ಆಧಾರ್-ಆಸ್ತಿ ಜೋಡಣೆ ಸುದ್ದಿ ನಕಲಿ ಎಂದ ಕೇಂದ್ರ ಸರಕಾರ
ಭೂ ದಾಖಲೆಗಳನ್ನು ಆಧಾರ್ ಗೆ ಜೋಡಣೆ ಹಾಗೂ ಡಿಜಿಟಲೈಸ್ ಮಾಡಬೇಕು ಎಂಬ ಸುದ್ದಿಯೊಂದು ವಿಪರೀತ ಚರ್ಚೆಗೆ ಬಂತು. ಅದು ಸುಳ್ಳು ಸುದ್ದಿ ಎಂದು ಸರಕಾರ ಹೇಳಿದೆ. ಭಾರತ ಸರಕಾರದ ಮುಖ್ಯ ವಕ್ತಾರ ಫ್ರಾಂಕ್ ನರೋನ್ಹಾ ಈ ಬಗ್ಗೆ ಮಾತನಾಡಿದ್ದು, ಈಗ ಹರಿದಾಡುತ್ತಿರುವ ಪತ್ರ ನಕಲಿ, ಯಾರೋ ತುಂಟತನದಿಂದ ಸೃಷ್ಟಿ ಮಾಡಿರುವುದು ಎಂದಿದ್ದಾರೆ.
ಈ ಹಿಂದೆ ಇದೇ ಪತ್ರದ ವಿಚಾರವಾಗಿ ಆದ ಸುದ್ದಿ ಕೂಡ ಇಲ್ಲಿ ಪ್ರಕಟಿಸಲಾಗಿದೆ.
******
ನವದೆಹಲಿ, ಜೂನ್ 19: ಮಾಲೀಕರ ಭೂ ದಾಖಲೆಗಳೊಂದಿಗೆ ಆಧಾರ್ ಜೋಡಣೆ ಮಾಡುವ ಚಿಂತನೆ ನಡೆಸಿದೆ ಕೇಂದ್ರ ಸರಕಾರ. 1950ರಿಂದ ಇಲ್ಲಿವರೆಗಿನ ಎಲ್ಲ ಭೂ ದಾಖಲೆಗಳನ್ನು ಮಾಲೀಕರು ಆಧಾರ್ ಜತೆಗೆ ಜೋಡಣೆ ಮಾಡಬೇಕಾಗುತ್ತದೆ.
1950ರಿಂದ ಇಲ್ಲಿವರೆಗಿನ ಎಲ್ಲ ಭೂ ದಾಖಲೆಗಳನ್ನು ಡಿಜಿಟಲೈಸ್ ಮಾಡುವಂತೆ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಲಾಗಿದೆ. ಡಿಜಿಟಲೈಸ್ ಆದ ಭೂ ದಾಖಲೆಯ ಜತೆಗೆ ಯಾರಾದರೂ ಆಧಾರ್ ಜೋಡಣೆ ಮಾಡಲಿಲ್ಲ ಅಂದರೆ ಅಂಥವರ ವಿರುದ್ಧ ಬೇನಾಮಿ ವ್ಯವಹಾರ (ನಿಷೇಧ) ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಜೂನ್ ಹದಿನೈದರಂದು ಎಲ್ಲ ರಾಜ್ಯ- ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಹೆಚ್ಚುವರಿ ಕಾರ್ಯದರ್ಶಿಗಳಿಗೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್, ನೀತಿ ಆಯೋಗದ ಕಾರ್ಯದರ್ಶಿಗೆ ಈ ಬಗ್ಗೆ ಕೇಂದ್ರದಿಂದ ನಿರ್ದೇಶನ ಬಂದಿದೆ. ಎಲ್ಲ ಆಸ್ತ್ತಿಗಳ ಡಿಜಿಟಲೈಸ್ ಆಗುವುದರ ಜತೆಗೆ ಆಧಾರ್ ಜೋಡಣೆ ಕಡ್ಡಾಯವಾಗಿ ಆಗಿದೆಯೇ ಎಂದು ಖಾತ್ರಿ ಪಡಿಸಲು ಸೂಚನೆ ಬಂದಿದೆ.
ಎಲ್ಲ ಭೂ ದಾಖಲೆ, ಮ್ಯುಟೇಶನ್, ಮಾರಾಟ ಹಾಗೂ ಖರೀದಿಯ ದಾಖಲೆಗಳು...ಒಟ್ಟಾರೆ 1950ರಿಂದ ಈಚೆಗೆ ಇಲ್ಲಿವರೆಗಿನ ಎಲ್ಲ ಸ್ಥಿರಾಸ್ತಿಗಳು ಅಂದರೆ ಕೃಷಿಭೂಮಿ, ಮನೆ ಇತ್ಯಾದಿ ದಾಖಲೆಗಳನ್ನು ಈ ವರ್ಷದ ಆಗಸ್ಟ್ ಹದಿನಾಲ್ಕರೊಳಗೆ ಆಧಾರ್ ಗೆ ಜೋಡಿಸುವಂತೆ ಗಡುವು ನೀಡಲಾಗಿದೆ.
ಯಾರಾದರೂ ಆಧಾರ್ ಜೋಡಣೆ ಮಾಡಲಿಲ್ಲ ಅಂದರೆ ಅಂಥವರ ವಿರುದ್ಧ ಬೇನಾಮಿ ವ್ಯವಹಾರ (ನಿಷೇಧ) ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಇನ್ನು ಈ ಬಗ್ಗೆ ರಾಜ್ಯ ಸರಕಾರದಿಂದ ಸಲಹೆಗಳಿದ್ದಲ್ಲಿ ನೀಡುವಂತೆ ಕೂಡ ತಿಳಿಸಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications