ಲೈಂಗಿಕ ಅಪರಾಧಗಳ ವಿಚಾರದಲ್ಲಿ ಪುರುಷರಿಗೆ ತಾರತಮ್ಯ ಮಾಡುತ್ತಿರುವ ಕಾನೂನು: ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ
ಅಲಹಾಬಾದ್, ಆಗಸ್ಟ್ 02: ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿದ ಕಾನೂನು ಪುರುಷರಿಗೆ ತಾರತಮ್ಯ ಮಾಡುತ್ತಿದೆ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಪುರುಷರ ವಿರುದ್ಧದ ನಿಜವಾದ ಲೈಂಗಿಕ ಪ್ರಕರಣಗಳು ಕಡಿಮೆ ಆಗಿದ್ದು, ಸುಳ್ಳು ಆರೋಪಗಳನ್ನು ಹೊಂದಿರುವ ಪ್ರಕರಣಗಳೇ ಹೆಚ್ಚಾಗಿವೆ ಎಂದು ಕೋರ್ಟ್ ತಿಳಿಸಿದೆ.
ಸುದೀರ್ಘ ದೈಹಿಕ ಸಂಬಂಧದಲ್ಲಿ ತೊಡಗಿದ ಹುಡುಗಿಯರು ಅಥವಾ ಮಹಿಳೆಯರು ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ಕೆಲವರು ಲಾಭದ ಆಸೆಯಿಂದ ಆರೋಪಿಗಳೊಂದಿಗೆ ಸಂಬಂಧ ಹೊಂದಿರುವುದು ಕಂಡುಬರುತ್ತಿದೆ ಎಂದು ಕೋರ್ಟ್ ಹೇಳಿದೆ.

ಈ ಹಿನ್ನೆಲೆಯಲ್ಲಿ ಅನಗತ್ಯ ಎಫ್ಐಆರ್ ದಾಖಲಿಸುವ ಘಟನೆಗಳು ಗಮನಾರ್ಹ ಸಂಖ್ಯೆಯಲ್ಲಿ ದಾಖಲಾಗುತ್ತಿವೆ ಎಂದು ನ್ಯಾಯಾಲಯವು ತಿಳಿಸಿದೆ.
ಏಕಸದಸ್ಯ ಪೀಠದ ನ್ಯಾಯಮೂರ್ತಿ ಸಿದ್ಧಾರ್ಥ್ ಅವರು, ಕಾನೂನು ಪುರುಷರ ವಿರುದ್ಧ ಹೆಚ್ಚು ಪಕ್ಷಪಾತವನ್ನು ಹೊಂದಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ವಿಚಾರಿಸುವ ಸಂದರ್ಭದಲ್ಲಿ ನ್ಯಾಯಾಲಯಗಳು ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.
'ಲೈಂಗಿಕ ದೌರ್ಜನ್ಯ ಪ್ರಕರಣಗಳ ಜಾಮೀನು ಅರ್ಜಿಗಳನ್ನು ಪರಿಗಣಿಸುವಾಗ ನ್ಯಾಯಾಲಯಗಳು ಬಹಳ ಎಚ್ಚರಿಕೆಯಿಂದ ಇರಬೇಕಾದ ಸಮಯ ಬಂದಿದೆ. ಕಾನೂನು ಪುರುಷ ವಿರುದ್ಧ ಹೆಚ್ಚು ಪಕ್ಷಪಾತ ಹೊಂದಿದೆ. ಆರೋಪಗಳನ್ನು ಮಾಡುವುದು, ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎಫ್ಐಆರ್ ದಾಖಲಿಸುವುದು ಸುಲಭವಾಗಿ ಬಿಟ್ಟಿದೆ' ಎಂದು ನ್ಯಾಯಾಲಯ ಹೇಳಿಕೆ ನೀಡಿದೆ.
ಸಾಮಾಜಿಕ ಮಾಧ್ಯಮಗಳು, ಸಿನಿಮಾಗಳು ಮತ್ತು ಟಿವಿ ಕಾರ್ಯಕ್ರಮಗಳ ಪ್ರಭಾವವು ಯುವ ಹುಡುಗರು ಮತ್ತು ಹುಡುಗಿಯರ ಮೇಲೆ ಹೆಚ್ಚುತ್ತಿದೆ. ಅವರು ಅಳವಡಿಸಿಕೊಳ್ಳುತ್ತಿರುವ ಮುಕ್ತ ಸಂಸ್ಕೃತಿ ಲೈಂಗಿಕ ದೌರ್ಜನ್ಯದಂತಹ ಆರೋಪಗಳಿಗೆ ಕಾರಣವಾಗುತ್ತಿದೆ ಎಂದು ನ್ಯಾಯಾಲಯ ಹೇಳಿದೆ.
ಅದೇನೇ ಇದ್ದರೂ, ಇಂತಹ ನಡವಳಿಕೆಯು ಭಾರತೀಯ ಸಾಮಾಜಿಕ ಮತ್ತು ಕೌಟುಂಬಿಕ ಮೌಲ್ಯಗಳ ಪರಿಣಾಮ ಬೀರುತ್ತದೆ. ಮಹಿಳೆಯರ ಗೌರವದ ರಕ್ಷಣೆ ವಿಚಾರದಲ್ಲಿ ಕೆಲವೊಮ್ಮೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ನ್ಯಾಯಾಲಯವು ತಿಳಿಸಿದೆ.
'ಕೆಲವೊಮ್ಮೆ ದೀರ್ಘಕಾಲದವರೆಗೆ ಲಿವ್-ಇನ್-ರಿಲೇಶನ್ಶಿಪ್ನಲ್ಲಿ ಹುಡುಗ-ಹುಡುಗಿಯರು ಇರುತ್ತಾರೆ. ಆ ನಂತರ, ಯಾವುದೇ ವಿಚಾರದ ಕುರಿತು ಅವರ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಹುಡುಗನಿಗೆ ಪಾಠ ಕಲಿಸಬೇಕೆಂದು ಹುಡುಗಿಯು ಪ್ರಕರಣ ದಾಖಲಿಸುತ್ತಾಳೆ' ಎಂದು ನ್ಯಾಯಾಲಯ ಹೇಳಿದೆ.
ಕಾನೂನಿನ ರಕ್ಷಣೆಯ ವಿಷಯದಲ್ಲಿ ಹುಡುಗಿಯರು ಅಥವಾ ಮಹಿಳೆಯರು ಮೇಲುಗೈ ಸಾಧಿಸುತ್ತಾರೆ. ಹುಡುಗ ಅಥವಾ ಪುರುಷನನ್ನು ಸುಲಭವಾಗಿ ಕಾನೂನಿನ ಕುಣಿಕೆಗೆ ಸಿಲುಕಿಕೊಳ್ಳುತ್ತಾನೆ ಎಂದು ನ್ಯಾಯಾಲಯ ಹೇಳಿದೆ.
ಲೈಂಗಿಕ ದೌರ್ಜನ್ಯ ಪ್ರಕರಣವೊಂದರ ವಿಚಾರಣೆ ನಡೆಸುತ್ತಿರುವ ಅಲಹಾಬಾದ್ ಹೈಕೋರ್ಟ್ ಈ ಹೇಳಿಕೆಗಳನ್ನು ನೀಡಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications