ಸಾಲ ಮಾಡಿಯಾದ್ರೂ ತುಪ್ಪ ತಿನ್ನುವವರಿಗೆ ಅರುಣ್ ಜೇಟ್ಲಿ ನೀಡಿದ ಶಾಕ್
ಉದ್ದೇಶಪೂರ್ವಕ ಸುಸ್ಥಿದಾರರ ಆಸ್ತಿ ಜಪ್ತಿ ಮಾಡಿಕೊಳ್ಳುವಂತಹ ಹೊಸ ಕಾನೂನನ್ನು ಸರಕಾರ ಜಾರಿಗೆ ತರಲಿದೆ ಎಂದು 2017-18ರ ಕೇಂದ್ರ ಆಯವ್ಯಯ ಮಂಡನೆಯ ವೇಳೆ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ನವದೆಹಲಿ, ಫೆ 1: ಊರೆಲ್ಲಾ ಸಾಲ ಮಾಡಿಕೊಂಡು, ದೇಶ ಬಿಟ್ಟು ಹೋಗಿರುವ ಉದ್ದೇಶಪೂರ್ವಕ ಸುಸ್ಥಿದಾರರ ಆಸ್ತಿ ಜಪ್ತಿ ಮಾಡಿಕೊಳ್ಳುವಂತಹ ಹೊಸ ಕಾನೂನನ್ನು ಸರಕಾರ ಜಾರಿಗೆ ತರಲಿದೆ ಎಂದು 2017-18ರ ಕೇಂದ್ರ ಆಯವ್ಯಯ ಮಂಡನೆಯ ವೇಳೆ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ನ್ಯಾಯಾಂಗ ಬಂಧನಕ್ಕೆ ಒಳಗಾಗುವ ತನಕ, ಕಾನೂನು ಕಣ್ತಪ್ಪಿಸಿ ವಿದೇಶದಲ್ಲಿ ನೆಲೆಸಿರುವ ಸುಸ್ಥಿದಾರರ ಆಸ್ತಿಯನ್ನು ಜಪ್ತಿ ಮಾಡಿಕೊಳ್ಳುವ ಮಹತ್ವದ ನಿರ್ಧಾರವನ್ನು ಸರಕಾರ ಸದ್ಯದಲ್ಲೇ ಪ್ರಕಟಿಸಲಿದೆ ಎಂದು ಜೇಟ್ಲಿ ಬಜೆಟ್ ಮಂಡನೆಯ ವೇಳೆ ತಿಳಿಸಿದ್ದಾರೆ. (ಬಜೆಟ್ 2017: ಯಾವ್ದು ಏರಿಕೆ, ? ಯಾವ್ದು ಇಳಿಕೆ)
ಆರ್ಥಿಕ ಅಪರಾಧಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಕಾನೂನು ಜಾರಿಗೆ ತರುವುದು ಅತ್ಯವಶ್ಯಕವಾಗಿದೆ ಎಂದು ಜೇಟ್ಲಿ ಅಭಿಪ್ರಾಯ ಪಟ್ಟಿದ್ದಾರೆ.

ಈ ಸಂಬಂಧ ಹೊಸ ಕಾನೂನು ಅಥವಾ ಈಗಿರುವ ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಹೇಳಿರುವ ಹಣಕಾಸು ಸಚಿವ ಜೇಟ್ಲಿ, ಪರೋಕ್ಷವಾಗಿ ಮದ್ಯದ ದೊರೆ ವಿಜಯ್ ಮಲ್ಯಗೆ ಶಾಕ್ ನೀಡಿದ್ದಾರೆ.
ಲಂಡನ್ ನಲ್ಲಿರುವ ವಿಜಯ್ ಮಲ್ಯರಿಂದ ಸಾಲ ಹಿಂಪಡೆಯಲು ಬ್ಯಾಂಕುಗಳು ಹರಸಾಹಸ ಪಡುತ್ತಿರುವ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದ್ದು, ಸಾಲ ಕೊಟ್ಟು ಹೈರಾಣವಾಗಿರುವ ಬ್ಯಾಂಕುಗಳಿಗೆ ಈ ಹೊಸ ಕಾನೂನು ಸಂಜೀವಿನಿಯಾಗುವ ಸಾಧ್ಯತೆಯಿದೆ.
ಮಾರ್ಚ್ ಎರಡರಂದು ಭಾರತ ಬಿಟ್ಟು ಹೋಗಿರುವ ವಿಜಯ್ ಮಲ್ಯ, ವಿವಿಧ ಬ್ಯಾಂಕುಗಳಿಗೆ ನೀಡಬೇಕಾಗಿರುವ ಒಟ್ಟು ಸಾಲದ ಮೊತ್ತ ಬರೋಬ್ಬರಿ ಒಂಬತ್ತು ಸಾವಿರ ಕೋಟಿ. ಇದರಲ್ಲಿ ಜಪ್ತಿ ಮಾಡಿಕೊಂಡಿರುವ ಮಲ್ಯ ಆಸ್ತಿಯ ಮೊತ್ತ 8041 ಕೋಟಿ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications