಳಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications