Leopard: ಕರ್ನಾಟಕದಲ್ಲಿ ಚಿರತೆ ಸಂಖ್ಯೆ ಏರಿಕೆ: ಈ ರಾಜ್ಯ ದೇಶದಲ್ಲೇ ನಂ.1
ಕರ್ನಾಟಕದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗಿದೆ. ದೇಶಾದ್ಯಂತ ಚಿರತೆಗಳ ಸಂಖ್ಯೆಯ ವರದಿಯನ್ನು ಬಿಡುಗಡೆ ಮಾಡಲಾಗಿದ್ದು ಇದರಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನವಿದೆ.
ದೇಶಾದ್ಯಂತ 2018-2022ರ 4 ವರ್ಷದ ಅವಧಿಯಲ್ಲಿ 1,022 ಚಿರತೆಗಳು ಹೆಚ್ಚಳವಾಗಿದ್ದು, 2022ರ ಅಂತ್ಯದಲ್ಲಿ ಸುಮಾರು 13,874 ಚಿರತೆಗಳಿವೆ ಎಂದು 'ಭಾರತದಲ್ಲಿ ಚಿರತೆಗಳ ಸ್ಥಿತಿಗತಿ' ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ತಿಳಿಸಿದೆ. ಇದೇ ವೇಳೆ, ದೇಶದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಕರ್ನಾಟಕ 1879 ಚಿರತೆಗಳ ಮೂಲಕ 3ನೇ ಸ್ಥಾನ ಪಡೆದಿದ್ದರೆ, ಮಧ್ಯಪ್ರದೇಶ 3,907 ಚಿರತೆ ಮೂಲಕ ನಂ.1 ಹಾಗೂ ಮಹಾರಾಷ್ಟ್ರ 1985 ಚಿರತೆ ಮೂಲಕ ನಂ.2 ಸ್ಥಾನ ಪಡೆದಿದೆ.

ದೇಶದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಳ
ರಾಜ್ಯ ಚಿರತೆ ಸಂಖ್ಯೆ ಸ್ಥಾನ
| ರಾಜ್ಯ | ಚಿರತೆ ಸಂಖ್ಯೆ | ಸ್ಥಾನ |
| ಮಧ್ಯಪ್ರದೇಶ | 3,907 | 1 |
| ಮಹಾರಾಷ್ಟ್ರ | 1985 | 2 |
| ಕರ್ನಾಟಕ | 1879 | 3 |
| ತಮಿಳುನಾಡು | 1070 | 4 |
ಈ ವರದಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಕೇಂದ್ರ ಪರಿಸರ ಸಚಿವ ಭೂಪೇಮದ್ರ ಯಾದವ್, 'ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ನಮ್ಮ ಸಂರಕ್ಷಣಾ ಕಾರ್ಯಾಚರಣೆಯು ಒಂದು ಭೂಮಿ, ಒಂದು ಕುಟುಂಬ ಮತ್ತು ಒಂದು ಭವಿಷ್ಯ ಎಂಬ ಧೈಯದಲ್ಲಿ ಮುಂದೆ ಸಾಗಲಿದೆ. ವರದಿಯಲ್ಲಿ ತಿಳಿಸಿರುವಂತೆ ಸಂರಕ್ಷಿತ ಪ್ರದೇಶಗಳಾಚೆಗೂ ಸಹ ಚಿರತೆಗಳನ್ನು ನಾವು ರಕ್ಷಣೆ ಮಾಡಬೇಕಾದ ಅಗತ್ಯವಿದೆ' ಎಂದು ತಿಳಿಸಿದರು.
ಎಲ್ಲೆಲ್ಲಿ ಎಷ್ಟು ಹೆಚ್ಚಳ?
ಈ ಅವಧಿಯಲ್ಲಿ ಮಧ್ಯಪ್ರದೇಶದಲ್ಲಿ 4 ವರ್ಷದಲ್ಲಿ (2028-2022) 486 ಚಿರತೆಗಳ ಹೆಚ್ಚಳದೊಂದಿಗೆ 3,907 ಚಿರತೆಗಳಿದ್ದು ಮೊದಲ ಸ್ಥಾನದಲ್ಲಿದೆ. ನಂತರದ ಮಹಾರಾಷ್ಟ್ರದಲ್ಲಿ 295 ಚಿರತೆ ಹೆಚ್ಚಳದೊಂದಿಗೆ ಒಟ್ಟಾರೆ ಸಂಖ್ಯೆ 1985ಕ್ಕೆ ಏರಿಕೆಯಾಗಿ 2ನೇ ಸ್ಥಾನಗಳಿಸಿದೆ. ಕರ್ನಾಟಕದಲ್ಲಿ 96 ಹೆಚ್ಚಳವಾಗಿದೆ ಒಟ್ಆರೆ 1879 ಚಿರತೆಗಳೊಂದಿಗೆ 3ನೇ ಸ್ಥಾನ ಮತ್ತು ತಮಿಳುನಾಡಿನಲ್ಲಿ 202 ಹೆಚ್ಚಳದೊಂದಿಗೆ 1070 ಚಿರತೆಗಳಿದ್ದು, ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿವೆ.
ಪ್ರದೇಶವಾರು ಲೆಕ್ಕದಲ್ಲಿ ಮಧ್ಯಭಾಗ ಮತ್ತು ಪೂರ್ವವಲಯದಲ್ಲಿ ವಾರ್ಷಿಕ ಶೇ.1.5ರಷ್ಟು (749) ಹೆಚ್ಚಳ ಕಂಡುಬಂದಿದ್ದರೆ, ಶಿವಾಲಿಕ್ ಮತ್ತು ಗಂಗಾ ಅಧಿಮುಖಜಭೂಮಿಯಲ್ಲಿ ಚಿರತೆಗಳ ಸಂಖ್ಯೆಯಲ್ಲ ಶೇ. 3.9ರಷ್ಟು (144) ಇಳಿಕೆಯಾಗಿದೆ. ರಕ್ಷಿತಾರಣ್ಯಗಳಲ್ಲಿ ಶ್ರೀಶೈಲದ ನಾಗಾರ್ಜುನಸಾಗರ ಹೆಚ್ಚಿನ ಸಂಖ್ಯೆಯಲ್ಲಿ ಚಿರತೆಗಳನ್ನು ಹೊಂದಿದ್ದು, ಮಧ್ಯಪ್ರದೇಶದ ಪನ್ನಾ ಮತ್ತು ಸಾತ್ಪುರ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.
ಈ ಸಮೀಕ್ಷೆಯಲ್ಲಿ 18 ಹುಲಿ ಸಂರಕ್ಷಿತಾರಣ್ಯಗಳ 6 ಲಕ್ಷಕ್ಕೂ ಅಧಿಕ ಕಿ.ಮೀ ಪ್ರದೇಶದಲ್ಲಿ ಮಾಡಲಾಗಿದೆ. ಈ ಅವಧಿಯಲ್ಲಿ 32,803 ಕಡೆ ಕ್ಯಾಮರಾ ಅಳವಡಿಸಿದ್ದು, ಅವುಗಳಿಂದ ಚಿರತೆಗಳ 85,488 ಚಿತ್ರಗಳನ್ನು ಸೆರೆ ಹಿಡಿಯಲಾಗಿದೆ. ಜೊತೆಗೆ ವರದಿಯಲ್ಲಿನ ಅಂಕಿ ಅಂಶಗಳು ತಿಳಿಸುವಂತೆ ರಕ್ಷಿತಾರಣ್ಯಗಳ ಆಚೆಗೂ ಚಿರತೆಗಳ ಸಂರಕ್ಷಣೆಗೆ ಎಲ್ಲರೂ ಒಟ್ಟಾಗಿ ಕೈ ಜೋಡಿಸಬೇಕಿದೆ ಎಮದು ಸಮೀಕ್ಷೆ ಉಲ್ಲೇಖಿಸಿದೆ.
ಇದು ಖುಷಿಯ ಸುದ್ದಿ ಎಂದ ಮೋದಿ!
ಖುಷಿಯ ಸುದ್ದಿ! ಚಿರತೆ ಸಂಖ್ಯೆ ಈ ಗಮನಾರ್ಹ ಹೆಚ್ಚಳವು ಜೀವವೈವಿದ್ಯತೆಗೆ ಭಾರತದ ಅಚಲವಾದ ಸಮರ್ಪಣೆಗೆ ಸಾಕ್ಷಿಯಾಗಿದೆ. ಸುಸ್ಥಿರ ಸಹಬಾಳ್ವೆಗೆ ದಾರಿ ಮಾಡಿಕೊಡುವ, ವನ್ಯಜೀವಿ ಸಂರಕ್ಷಣೆಯ ವಿವಿಧ ಸಾಮೂಹಿಕ ಪ್ರಯತ್ನಗಳ ಭಾಗವಾಗಿರುವ ಎಲ್ಲರನ್ನು ನಾನು ಅಭಿನಂದಿಸುತ್ತೇನೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications