ಆದಷ್ಟು ಬೇಗ ಭಾರತ ಬಿಡುವುದು ಸುರಕ್ಷಿತ; ನಾಗರಿಕರಿಗೆ ಅಮೆರಿಕ ಎಚ್ಚರಿಕೆ
ನವದೆಹಲಿ, ಏಪ್ರಿಲ್ 29: ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಯಾರೂ ಭಾರತಕ್ಕೆ ಹೋಗದಂತೆ ಹಾಗೂ ಭಾರತದಲ್ಲಿರುವವರು ಆದಷ್ಟು ಬೇಗ ದೇಶಕ್ಕೆ ಮರಳುವಂತೆ ಅಮೆರಿಕ ಸರ್ಕಾರ ತನ್ನ ನಾಗರಿಕರಿಗೆ ಸಲಹೆ ನೀಡಿದೆ. ಹೀಗೆ ಮಾಡುವುದು ಸುರಕ್ಷಿತ ಎಂದು ಹೇಳಿದೆ.
ಕೊರೊನಾದಿಂದಾಗಿ ಭಾರತದಲ್ಲಿ ಎಲ್ಲಾ ವೈದ್ಯಕೀಯ ಸೌಲಭ್ಯಗಳು ಗಂಭೀರವಾಗಿ ತಗ್ಗುತ್ತಿದ್ದು, ನಾಗರಿಕರು ಬೇಗ ಮರಳುವುದು ಉತ್ತಮ ಎಂದು ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಅಮೆರಿಕ ಆರೋಗ್ಯ ಇಲಾಖೆ, ಭಾರತವನ್ನು ಬಿಟ್ಟು ಬರಲು ಇಚ್ಛಿಸುವ ನಾಗರಿಕರು ಈಗಿರುವ ವಾಣಿಜ್ಯ ಸಾರಿಗೆ ಅವಕಾಶಗಳನ್ನು ಬಳಸಿಕೊಳ್ಳಬೇಕು. ಸದ್ಯಕ್ಕೆ ಭಾರತದಿಂದ ಅಮೆರಿಕಕ್ಕೆ ದಿನನಿತ್ಯ ನೇರ ವಿಮಾನವಿದೆ. ಪ್ಯಾರಿಸ್ ಹಾಗೂ ಫ್ರಾಂಕ್ಫರ್ಟ್ನಿಂದ ಆಗಮಿಸುವ ವಿಮಾನಗಳೂ ಲಭ್ಯವಿವೆ ಎಂದು ತಿಳಿಸಿದೆ.

ಭಾರತದಲ್ಲಿ ದಾಖಲೆ ಮಟ್ಟದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಹಲವೆಡೆ ಪರೀಕ್ಷಾ ಮಟ್ಟವೂ ಕುಸಿದಿದೆ. ಆಸ್ಪತ್ರೆಗಳಲ್ಲಿ ಆಮ್ಲಜನಕ, ಹಾಸಿಗೆ, ಔಷಧಗಳ ಕೊರತೆ ಅಧಿಕವಾಗಿದೆ ಎಂದು ಅಮೆರಿಕ ರಾಯಭಾರಿ ಎಚ್ಚರಿಕೆ ನೀಡಿದೆ.
ಹಲವು ರಾಷ್ಟ್ರಗಳು ಈಗಾಗಲೇ ಭಾರತದ ವಿಮಾನ ಸಂಪರ್ಕವನ್ನು ಕಡಿತಗೊಳಿಸಿವೆ.
ಭಾರತದಲ್ಲಿ ಮತ್ತೆ ಕೊರೊನಾ ಸ್ಫೋಟವಾಗಿದ್ದು, ಗುರುವಾರ 3,79,257 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನದಲ್ಲಿ 3645 ಮಂದಿ ಸಾವನ್ನಪ್ಪಿದ್ದಾರೆ, 2,69,507 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 1,83,76,524 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೆ 1,50,86,878 ಮಂದಿ ಗುಣಮುಖರಾಗಿದ್ದಾರೆ. 30,84,814 ಪ್ರಕರಣಗಳು ಸಕ್ರಿಯವಾಗಿವೆ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications