ಲೆಸ್ಬಿಯನ್ಸ್, ಗೇಗಳು ತೃತೀಯಲಿಂಗಿಗಳಲ್ಲ: ಸುಪ್ರೀಂಕೋರ್ಟ್
ಬೆಂಗಳೂರು, ಜೂನ್ 30: ಲೆಸ್ಬಿಯನ್ಸ್,ಗೇ ಅಥವಾ ಸಲಿಂಗಕಾಮಿಗಳನ್ನು ತೃತೀಯಲಿಂಗಿಗಳು ಎಂದು ಕರೆಯಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಈ ಮೂಲಕದ 2014ರ ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಸುಪ್ರೀಂಕೋರ್ಟ್ ಮಂಗಳಮುಖಿ (ಟ್ರಾನ್ಸ್ಜೆಂಡರ್) ಸಮುದಾಯವನ್ನು ಪುರುಷರು ಮತ್ತು ಸ್ತ್ರೀಯರ ಜೊತೆಗೆ ತೃತೀಯ ಲಿಂಗಿಗಳು ಎಂದು ಮಾನ್ಯ ಮಾಡಿತ್ತು.
ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ (ನ್ಯಾಷನಲ್ ಲೀಗಲ್ ಸರ್ವೀಸಸ್ ಅಥಾರಿಟಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬಳಿಕ ಸುಪ್ರೀಂಕೋರ್ಟ್ ಜಸ್ಟೀಸ್ ಎಕೆ ಸಿಕ್ರಿ ಹಾಗೂ ಎನ್ ವಿ ರಮಣ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.[ಸಲಿಂಗಿಗಳಿಗೆ ಸದ್ಯಕ್ಕೆ ಸಿಹಿ ಸುದ್ದಿ ನೀಡಿದ ಸುಪ್ರೀಂಕೋರ್ಟ್]
ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಕಲ್ಪಿಸುವಾಗ ಮತ್ತು ಸರ್ಕಾರಿ ನೇಮಕಾತಿಗಳ ಸಂದರ್ಭದಲ್ಲಿ ಈ ತೃತೀಯ ಲಿಂಗಿಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳು ಎಂಬುದಾಗಿ ಪರಿಗಣಿಸಬೇಕು ಎಂದು ಪೀಠವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತು.[ಐಪಿಸಿ 377 : ಸುಪ್ರೀಂ ತೀರ್ಪೂ, ಲೈಂಗಿಕ ಆಸಕ್ತಿಯೂ]

ನ್ಯಾಯಮೂರ್ತಿಗಳಾದ ಕೆ.ಎಸ್. ರಾಧಾಕೃಷ್ಣನ್ ಮತ್ತು ಎ.ಕೆ. ಸಿಕ್ರಿ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ಪೀಠವು ಪ್ರತ್ಯೇಕವಾದ ಆದರೆ ಒಟ್ಟಿಗೆ ನೀಡಿದ ತೀರ್ಪುಗಳಲ್ಲಿ ಅವಳಿ ಲಿಂಗಿಗಳ ಹೊರತಾಗಿ ನಪುಂಸಕರನ್ನು ಸಂವಿಧಾನದತ್ತವಾದ ಮತ್ತು ಸಂಸತ್ತು, ಶಾಸನ ಸಭೆಗಳಿಂದ ರಚಿತವಾದ ಕಾನೂನುಗಳ ಪ್ರಕಾರ ಅವರ ಹಕ್ಕುಗಳ ರಕ್ಷಣೆಯ ಸಲುವಾಗಿ ತೃತೀಯ ಲಿಂಗಿಗಳಾಗಿ ಪರಿಗಣಿಸಬೇಕು ಎಂದು ಈ ಹಿಂದೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಸೆಲೆಬ್ರಿಟಿ ಚೆಫ್ ರಿತು ದಾಲ್ಮಿಯಾ, ಹೊಟೇಲ್ ಉದ್ಯಮಿ ಅಮನ್ನಾಥ, ನ್ಯತ್ಯಪಟು ಎನ್.ಎಸ್. ಜೋಹರ್ ಮತ್ತಿತರ ಸಿಲೆಬ್ರಿಟಿ ಸಲಿಂಗಕಾಮಿಗಳು ಸಲಿಂಗಕಾಮವನ್ನು ಕ್ರಿಮಿನಲ್ ಅಪರಾಧವಾಗಿ ಪರಿಗಣಿಸಿದ ಐಪಿಸಿ ಸೆಕ್ಷನ್ 377ರ ಸಿಂಧುತ್ವವನ್ನು ಪ್ರಶ್ನಿಸಿ ಬುಧವಾರ ಸಲ್ಲಿಸಿದ್ದ ಜಂಟಿ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ. ಈ ಮೂಲಕ ಈ ಸೆಕ್ಷನ್ ದುರ್ಬಳಕೆಯಾಗುತ್ತಿರುವುದನ್ನು ತಡೆಗಟ್ಟುವಂತೆ ಸೂಚಿಸಿದೆ. [ಸಲಿಂಗಕಾಮ ರೋಗ ಲಕ್ಷಣವಲ್ಲ: ಮನೋರೋಗ ವೈದ್ಯರು]
ಈ ತೀರ್ಪಿನ ಪರಿಣಾಮವಾಗಿ ಜನನ ಪ್ರಮಾಣಪತ್ರ, ಪಾಸ್ಪೋರ್ಟ್, ಪಡಿತರ ಚೀಟಿ, ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ಎಲ್ಲಾ ಗುರುತಿನ ದಾಖಲೆಗಳಲ್ಲಿ ಮಂಗಳಮುಖಿಯರನ್ನು ತೃತೀಯ ಲಿಂಗಿಗಳು ಎಂಬುದಾಗಿ ಮಾನ್ಯ ಮಾಡಬೇಕಾಗುತ್ತದೆ. (ಪಿಟಿಐ)
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications