ಗಣರಾಜ್ಯೋತ್ಸವ : ಸಿಮಿ, ಲಷ್ಕರ್ ದಾಳಿ ಸಾಧ್ಯತೆ
ನವದೆಹಲಿ, ಡಿ. 5 : ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೆಹಲಿ ಹೊರವಲಯದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಭಯೋತ್ಪಾದಕ ಸಂಘಟನೆಗಳು ಸಂಚು ರೂಪಿಸಿವೆ ಎಂದು ಗುಪ್ತಚರ ಇಲಾಖೆ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿವೆ. ಈ ಎಚ್ಚರಿಕೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
ಸ್ಟೂಡೆಂಟ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ) ಮತ್ತು ಲಷ್ಕರ್-ಎ-ತೋಯ್ಬಾ ಸಂಘಟನೆಗಳು ಜನವರಿ 26ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದಾಳಿ ನಡೆಸಬಹದು ಎಂದು ಇಲಾಖೆ ಪೊಲೀಸರಿಗೆ ಮಾಹಿತಿ ರವಾನಿಸಿದೆ. [ಗಣರಾಜ್ಯೋತ್ಸವಕ್ಕೆ ಒಬಾಮಾ ಬರ್ತಾರೆ]

ಅದರಲ್ಲೂ ಈ ಬಾರಿಯ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿರುವುದರಿಂದ, ದೆಹಲಿ ಪೊಲೀಸರು ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಣಿಸಿದ್ದಾರೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಲು ಮುಂದಾಗಿದ್ದು, ಭಾರತ ಮತ್ತು ಅಮೆರಿಕಾದ ಸಂಸ್ಥೆಗಳು ಭದ್ರತೆ ಉಸ್ತುವಾರಿ ನೋಡಿಕೊಳ್ಳಲಿವೆ.
ಸಿಮಿ ಮತ್ತು ಲಷ್ಕರ್ ಸಂಘಟನೆಗಳು ಅಮೆರಿಕದ ವಿರೋಧಿಯಾಗಿದ್ದು, ಇರಾಕ್, ಅಫ್ಘಾನಿಸ್ತಾನದ ವಿಚಾರದಲ್ಲಿ ಅಮೆರಿಕ ಮಧ್ಯಪ್ರವೇಶಿಸುವುದನ್ನು ಮೊದಲಿನಿಂದಲೂ ವಿರೋಧಿಸುತ್ತಿದೆ. ಇಂತಹ ವಿಚಾರದಲ್ಲಿ ಮಧ್ಯಪ್ರವೇಶಿಸಬೇಡಿ ಎನ್ನುವ ಸಂದೇಶ ನೀಡಲು ದಾಳಿಗಳನ್ನು ನಡೆಸಿವೆ.
ಗುಪ್ತಚರ ಇಲಾಖೆ ಮೂಲಗಳ ಪ್ರಕಾರ ದೆಹಲಿಗೆ ಮಾತ್ರ ಮುನ್ನೆಚ್ಚರಿಕೆ ನೀಡಲಾಗಿಲ್ಲ. ದೆಹಲಿ ಅಕ್ಕ-ಪಕ್ಕದ ರಾಜ್ಯಗಳಿಗೂ ಸಂದೇಶ ರವಾನಿಸಲಾಗಿದೆ. ಅಮೆರಿಕ ಅಧ್ಯಕ್ಷರು ಭಾರತಕ್ಕೆ ಆಗಮಿಸಿದ ಸಂದರ್ಭದಲ್ಲಿ ಅಕ್ಕ-ಪಕ್ಕದ ರಾಜ್ಯಗಳಲ್ಲಿ ದಾಳಿ ನಡೆದರೂ ಅದು ಭದ್ರತಾ ವ್ಯವಸ್ಥೆ ಬಗ್ಗೆ ಪ್ರಶ್ನೆಯನ್ನು ಹುಟ್ಟುಹಾಕಲಿದೆ.
ದೇಶದ ರಕ್ಷಣಾ ಪಡೆಗಳಿಗೆ ಸಿಮಿ ಸಂಘಟನೆಯೇ ಸವಾಲಾಗಿದೆ. ಅದರಲ್ಲೂ ಮಧ್ಯಪ್ರದೇಶದ ಜೈಲಿನಿಂದ ತಪ್ಪಿಸಿಕೊಂಡ ಐವರು ಸಿಮಿಯ ಸದಸ್ಯರು ಚೆನ್ನೈ ರೈಲ್ವೆ ನಿಲ್ದಾಣ ಸ್ಫೋಟ ಸೇರಿದಂತೆ ಹಲವಾರು ವಿಧ್ವಂಸಕ ಕೃತ್ಯಗಳಲ್ಲಿ ಪಾಲ್ಗೊಂಡಿದ್ದಾರೆ ಎಂಬ ಶಂಕೆ ಇದೆ.
ಗಣರಾಜ್ಯೋತ್ಸಕ್ಕೆ ವಿದೇಶಿ ಗಣ್ಯರು ಆಗಮಿಸುವುರಿಂದ ದಾಳಿ ಮಾಡಬಹುದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಐಎಸ್ಐ ಮತ್ತು ಲಷ್ಕರ್ ಸಂಘಟನೆಗಳು ದೆಹಲಿ ಮತ್ತು ಪಂಜಾಬ್ ರಾಜ್ಯಗಳನ್ನು ಗುರಿಯಾಗಿಸಿಕೊಳ್ಳುವ ಸಾಧ್ಯತೆಯೂ ಇದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications