ಕೇರಳದಲ್ಲಿ ಲೋಕ ಸೇವಾ ಪರೀಕ್ಷೆ ಬರೆಯಲಿದ್ದಾರೆ ಮಂಗಳಮುಖಿಯರು
ತಿರುವನಂತಪುರಂ, ಅಕ್ಟೋಬರ್ 25: ಕೇರಳ ಲೋಕ ಸೇವಾ ಆಯೋಗದ ಪರೀಕ್ಷೆ ಬರೆಯಲು ತೃತೀಯ ಲಿಂಗಿಗಳಿಗೆ ಅವಕಾಶ ನೀಡುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ಮಹಿಳಾ ವರ್ಗದಲ್ಲಿ ಪರೀಕ್ಷೆ ಬರೆಯಲು ಮಂಗಳಮುಖಿಯರಿಗೆ ಅವಕಾಶ ನೀಡುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ.
ಈ ಹಿಂದೆ ಲೋಕ ಸೇವಾ ಆಯೋಗ (ಪಿಎಸ್ ಸಿ) ಪರೀಕ್ಷೆಯ ಅರ್ಜಿಯಲ್ಲಿ ತೃತೀಯ ಲಿಂಗಿಗಳಿಗೆ ಪ್ರತ್ಯೇಕ ಕಾಲಂನಡಿ ಅವಕಾಶ ನೀಡಲಾಗುವುದು ಎಂದು ವರದಿಯಾಗಿತ್ತು. ಮತ್ತು ತೃತೀಯ ಲಿಂಗಿಗಳಿಗೆ ಮೀಸಲಾತಿ ನೀಡುವ ಸಂಬಂಧ ರಾಜ್ಯ ಸರಕಾರದ ನಿರ್ಧಾರವನ್ನುಆಯೋಗ ಎದುರು ನೋಡುತ್ತಿತ್ತು.

ಇದೀಗ ಹೈಕೋರ್ಟ್ ಮಹಿಳಾ ವಿಭಾಗದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಇದೊಂದು ಐತಿಹಾಸಿಕ ತೀರ್ಮಾನವಾಗಿದೆ.
2014ರಲ್ಲಿ ಸುಪ್ರಿಂ ಕೋರ್ಟ್ ಮೀಸಲಾತಿಯನ್ನು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಮಂಗಳಮುಖಿಯರಿಗೆ ವಿಸ್ತರಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು. ಅದಾದ ಬಳಿಕ 2015ರಲ್ಲಿ ಕೇರಳಲ್ಲಿ ತೃತೀಯ ಲಿಂಗಿಗಳಿಗೆ ಪುರುಷ ಮತ್ತು ಮಹಿಳೆಯರ ಜತೆ ಮೂರನೇ ಲಿಂಗವಾಗಿ ಅಧಿಕೃತ ಮಾನ್ಯತೆ ನೀಡಲಾಗಿತ್ತು.
ಇದಲ್ಲದೆ ಮಂಗಳಮುಖಿಯರಿಗಾಗಿ ಕ್ರೀಡಾಕೂಟ, ಫ್ಯಾಷನ್ ಷೋಗಳನ್ನೂ ಹಮ್ಮಿಕೊಂಡು ಕೇರಳ ದೇಶದ ಉಳಿದೆಲ್ಲಾ ರಾಜ್ಯಗಳಿಗಿಂತ ಒಂದು ಹೆಜ್ಜೆ ಮುಂದಕ್ಕೆ ಹೋಗಿತ್ತು. ಇದೀಗ ಆಡಳಿತ ಸೇವೆಗೆ ತೃತೀಯ ಲಿಂಗಿಗಳು ಕಾಲಿಡಲು ಅವಕಾಶ ನೀಡಿದ್ದು ಉಳಿದ ರಾಜ್ಯಗಳಿಗೆ ಮಾದರಿಯಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications