Get Updates
Get notified of breaking news, exclusive insights, and must-see stories!

ರಾಹುಲ್‌ ಸಾವರ್ಕರ್‌ ಕ್ಷಮೆ ಕೇಳಿದ್ದನ್ನು ಸಾಬೀತು ಮಾಡಲಿ

ನವದೆಹಲಿ, ಮಾರ್ಚ್‌ 28: ಸಾವರ್ಕರ್ ವಿವಾದ ಹೆಚ್ಚಾಗುತ್ತಲೇ ಇದ್ದು, ಈಗ ಈ ವಿಷಯಕ್ಕೆ ಸ್ವತಃ ಸಾವರ್ಕರ್‌ ಅವರ ಮೊಮ್ಮಗನೇ ಇಳಿದಿದ್ದಾರೆ. ಬ್ರಿಟಿಷರಲ್ಲಿ ಸಾವರ್ಕರ್‌ ಕ್ಷಮೆಯಾಚಿಸಿದ್ದರು ಎಂಬುದನ್ನು ರಾಹುಲ್‌ ಗಾಂಧಿ ಸಾಬೀತುಪಡಿಸಬೇಕು ಎಂದು ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ರಾಹುಲ್ ಗಾಂಧಿಗೆ ಸವಾಲು ಹಾಕಿದ್ದಾರೆ.

ರಾಹುಲ್‌ ಗಾಂಧಿ ಕ್ಷುಲ್ಲಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿರುವ ಸಾವರ್ಕರ್‌ ಮೊಮ್ಮಗ ರಂಜಿತ್ ಸಾವರ್ಕರ್‌, ಸಾವರ್ಕರ್ ಅವರು ಕ್ಷಮೆಯಾಚಿಸಿದ್ದರು ಎಂಬುದನ್ನು ದಾಖಲೆ ಸಮೇತ ಸಾಬೀತುಪಡಿಸಬೇಕು. ರಾಜಕೀಯ ಪ್ರಚಾರಕ್ಕಾಗಿ ದೇಶಭಕ್ತರ ಹೆಸರನ್ನು ಬಳಸುವುದು ತಪ್ಪು, ಇವರ ವಿರುದ್ಧ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಹೇಳಿದ್ದಾರೆ.

Let Rahul Gandhi prove that Savarkar apologized: Ranjit Savarkar

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ರಾಹುಲ್‌ ಗಾಂಧಿ ಸಾರಿ ಕೇಳಲು ನನ್ನ ಹೆಸರು ಸಾವರ್ಕರ್ ಅಲ್ಲ ಎಂದು ಪತ್ರಕರ್ತನ ಪ್ರಶ್ನೆಗೆ ಉತ್ತರ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಾವರ್ಕರ್‌ ಮೊಮ್ಮಗ ರಂಜಿತ್‌ ಸಾವರ್ಕರ್‌ ರಾಹುಲ್‌ ಗಾಂಧಿಗೆ ಸವಾಲು ಹಾಕಿದ್ದಾರೆ. ನನ್ನ ಹೆಸರು ಸಾವರ್ಕರ್ ಅಲ್ಲ. ನಾನು ಗಾಂಧಿ. ಹಾಗಾಗಿ ನಾನು ಕ್ಷಮೆ ಕೇಳುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿರುಗೇಟು ನೀಡಿದ್ದರು.

ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ವಿಚಾರಕ್ಕೆ ಸಂಬಂಧಿಸಿದ ಒಂದು ದಿನದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಅದಾನಿ ವಿರುದ್ಧ ಟೀಕೆಗಳನ್ನು ಮುಂದುವರೆಸಿದ್ದರು. ನನಗೆ ಮೋದಿ ಅವರ ಕಣ್ಣುಗಳಲ್ಲಿ ಭಯ ಕಾಣಿಸಿದೆ. ಅದಕ್ಕಾಗಿ ಸಂಸತ್‌ನಲ್ಲಿ ಮತ್ತೆ ಮತ್ತೆ ನನ್ನನ್ನು ಎದುರಿಸಲು ಸಾಧ್ಯವಾಗದೆ ಅವರು ನನ್ನನ್ನು ಅನರ್ಹ ಮಾಡಿಸಿದ್ದಾರೆ ಎಂದು ರಾಹುಲ್‌ ಆರೋಪಿಸಿದ್ದರು.

Let Rahul Gandhi prove that Savarkar apologized: Ranjit Savarkar

ಸಂಸತ್ತಿನಲ್ಲಿ ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಲಾಯಿತು. ಪ್ರಧಾನಿ ಮೋದಿ ಅವರ ಕಣ್ಣುಗಳಲ್ಲಿ ನಾನು ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡಲು ಅವರು ಬಯಸುವುದಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದರು.

ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಅವರು ಸಾವರ್ಕರ್ ಅವರ ಕುರಿತ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಎಫ್‌ಐಆರ್ ದಾಖಲಿಸುವುದಾಗಿ ಹೇಳಿದ್ದಾರೆ. ಅಲ್ಲದೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಕ್ಷಮೆಯಾಚಿಸಲು ರಾಹುಲ್‌ ಗಾಂಧಿಗೆ ಹೇಳಬೇಕು ಎಂದು ಹೇಳಿದ್ದಾರೆ. ಉದ್ಧವ್ ಠಾಕ್ರೆ ಮತ್ತು ಸಂಜಯ್ ರಾವತ್ ಅವರಿಗೆ ವೈಯಕ್ತಿಕವಾಗಿ ಸಾವರ್ಕರ್ ಬಗ್ಗೆ ಬಹಳ ಗೌರವವಿದೆ. ಆದರೆ ಅವರು ಮುಂದೆ ಹೋಗಿ ಸಾವರ್ಕರ್ ಅವರ ಹೇಳಿಕೆಗಾಗಿ ರಾಹುಲ್ ಗಾಂಧಿಯವರಿಗೆ ಕ್ಷಮೆಯಾಚಿಸಬೇಕು. ನಿಮ್ಮ ದೇವರನ್ನು ಅವಮಾನಿಸುವವರ ಜೊತೆ ನೀವು ಇರದಿರುವುದು ಸಾಮಾನ್ಯವಾಗಿದೆ ಎಂಬುದು ಅವರ ರಾಜಕೀಯ ನಿರ್ಧಾರವಾಗಿದ್ದು, ಸಾವರ್ಕರ್ ಅವರನ್ನು ಗೌರವಿಸುವುದಾದರೆ, ಅವರು ಹೇಳುವುದಷ್ಟೇ ಅಲ್ಲ, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಉದ್ಧವ್‌ ಠಾಕ್ರೆ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಸಾವರ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಹೇಳಿರುವ ಕಾಂಗ್ರೆಸ್ ಮುಖವಾಣಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದರು. ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ಮುಖವಾಣಿಯೊಂದು ಸಾವರ್ಕರ್ ವಿರುದ್ಧ ಅಸಹ್ಯ ಭಾಷೆ ಬಳಸಿತ್ತು. ಅದರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾನು ಮುಖ್ಯಮಂತ್ರಿಗೆ ಒತ್ತಾಯಿಸಿದ್ದೆ. ಆದರೆ ನನ್ನ ಪತ್ರಕ್ಕೆ ಯಾವುದೇ ಉತ್ತರ ಸಿಕ್ಕಿಲ್ಲ ಮತ್ತು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅವರ ಹೇಳಿಕೆಗೆ ಈ ಹಿಂದೆಯೂ ಪ್ರಕರಣ ದಾಖಲಿಸಿದ್ದೇನೆ, ರಾಹುಲ್ ಗಾಂಧಿ ಅವರು ಸಾವರ್ಕರ್ ಅವರ ಹೇಳಿಕೆಗೆ ಕ್ಷಮೆ ಯಾಚಿಸದಿದ್ದರೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸುತ್ತೇನೆ ಎಂದು ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+