Mamata Banerjee: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು
ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ರಾಜಕೀಯ ರೂಪ ಪಡೆದುಕೊಂಡಿದೆ. ಆಡಳಿತಾರೂಡ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಇದೇ ವಿಚಾರವನ್ನು ಇಟ್ಟುಕೊಂಡು ಪರಸ್ಪರ ವಾಗ್ದಾಳಿ ನಡೆಸುತ್ತಿವೆ. ಈ ಬೆನ್ನಲ್ಲೇ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಾಗಿದೆ.
ಬುಧವಾರ ಮಮತಾ ಬ್ಯಾನರ್ಜಿ ನೀಡಿರುವ ಹೇಳಿಕೆಯನ್ನು ಆಧರಿಸಿ ವಕೀಲರೊಬ್ಬರು ದೆಹಲಿ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಮಮತಾ ಬ್ಯಾನರ್ಜಿ ಪ್ರಚೋದನಾಕಾರಿ ಮತ್ತು ಅಶಾಂತಿಯನ್ನು ಸೃಷ್ಟಿಸುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪ ಮಾಡಿದ್ದಾರೆ.

ತೃಣಮೂಲ ಛಾತ್ರ ಪರಿಷತ್ತಿನ ಕಾರ್ಯಕ್ರಮವೊಂದರಲ್ಲಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ಸುಪ್ರೀಂ ಕೋರ್ಟ್ನಲ್ಲಿ ವಕೀಲರಾಗಿರುವ ವಿನೀತ್ ಜಿಂದಾಲ್ ದೂರು ನೀಡಿದ್ದಾರೆ. ನೆನಪಿಡಿ, ಬಂಗಾಳ ಸುಟ್ಟುಹೋದರೆ, ಅಸ್ಸಾಂ, ಬಿಹಾರ, ಜಾರ್ಖಂಡ್, ಒಡಿಶಾ, ಮತ್ತು ದೆಹಲಿಯೂ ಉರಿಯುತ್ತದೆ ಎಂದು ಮಮತಾ ಬ್ಯಾನರ್ಜಿ ಕಾರ್ಯಕ್ರದಲ್ಲಿ ಮಾತನಾಡುವ ಹೇಳಿದ್ದರು.
ಮುಖ್ಯಮಂತ್ರಿಯಾಗಿ ಹೀಗೆ ಮಾತನಾಡಬಾರದು
ಮಮತಾ ಬ್ಯಾನರ್ಜಿಯವರ ಹೇಳಿಕೆ ಪ್ರಚೋದನಕಾರಿಯಾಗಿದೆ. ಪ್ರಾದೇಶಿಕ ದ್ವೇಷವನ್ನು ಅವರ ಹೇಳಿಕೆ ಪ್ರಚೋದಿಸುತ್ತದೆ. ಇದರಿಂದ ದೇಶದ ಸಾಮರಸ್ಯ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಅಪಾಯ ಉಂಟು ಮಾಡುತ್ತದೆ ಎಂದು ವಕೀಲ ಜಿಂದಾಲ್ ವಾದಿಸಿದ್ದಾರೆ. ರಾಜ್ಯವೊಂದರ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೇಳಿಕೆ ನೀಡುವ ಕನಿಷ್ಠ ಜವಾಬ್ದಾರಿ ಹೊಂದಿರಬೇಖು. ಇಂತಹ ಹೇಳಿಕೆಗಳು ಗಲಭೆಗೆ ಪ್ರಚೋದನೆ ನೀಡಬಹುದು ಎಂದಿದ್ದಾರೆ.
ಮಮತಾ ಬ್ಯಾನರ್ಜಿ ಅವರ ಹೇಳಿಕೆ ಜನಸಾಮಾನ್ಯರ ನಡುವೆ ದ್ವೇಷ ಉಂಟುಮಾಡುವ ಉದ್ದೇಶವನ್ನು ಹೊಂದಿದೆ. ಅವರು ತಮ್ಮ ಭಾಷಣದಲ್ಲಿ ದೆಹಲಿ ಹೆಸರನ್ನು ಉಲ್ಲೇಖಿಸಿದ್ದಾರೆ. ನಾನು ದೆಹಲಿಯ ನಿವಾಸಿಯಾಗಿದ್ದು ಮಮತಾ ಬ್ಯಾನರ್ಜಿ ವಿರುದ್ಧ ಭಾರತ ನ್ಯಾಯ ಸಂಹಿತೆ ಸೆಕ್ಷನ್ 152, 192, 196 ಮತ್ತು 353 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಮಮತಾ ಬ್ಯಾನರ್ಜಿ ಹೇಳಿದ್ದಿಷ್ಟು
ಬುಧವಾರ ಬಿಜೆಪಿ ಕರೆಕೊಟ್ಟಿದ್ದ 12 ಗಂಟೆಗಳ ಬಂಗಾಳ ಬಂದ್ ಅನ್ನು ಖಂಡಿಸಿದ ಸಿಎಂ ಮಮತಾ ಬ್ಯಾನರ್ಜಿ, ಇದು ರಾಜ್ಯಕ್ಕೆ ಅವಮಾನ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಅಶಾಂತಿ ಸೃಷ್ಟಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷದ ನಾಯಕರು, ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
"ಇದು ಬಾಂಗ್ಲಾದೇಶದ ಪ್ರತಿಭಟನೆಯನ್ನು ಹೋಲುತ್ತದೆ ಎಂದು ಕೆಲವರು ಭಾವಿಸಿದ್ದಾರೆ. ನಾನು ಬಾಂಗ್ಲಾದೇಶವನ್ನು ಪ್ರೀತಿಸುತ್ತೇನೆ, ಅವರೂ ಬಂಗಾಳಿ ಭಾಷೆಯನ್ನು ಮಾತನಾಡುತ್ತಾರೆ. ನಮ್ಮ ಸಂಸ್ಕೃತಿ ಕೂಡ ಅದೇ, ಆದರೂ ಬಾಂಗ್ಲಾದೇಶ ವಿಭಿನ್ನವಾಗಿದೆ" ಎಂದು ಹೇಳಿದರು.
ಮೋದಿಯವರೇ, ನೀವು ನಿಮ್ಮ ಜನರ ಮೂಲಕ ಬಂಗಾಳದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದೀರಿ, ಆದರೆ ನೆನಪಿಡಿ ಬಂಗಾಳ, ಅಸ್ಸಾಂ, ಈಶಾನ್ಯ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ದೆಹಲಿಯನ್ನು ಸುಟ್ಟುಹಾಕಿದರೆ, ಎಂದು ಹೇಳಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications