ಮುಖ್ಯ ನ್ಯಾಯಮೂರ್ತಿ 'ಪದಚ್ಯುತಿ' ದೇಶ ನಿರ್ಧರಿಸಲಿ: ನ್ಯಾ. ಚೆಲಮೇಶ್ವರ್
ನವದೆಹಲಿ, ಜನವರಿ 12: "ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ (ದೀಪಕ್ ಮಿಶ್ರಾ) ಅವರನ್ನು ಪದಚ್ಯುತಗೊಳಿಸಬೇಕೆ? ಈ ಪ್ರಶ್ನೆಗೆ ದೇಶದ ಜನತೆಯೇ ಉತ್ತರ ನೀಡಲಿ!"
ಹೀಗೆಂದು, ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಚೆಲಮೇಶ್ವರ್ ಅವರು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗವಾಗಿ ಹೇಳಿ, ನ್ಯಾಯಾಂಗ ವ್ಯವಸ್ಥೆಯಲ್ಲಿರುವ ಹುಳುಕನ್ನು ತೆರೆದು ತೋರಿಸಿದ್ದು ಮಾತ್ರವಲ್ಲ, ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದ್ದಾರೆ.

ಸುಪ್ರಿಂ ಕೋರ್ಟ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂದು ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಪತ್ರಿಕಾಗೋಷ್ಠಿಯ ಮೂಲಕ ಬಹಿರಂಗ ಹೇಳಿಕೆ ನೀಡಿದ್ದಾರೆ.
ದೇಶದ ನ್ಯಾಯಾಂಗ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ನಾಲ್ವರು ನ್ಯಾಯಮೂರ್ತಿಗಳು ಪತ್ರಿಕಾಗೋಷ್ಠಿ ಕರೆದು ತಮ್ಮ ಅಸಮಧಾನ ಹೊರಹಾಕಿದ್ದಾರೆ.











Click it and Unblock the Notifications