ಹಿಂದಿ ರಾಷ್ಟ್ರಭಾಷೆ ಎಲ್ಲರೂ ಕಲಿಬೇಕು! ಡಿಎಂಕೆ ನಾಯಕನ ವಿರುದ್ಧ ನಿತೀಶ್ ಕುಮಾರ್ ಉದ್ಧಟತನ
ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಟಿಆರ್ ಬಾಲು ಇಂಡಿಯಾ ಬ್ಲಾಕ್ ನಾಯಕರ ಸಭೆಯಲ್ಲಿ ಹಿಂದಿಯಲ್ಲಿ ಮಾಡಿದ ಭಾಷಣ ಅನುವಾದ ಮಾಡುವಂತೆ ಕೇಳಿದಾಗ ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ನಾಯಕ ನಿತೀಶ್ ಕುಮಾರ್ ಕಿಡಿ ಕಾರಿದ್ದಾರೆ.
ನಿತೀಶ್ ಕುಮಾರ್ ಅವರು ಇಂಡಿಯಾ ಬ್ಲಾಕ್ ನಾಯಕರನ್ನು ಉದ್ದೇಶಿಸಿ ಮಾತನಾಡುವಾಗ ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ ಮತ್ತು ಟಿಆರ್ ಬಾಲು ಸಹ ಉಪಸ್ಥಿತರಿದ್ದರು. ನಿತೀಶ್ ಏನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು ಸಾಧ್ಯವಾಗದೆ, ಟಿಆರ್ ಬಾಲು ಅವರು ಭಾಷಣವನ್ನು ಭಾಷಾಂತರಿಸುವಂತೆ ಇನ್ನೊಂದು ಬದಿಯಲ್ಲಿ ಕುಳಿತಿದ್ದ ರಾಷ್ಟ್ರೀಯ ಜನತಾ ದಳದ ರಾಜ್ಯಸಭಾ ಸಂಸದ ಮನೋಜ್ ಕೆ. ಝಾ ಅವರಿಗೆ ಸೂಚಿಸಿದರು.

ಮನೋಜ್ ಝಾ ನಿತೀಶ್ ಕುಮಾರ್ ಅವರ ಅನುಮತಿ ಕೇಳುತ್ತಿದ್ದಂತೆ, "ನಾವು ನಮ್ಮ ದೇಶವನ್ನು ಹಿಂದೂಸ್ತಾನ್ ಎಂದು ಕರೆಯುತ್ತೇವೆ ಮತ್ತು ಹಿಂದಿ ನಮ್ಮ ರಾಷ್ಟ್ರೀಯ ಭಾಷೆ, ನಮಗೆ ಭಾಷೆ ತಿಳಿದಿರಬೇಕು" ಎಂದು ಉದ್ದಟತನದಿಂದ ಹೇಳಿದ್ದಾರೆ.
ಹಿಂದಿ ದೇಶದ ರಾಷ್ಟ್ರೀಯ ಭಾಷೆಯಾಗಿದ್ದು, ಪ್ರತಿಯೊಬ್ಬರೂ ಅದನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಬ್ರಿಟಿಷರ ವಿರುದ್ಧದ ಭಾರತೀಯ ಸ್ವಾತಂತ್ರ್ಯ ಹೋರಾಟ ಮತ್ತು ಇಂಗ್ಲಿಷ್ ಹೇರಿಕೆಯ ಬಗ್ಗೆ ಭಾಷಣ ಮಾಡಿದ್ದಾರೆ.
ಭಾಷಾಂತರ ಮಾಡದಂತೆ ಸೂಚನೆ
ಅಷ್ಟಕ್ಕೆ ಸುಮ್ಮನಾಗದ ನಿತೀಶ್ ಕುಮಾರ್ ಅವರು ತಮ್ಮ ಭಾಷಣವನ್ನು ಭಾಷಾಂತರಿಸದಂತೆ ಮನೋಜ್ ಝಾ ಅವರಿಗೆ ಸೂಚನೆ ನೀಡಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚರ್ಚೆಯ ನಂತರ, ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ. ಸ್ಟಾಲಿನ್ ಮಾತನಾಡಿದರು, ಮೂಲಗಳ ಪ್ರಕಾರ, ನಿತೀಶ್ ಕುಮಾರ್ ಅವರ ಉದ್ಧಟತನ ಹೇಳಿಕೆಯಿಂದ ಉಂಟಾದ ಅಸಮಾಧಾನ ಸರಿ ಮಾಡಲು ಹಿಂದಿಯಲ್ಲಿ ಮಾತನಾಡುವ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವರು ಇಂಗ್ಲೀಷ್ನಲ್ಲಿ ಮಾತನಾಡಿದರು.
ಮುಂಬರುವ 2024 ರ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಮತ್ತು ಪ್ರಚಾರ ಕಾರ್ಯತಂತ್ರಗಳಂತಹ ವಿಷಯಗಳ ಕುರಿತು ಚರ್ಚಿಸಲು ಇಂಡಿಯಾ ಬ್ಲಾಕ್ ಪಕ್ಷಗಳು ದೆಹಲಿಯಲ್ಲಿ ತಮ್ಮ ನಾಲ್ಕನೇ ಸಭೆಯನ್ನು ನಡೆಸಿದ್ದವು.
ನಿತೀಶ್ ಕುಮಾರ್ ವಿರುದ್ಧ ಕಿಡಿ
ಇನ್ನು ನಿತೀಶ್ ಕುಮಾರ್ ಹಿಂದಿ ಕಲಿಯುವ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಭಾರತ ಎಂದರೆ ಬರಿ ಹಿಂದಿಯಲ್ಲ, ಹಿಂದಿ ಭಾರತದ ರಾಷ್ಟ್ರ ಭಾಷೆಯಲ್ಲ ಎಂದು ನಿತೀಶ್ ಕುಮಾರ್ ಉದ್ಧಟನಕ್ಕೆ ಕಿಡಿ ಕಾರಿದ್ದಾರೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications